AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

Shah Rukh Khan: ಮಗ ಆರ್ಯನ್​ ಖಾನ್​ಗೆ ಬ್ಲಡ್​ ಟೆಸ್ಟ್​ ಮಾಡಿಸಿ, ಅದರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಗೌರಿ ಖಾನ್​ ತೀರ್ಮಾನಿಸಿದ್ದಾರೆ. ಪುತ್ರನ ಮಾನಸಿಕ ಆರೋಗ್ಯದ ಬಗ್ಗೆಯೂ ಅವರು ಕಾಳಜಿ ವಹಿಸುತ್ತಿದ್ದಾರೆ.

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?
ಆರ್ಯನ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Nov 02, 2021 | 8:33 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಸದ್ಯ ಜೈಲಿನಿಂದ ಹೊರಬಂದು ತಾತ್ಕಾಲಿಕ ರಿಲೀಫ್​ ಪಡೆದುಕೊಂಡಿದ್ದಾರೆ. ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿರುವ ಅವರಿಗೆ ಜಾಮೀನು ಕೊಡಿಸಲು ತಂದೆ ಶಾರುಖ್​ ಖಾನ್​, ತಾಯಿ ಗೌರಿ ಖಾನ್​ ಮಾಡಿದ ಸಾಹಸ ಅಷ್ಟಿಷ್ಟಲ್ಲ. ಕೊನೆಗೂ ಬೇಲ್​ ಪಡೆದ ಆರ್ಯನ್​ ಖಾನ್​ ಅ.30ರಂದು ತಮ್ಮ ನಿವಾಸ ‘ಮನ್ನತ್​’ಗೆ ಮರಳಿದರು. ಈಗ ಪುತ್ರನಿಗೆ ಗೌರಿ ಖಾನ್​ ಚೆನ್ನಾಗಿ ಆರೈಕೆ ಮಾಡುತ್ತಿದ್ದಾರೆ. ಅಚ್ಚರಿ ಏನೆಂದರೆ ಆರ್ಯನ್​ ಖಾನ್​ ಅವರ ರಕ್ತ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

ಡ್ರಗ್ಸ್​ ಸೇವನೆ ಆರೋಪವನ್ನು ಆರ್ಯನ್​ ಖಾನ್​ ಎದುರಿಸುತ್ತಿದ್ದಾರೆ. ಈ ನಡುವೆ ಗೌರಿ ಖಾನ್​ ಅವರು ಮಗನ ಬ್ಲಡ್​ ಟೆಸ್ಟ್​ ಮಾಡಿಸುತ್ತಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. 22 ದಿನಗಳ ಕಾಲ ಆರ್ಯನ್​ ಖಾನ್​ ಜೈಲಿನಲ್ಲಿ ಇದ್ದರು. ಅಷ್ಟೂ ದಿನಗಳ ಕಾಲ ಅವರು ಜೈಲಿನ ಆಹಾರವನ್ನೇ ಸೇವಿಸಿದ್ದರು. ಇದರಿಂದ ಅವರ ರೆಗ್ಯುಲರ್​ ಡಯೆಟ್​ಗೆ ತೊಂದರೆ ಆಗಿದೆ. ಹಾಗಾಗಿ ಮಗನಿಗೆ ಬ್ಲಡ್​ ಟೆಸ್ಟ್​ ಮಾಡಿಸಿ, ಅದರ ವರದಿ ಆಧರಿಸಿ ಸೂಕ್ತ ರೀತಿಯ ನ್ಯೂಟ್ರಿಶಿಯನ್​​ ಆಹಾರ ನೀಡಲು ಗೌರಿ ಖಾನ್​ ನಿರ್ಧರಿಸಿದ್ದಾರೆ ಎನ್ನುತ್ತಿವೆ ಮೂಲಗಳು.

ಹುಟ್ಟಿನಿಂದಲೂ ಸುಖದ ಸುಪ್ಪತ್ತಿಗೆಯಲ್ಲಿ ಬೆಳೆದವರು ಆರ್ಯನ್​ ಖಾನ್​. ಹಾಗಾಗಿ ಅವರಿಗೆ ಜೈಲಿನಲ್ಲಿ ಹೊಂದಿಕೊಳ್ಳಲು ಕಷ್ಟ ಆಗಿತ್ತು. ಜೈಲಿನ ಕಠಿಣ ವಾತಾವರಣವು ಅವರ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕೋರ್ಟ್​ ತೀರ್ಪು ನೀಡುವುದಕ್ಕೂ ಮುನ್ನವೇ ಒಂದು ವರ್ಗದ ಜನರು ಆರ್ಯನ್​ ಖಾನ್​ರನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಆರ್ಯನ್​ ಮನಸ್ಸಿಗೆ ಘಾಸಿ ಆಗಿದೆಯಂತೆ. ಆದ್ದರಿಂದ ಮಗನಿಗೆ ಆಪ್ತ ಸಮಾಲೋಚನೆ ಕೊಡಿಸಲು ಗೌರಿ ಖಾನ್​ ನಿರ್ಧರಿಸಿದ್ದಾರೆ. ಪುತ್ರನ ಮಾನಸಿಕ ಆರೋಗ್ಯದ ಬಗ್ಗೆ ಅವರು ಕಾಳಜಿ ವಹಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಶಾರುಖ್​ ಖಾನ್​-ಗೌರಿ ಖಾನ್​ ವಿವಾಹ ವಾರ್ಷಿಕೋತ್ಸವ (ಅ.25) ಇತ್ತು. ಆಗ ಆರ್ಯನ್​ ಜೈಲಿನಲ್ಲಿದ್ದರು. ಗೌರಿ ಖಾನ್​ ಜನ್ಮದಿನಕ್ಕೂ (ಅ.8) ಅವರ ಅನುಪಸ್ಥಿತಿ ಕಾಡಿತ್ತು. ಆದರೆ ಇಂದು (ನ.2) ಶಾರುಖ್ ಖಾನ್​ ಜನ್ಮದಿನ. ಈ ಖುಷಿಯ ಸಂದರ್ಭದಲ್ಲಿ ಆರ್ಯನ್​ ಖಾನ್​ ಜಾಮೀನು ಪಡೆದು ಬಂದಿರುವುದು ತಂದೆ-ತಾಯಿಗೆ ಖುಷಿ ನೀಡಿದೆ. ಹಾಗಾಗಿ ಇಡೀ ‘ಮನ್ನತ್​’ ಮನೆಯನ್ನು ದೀಪಾಲಂಕಾರದಿಂದ ಸಿಂಗರಿಸಲಾಗಿದೆ.

ಇದನ್ನೂ ಓದಿ:

Aryan Khan: ಆರ್ಯನ್​ಗೆ ಜಾಮೀನು: ಒಂದೇ ಮಾತಲ್ಲಿ ರಮ್ಯಾ ಪ್ರತಿಕ್ರಿಯೆ; ಖುಷಿಪಟ್ಟ ಸೆಲೆಬ್ರಿಟಿಗಳು ಯಾರೆಲ್ಲ?

Shah Rukh Khan: ಶಾರುಖ್​ಗೆ ಜನ್ಮದಿನದ ಸಂಭ್ರಮ​; ಮನ್ನತ್​ ಮೇಲೆ ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ ಕಿಂಗ್​ ಖಾನ್?

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ