AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್ ಖಾನ್‌ ಹೆಸರನ್ನು ಅಭಿನವ್ ಎಂದು ಬದಲಾಯಿಸಿದ್ದ ಪತ್ನಿ ಗೌರಿ ಖಾನ್​; ಕಾರಣ ಏನು?

Shah Rukh Khan Birthday: ಮದುವೆಯಾಗಿ ಹಲವು ವರ್ಷಗಳು ಕಳೆದ ಬಳಿಕ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗೌರಿ ಖಾನ್​ ಈ ಬಗ್ಗೆ ಮಾತಾಡಿದ್ದರು. ‘ಈಗ ಆ ದಿನಗಳನ್ನು ನೆನಪಿಸಿಕೊಂಡರೆ ಬಹಳ ಹುಡುಗಾಟಿಕೆ ಅನಿಸುತ್ತದೆ’ ಎಂದು ಅವರು ಹೇಳಿದ್ದರು. ಮದುವೆ ನಂತರ ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಈ ದಂಪತಿ ಪಾಲಿಸುತ್ತಿದ್ದಾರೆ.

Shah Rukh Khan: ಶಾರುಖ್ ಖಾನ್‌ ಹೆಸರನ್ನು ಅಭಿನವ್ ಎಂದು ಬದಲಾಯಿಸಿದ್ದ ಪತ್ನಿ ಗೌರಿ ಖಾನ್​; ಕಾರಣ ಏನು?
ಗೌರಿ ಖಾನ್​, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Nov 02, 2023 | 1:10 PM

Share

ಭಾರತೀಯ ಚಿತ್ರರಂಗದಲ್ಲಿ ನಟ ಶಾರುಖ್ ಖಾನ್ (Shah Rukh Khan) ಅವರು ಮಾಡಿರುವ ಸಾಧನೆ ಅಪಾರ. ಯಾವುದೇ ಗಾಢ್​ ಫಾದರ್​ ಇಲ್ಲದೇ ಬಂದ ಅವರು ನಂತರ ದೊಡ್ಡ ಮಟ್ಟದ ಖ್ಯಾತಿ ಗಳಿಸಿದರು. ಈಗ ಶಾರುಖ್​ ಖಾನ್​ ಅವರಿಗೆ ಹೊಸದಾಗಿ ಯಾವುದೇ ಪರಿಚಯ ಬೇಕಿಲ್ಲ. ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ ಬೇರೆ ಬೇರೆ ದೇಶಗಳಲ್ಲಿ ಅವರಿಗೆ ಫ್ಯಾನ್ಸ್ ಇದ್ದಾರೆ. ಬಾಲಿವುಡ್​ನಲ್ಲಿ ಬಹುಬೇಡಿಕೆಯ ಹೀರೋ ಆಗಿ ಅವರು ನೆಲೆ ಕಂಡುಕೊಂಡಿದ್ದಾರೆ. ಇಂದು (ನವೆಂಬರ್​ 2) ಅವರಿಗೆ ಜನ್ಮದಿನದ (Shah Rukh Khan Birthday) ಸಂಭ್ರಮ. ಆ ಪ್ರಯುಕ್ತ ಒಂದಷ್ಟು ಹಳೇ ಘಟನೆಗಳನ್ನು ಅಭಿಮಾನಿಗಳು ಮೆಲುಕು ಹಾಕುತ್ತಿದ್ದಾರೆ. ಆಸಕ್ತಿಕರ ವಿಚಾರವೇನೆಂದರೆ ಶಾರುಖ್ ಖಾನ್​ಗೆ ಅಭಿನವ್ ಎಂಬ ಮತ್ತೊಂದು ಹೆಸರು ಸಹ ಇದೆ. ಅವರಿಗೆ ಅಭಿನವ್​ ಎಂದು ನಾಮಕರಣ ಮಾಡಿದ್ದು ಅವರ ಹೆಂಡತಿ ಗೌರಿ ಖಾನ್ (Gauri Khan)!

ಶಾರುಖ್​ ಖಾನ್​ಗೆ ಅಭಿನವ್​ ಎಂದು ಹೆಸರು ಇಟ್ಟಿದ್ದಕ್ಕೆ ಕಾರಣ ಏನು? ಇದಕ್ಕೆ ಉತ್ತರ ಬೇಕು ಎಂದರೆ 32 ವರ್ಷ ಹಿಂದಿನ ಘಟನೆ ಕೆದಕಬೇಕು. ಗೌರಿ ಮತ್ತು ಶಾರುಖ್​ ಅವರದ್ದು ಪ್ರೇಮ ವಿವಾಹ. 1991ರಲ್ಲಿ ಅವರಿಬ್ಬರು ಮದುವೆಯಾದರು. ಆಗ ಶಾರುಖ್​ ಖಾನ್​ ಇನ್ನೂ ಫೇಮಸ್​ ಆಗಿರಲಿಲ್ಲ. ಗೌರಿ ಮತ್ತು ಶಾರುಖ್​ ಖಾನ್​ ಅವರದ್ದು ಅಂತರ್​ ಧರ್ಮೀಯ ವಿವಾಹ. ಆ ಕಾರಣದಿಂದ ಈ ಮದುವೆಗೆ ಗೌರಿ ಮನೆಯವರು ಒಪ್ಪಿಕೊಳ್ಳುವುದು ಕಷ್ಟವಾಗಿತ್ತು. ಹೇಗೋ ಕಷ್ಟಪಟ್ಟು ಫ್ಯಾಮಿಲಿಯವರನ್ನು ಒಪ್ಪಿಸಿದ ಬಳಿಕ ಗೌರಿ ಮತ್ತು ಶಾರುಖ್ ಮದುವೆ ನಡೆಯಿತು. ಆಗಲೇ ಹೆಸರು ಬದಲಾಯಿಸುವ ಪ್ರಸಂಗ ನಡೆಯಿತು.

ಇದನ್ನೂ ಓದಿ: ಮಾಸ್​ ಬಿಟ್ಟು ಕ್ಲಾಸ್ ಆದ ಶಾರುಖ್​ ಖಾನ್; ಬರ್ತ್​ಡೇಗೆ ‘ಡಂಕಿ’ ಸಿನಿಮಾ ಟೀಸರ್ ರಿಲೀಸ್

ಗೌರಿ ಖಾನ್​ ಕುಟುಂಬದ ಸದಸ್ಯರಿಗೆ ಶಾರುಖ್ ಕೂಡ ಹಿಂದೂ ಧರ್ಮದವರು ಎಂಬ ಫೀಲಿಂಗ್ ಬರಬೇಕು ಎನ್ನುವ ಕಾರಣಕ್ಕೆ ಅಭಿನವ್ ಎಂದು ಹೆಸರು ಇಡಲು ಗೌರಿ ಖಾನ್ ಅವರು ನಿರ್ಧರಿಸಿದ್ದರು. ಮದುವೆಯಾಗಿ ಹಲವು ವರ್ಷಗಳು ಕಳೆದ ಬಳಿಕ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗೌರಿ ಖಾನ್​ ಅವರು ಈ ಬಗ್ಗೆ ಮಾತನಾಡಿದ್ದರು. ‘ಈಗ ಆ ದಿನಗಳನ್ನು ನೆನಪಿಸಿಕೊಂಡರೆ ಬಹಳ ಹುಡುಗಾಟಿಕೆ ಅನಿಸುತ್ತದೆ’ ಎಂದು ಅವರು ಹೇಳಿದ್ದರು. ಮದುವೆ ಬಳಿಕ ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಈ ದಂಪತಿ ಪಾಲಿಸುತ್ತಿದ್ದಾರೆ.

ಇದನ್ನೂ ಓದಿ: ಶಾರುಖ್ ಖಾನ್ ಜನ್ಮದಿನ: 6,300 ಕೋಟಿ ರೂಪಾಯಿ ಒಡೆಯನಿಗೆ ಹಣ ಹೇಗೆಲ್ಲ ಬರುತ್ತೆ ಗೊತ್ತಾ?

ಗೌರಿ ಖಾನ್​ ಅವರು ಅಭಿನವ್​ ಎಂದು ನಾಮಕರಣ ಮಾಡಿದ್ದೇನೋ ನಿಜ. ಆದರೆ ಚಿತ್ರರಂಗದಲ್ಲಿ ಶಾರುಖ್​ ಖಾನ್​ ಎಂಬ ಹೆಸರಿನಿಂದಲೇ ಅವರು ಗುರುತಿಸಿಕೊಂಡರು. ಹಾಗಾಗಿ ಅಭಿನವ್​ ಎಂಬ ಹೆಸರು ಹೆಚ್ಚು ಬಳಕೆಗೆ ಬರಲಿಲ್ಲ. ಬಾಲಿವುಡ್​ನಲ್ಲಿ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ಶಾರುಖ್ ಖಾನ್ ನೀಡಿದರು. ವಿಶ್ವಾದ್ಯಂತ ಅವರಿಗೆ ಖ್ಯಾತಿ ಸಿಕ್ಕಿತು. ಈಗ ಅವರಿಗೆ 58 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಸಖತ್​ ಬೇಡಿಕೆ ಉಳಿಸಿಕೊಂಡಿದ್ದಾರೆ. 2023ರಲ್ಲಿ ಅವರು ನಟಿಸಿದ ‘ಪಠಾಣ್​’ ಮತ್ತು ‘ಜವಾನ್​’ ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ‘ಡಂಕಿ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು