AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

Shah Rukh Khan: ಮಗ ಆರ್ಯನ್​ ಖಾನ್​ಗೆ ಬ್ಲಡ್​ ಟೆಸ್ಟ್​ ಮಾಡಿಸಿ, ಅದರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಗೌರಿ ಖಾನ್​ ತೀರ್ಮಾನಿಸಿದ್ದಾರೆ. ಪುತ್ರನ ಮಾನಸಿಕ ಆರೋಗ್ಯದ ಬಗ್ಗೆಯೂ ಅವರು ಕಾಳಜಿ ವಹಿಸುತ್ತಿದ್ದಾರೆ.

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?
ಆರ್ಯನ್ ಖಾನ್
TV9 Web
| Edited By: |

Updated on: Nov 02, 2021 | 8:33 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಸದ್ಯ ಜೈಲಿನಿಂದ ಹೊರಬಂದು ತಾತ್ಕಾಲಿಕ ರಿಲೀಫ್​ ಪಡೆದುಕೊಂಡಿದ್ದಾರೆ. ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿರುವ ಅವರಿಗೆ ಜಾಮೀನು ಕೊಡಿಸಲು ತಂದೆ ಶಾರುಖ್​ ಖಾನ್​, ತಾಯಿ ಗೌರಿ ಖಾನ್​ ಮಾಡಿದ ಸಾಹಸ ಅಷ್ಟಿಷ್ಟಲ್ಲ. ಕೊನೆಗೂ ಬೇಲ್​ ಪಡೆದ ಆರ್ಯನ್​ ಖಾನ್​ ಅ.30ರಂದು ತಮ್ಮ ನಿವಾಸ ‘ಮನ್ನತ್​’ಗೆ ಮರಳಿದರು. ಈಗ ಪುತ್ರನಿಗೆ ಗೌರಿ ಖಾನ್​ ಚೆನ್ನಾಗಿ ಆರೈಕೆ ಮಾಡುತ್ತಿದ್ದಾರೆ. ಅಚ್ಚರಿ ಏನೆಂದರೆ ಆರ್ಯನ್​ ಖಾನ್​ ಅವರ ರಕ್ತ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

ಡ್ರಗ್ಸ್​ ಸೇವನೆ ಆರೋಪವನ್ನು ಆರ್ಯನ್​ ಖಾನ್​ ಎದುರಿಸುತ್ತಿದ್ದಾರೆ. ಈ ನಡುವೆ ಗೌರಿ ಖಾನ್​ ಅವರು ಮಗನ ಬ್ಲಡ್​ ಟೆಸ್ಟ್​ ಮಾಡಿಸುತ್ತಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. 22 ದಿನಗಳ ಕಾಲ ಆರ್ಯನ್​ ಖಾನ್​ ಜೈಲಿನಲ್ಲಿ ಇದ್ದರು. ಅಷ್ಟೂ ದಿನಗಳ ಕಾಲ ಅವರು ಜೈಲಿನ ಆಹಾರವನ್ನೇ ಸೇವಿಸಿದ್ದರು. ಇದರಿಂದ ಅವರ ರೆಗ್ಯುಲರ್​ ಡಯೆಟ್​ಗೆ ತೊಂದರೆ ಆಗಿದೆ. ಹಾಗಾಗಿ ಮಗನಿಗೆ ಬ್ಲಡ್​ ಟೆಸ್ಟ್​ ಮಾಡಿಸಿ, ಅದರ ವರದಿ ಆಧರಿಸಿ ಸೂಕ್ತ ರೀತಿಯ ನ್ಯೂಟ್ರಿಶಿಯನ್​​ ಆಹಾರ ನೀಡಲು ಗೌರಿ ಖಾನ್​ ನಿರ್ಧರಿಸಿದ್ದಾರೆ ಎನ್ನುತ್ತಿವೆ ಮೂಲಗಳು.

ಹುಟ್ಟಿನಿಂದಲೂ ಸುಖದ ಸುಪ್ಪತ್ತಿಗೆಯಲ್ಲಿ ಬೆಳೆದವರು ಆರ್ಯನ್​ ಖಾನ್​. ಹಾಗಾಗಿ ಅವರಿಗೆ ಜೈಲಿನಲ್ಲಿ ಹೊಂದಿಕೊಳ್ಳಲು ಕಷ್ಟ ಆಗಿತ್ತು. ಜೈಲಿನ ಕಠಿಣ ವಾತಾವರಣವು ಅವರ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕೋರ್ಟ್​ ತೀರ್ಪು ನೀಡುವುದಕ್ಕೂ ಮುನ್ನವೇ ಒಂದು ವರ್ಗದ ಜನರು ಆರ್ಯನ್​ ಖಾನ್​ರನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಆರ್ಯನ್​ ಮನಸ್ಸಿಗೆ ಘಾಸಿ ಆಗಿದೆಯಂತೆ. ಆದ್ದರಿಂದ ಮಗನಿಗೆ ಆಪ್ತ ಸಮಾಲೋಚನೆ ಕೊಡಿಸಲು ಗೌರಿ ಖಾನ್​ ನಿರ್ಧರಿಸಿದ್ದಾರೆ. ಪುತ್ರನ ಮಾನಸಿಕ ಆರೋಗ್ಯದ ಬಗ್ಗೆ ಅವರು ಕಾಳಜಿ ವಹಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಶಾರುಖ್​ ಖಾನ್​-ಗೌರಿ ಖಾನ್​ ವಿವಾಹ ವಾರ್ಷಿಕೋತ್ಸವ (ಅ.25) ಇತ್ತು. ಆಗ ಆರ್ಯನ್​ ಜೈಲಿನಲ್ಲಿದ್ದರು. ಗೌರಿ ಖಾನ್​ ಜನ್ಮದಿನಕ್ಕೂ (ಅ.8) ಅವರ ಅನುಪಸ್ಥಿತಿ ಕಾಡಿತ್ತು. ಆದರೆ ಇಂದು (ನ.2) ಶಾರುಖ್ ಖಾನ್​ ಜನ್ಮದಿನ. ಈ ಖುಷಿಯ ಸಂದರ್ಭದಲ್ಲಿ ಆರ್ಯನ್​ ಖಾನ್​ ಜಾಮೀನು ಪಡೆದು ಬಂದಿರುವುದು ತಂದೆ-ತಾಯಿಗೆ ಖುಷಿ ನೀಡಿದೆ. ಹಾಗಾಗಿ ಇಡೀ ‘ಮನ್ನತ್​’ ಮನೆಯನ್ನು ದೀಪಾಲಂಕಾರದಿಂದ ಸಿಂಗರಿಸಲಾಗಿದೆ.

ಇದನ್ನೂ ಓದಿ:

Aryan Khan: ಆರ್ಯನ್​ಗೆ ಜಾಮೀನು: ಒಂದೇ ಮಾತಲ್ಲಿ ರಮ್ಯಾ ಪ್ರತಿಕ್ರಿಯೆ; ಖುಷಿಪಟ್ಟ ಸೆಲೆಬ್ರಿಟಿಗಳು ಯಾರೆಲ್ಲ?

Shah Rukh Khan: ಶಾರುಖ್​ಗೆ ಜನ್ಮದಿನದ ಸಂಭ್ರಮ​; ಮನ್ನತ್​ ಮೇಲೆ ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ ಕಿಂಗ್​ ಖಾನ್?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ