AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gauri Khan: ‘ಶಾರುಖ್​ಗಿಂತ ಆರ್ಯನ್​ ಖಾನ್​ ಹೆಚ್ಚು ಬ್ಯುಸಿ, ಅವನ ಡೇಟ್ಸ್​ ಸಿಗೋದೇ ಕಷ್ಟ​’: ಗೌರಿ ಹೇಳಿದ ಅಚ್ಚರಿ ವಿಷಯ

Aryan Khan: ಆರ್ಯನ್​ ಖಾನ್​ ಅವರಿಗೆ ನಟನೆಗಿಂತಲೂ ಹೆಚ್ಚಾಗಿ ನಿರ್ದೇಶನದಲ್ಲಿ ಆಸಕ್ತಿ ಇದೆ. ಬಿಸ್ನೆಸ್​ ಬಗ್ಗೆಯೂ ಅವರು ಇಂಟರೆಸ್ಟ್​ ತೋರಿಸಿದ್ದಾರೆ. ಈಗ ತಂದೆಗಿಂತಲೂ ಅವರು ಬ್ಯುಸಿ ಆಗಿದ್ದಾರೆ.

Gauri Khan: ‘ಶಾರುಖ್​ಗಿಂತ ಆರ್ಯನ್​ ಖಾನ್​ ಹೆಚ್ಚು ಬ್ಯುಸಿ, ಅವನ ಡೇಟ್ಸ್​ ಸಿಗೋದೇ ಕಷ್ಟ​’: ಗೌರಿ ಹೇಳಿದ ಅಚ್ಚರಿ ವಿಷಯ
ಶಾರುಖ್ ಖಾನ್ ಕುಟುಂಬ
ಮದನ್​ ಕುಮಾರ್​
|

Updated on: May 15, 2023 | 10:54 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ಪತ್ನಿ ಗೌರಿ ಖಾನ್​ ಅವರು ತಮ್ಮ ಹೊಸ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಅವರು ತಮ್ಮ ಕುಟುಂಬದ ಬಗೆಗಿನ ಒಂದಷ್ಟು ವಿಷಯಗಳ ಕುರಿತು ಮಾತನಾಡಿದ್ದಾರೆ. ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ದಂಪತಿಯ ಮೊದಲ ಪುತ್ರ ಆರ್ಯನ್​ ಖಾನ್​ (Aryan Khan) ಈಗ ಸಿನಿಮಾ ಮತ್ತು ಬಿಸ್ನೆಸ್​ ಕಡೆಗೆ ಗಮನ ಹರಿಸಿದ್ದಾರೆ. ಈ ಹಿಂದೆ ಡ್ರಗ್ಸ್​ ಪಾರ್ಟಿ ಆರೋಪದಲ್ಲಿ ಜೈಲು ಸೇರಿದ್ದ ಅವರು ನಂತರ ಆರೋಪಮುಕ್ತರಾದರು. ಈಗ ಅವರ ಬಗ್ಗೆ ಗೌರಿ ಖಾನ್​ ಮಾತನಾಡಿದ್ದಾರೆ. ಅಚ್ಚರಿ ಎಂದರೆ ಶಾರುಖ್​ ಖಾನ್​ಗಿಂತಲೂ ಆರ್ಯನ್​ ಖಾನ್ ಹೆಚ್ಚು ಬ್ಯುಸಿ ಆಗಿದ್ದಾರಂತೆ. ಅವರ ಡೇಟ್ಸ್​ ಪಡೆಯುವುದೇ ಕಷ್ಟ ಎಂದು ಗೌರಿ ಖಾನ್​ (Gauri Khan) ಹೇಳಿದ್ದಾರೆ.

ಇಂಟೀರಿಯರ್​ ಡಿಸೈನ್​ ಕುರಿತು ಗೌರಿ ಖಾನ್​ ಅವರು ಒಂದು ಪುಸ್ತಕ ಬರೆದಿದ್ದಾರೆ. ಆ ಪುಸ್ತಕದಲ್ಲಿ ಅವರ ಫ್ಯಾಮಿಲಿ ಫೋಟೋ ಇದೆ. ಅದನ್ನು ಕ್ಲಿಕ್ಕಿಸುವ ಸಲುವಾಗಿ ಕುಟುಂಬದ ಎಲ್ಲರೂ ಬಿಡುವು ಮಾಡಿಕೊಳ್ಳಬೇಕಿತ್ತು. ಶಾರುಖ್​ ಖಾನ್​ ಹಲವು ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದರೂ ಕೂಡ ಫ್ಯಾಮಿಲಿ ಫೋಟೋಶೂಟ್​ಗಾಗಿ ಅವರ ಡೇಟ್ಸ್​ ಸುಲಭವಾಗಿ ಸಿಕ್ಕಿದೆ. ಆದರೆ ಆರ್ಯನ್​ ಖಾನ್​ ಅವರ ಡೇಟ್ಸ್​ ಪಡೆಯುವುದು ಗೌರಿ ಖಾನ್​ಗೆ ಕಷ್ಟವಾಯಿತು. ಹಾಗಾಗಿ ಶಾರುಖ್​ ಖಾನ್​ಗಿಂತಲೂ ಆರ್ಯನ್​ ಖಾನ್​ ಹೆಚ್ಚು ಬ್ಯುಸಿ ಆಗಿದ್ದಾರೆ ಎಂದು ಗೌರಿ ಹೇಳಿದ್ದಾರೆ.

ಇದನ್ನೂ ಓದಿ
Image
₹25 ಕೋಟಿ ನೀಡದಿದ್ದರೆ ಆರ್ಯನ್ ಖಾನ್​​ನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ: ಅಧಿಕಾರಿ ವಿರುದ್ಧ ಸಿಬಿಐ ಕೇಸ್
Image
Sameer Wankhede: ದೇಶಭಕ್ತರಾಗಿದ್ದಕ್ಕಾಗಿ ಈ ಶಿಕ್ಷೆ, ಆರ್ಯನ್ ಖಾನ್​​​ನ್ನು ಬಂಧಿಸಿದ ಸಮೀರ್ ವಾಂಖೆಡೆ ಮೇಲೆ ಸಿಬಿಐ ದಾಳಿ
Image
ಫ್ಯಾಮಿಲಿ ಜೊತೆ ಖುಷಿಖುಷಿಯಾಗಿ ಫೋಟೋಶೂಟ್​ ಮಾಡಿಸಿದ ಶಾರುಖ್​ ಖಾನ್​
Image
Aryan Khan: 25ರ ಪ್ರಾಯದ ಆರ್ಯನ್​ ಖಾನ್​ ಜತೆ 30ರ ನೋರಾ ಫತೇಹಿ ಡೇಟಿಂಗ್​? ಎಲ್ಲೆಲ್ಲೂ ಇವರದ್ದೇ ಗುಸುಗುಸು
View this post on Instagram

A post shared by Gauri Khan (@gaurikhan)

ಬಾಲಿವುಡ್​ನಲ್ಲಿ ಅನೇಕ ಸ್ಟಾರ್​ ಕಿಡ್​ಗಳು ತೆರೆಮೇಲೆ ಮಿಂಚುತ್ತಿದ್ದಾರೆ. ಆದರೆ ಆರ್ಯನ್​ ಖಾನ್​ ಈ ವಿಚಾರದಲ್ಲಿ ಕೊಂಚ ಭಿನ್ನ. ನಟನೆಗಿಂತಲೂ ಹೆಚ್ಚಾಗಿ ಬೇರೆ ವಿಚಾರಗಳಲ್ಲಿ ಅವರಿಗೆ ಆಸಕ್ತಿ ಇದೆ. ನಿರ್ದೇಶನದಲ್ಲಿ ಅವರು ವೃತ್ತಿಜೀವನ ಕಟ್ಟಿಕೊಳ್ಳಲು ನಿರ್ಧರಿಸಿದ್ದಾರೆ. ಇನ್ನು, ಬಿಸ್ನೆಸ್​ ಬಗ್ಗೆಯೂ ಅವರು ಇಂಟರೆಸ್ಟ್​ ತೋರಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಆರ್ಯನ್​ ಖಾನ್​ ಅವರು ಬಟ್ಟೆ ವ್ಯಾಪಾರ ಆರಂಭಿದರು. ಅಂದರೆ, ತಮ್ಮದೇ ಹೊಸ ಬ್ರ್ಯಾಂಡ್​ನ ಕಾಸ್ಟ್ಯೂಮ್​ಗಳನ್ನು ಅವರು ಮಾರುಕಟ್ಟೆಗೆ ಪರಿಚಯಿಸಿದರು. ಆ ಕ್ಷೇತ್ರದಲ್ಲಿ ಅವರಿಗೆ ಭರ್ಜರಿ ಲಾಭ ಆಗುತ್ತಿದೆ.

Shah Rukh Khan: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ

ಸಲ್ಮಾನ್​ ಖಾನ್​, ದೀಪಿಕಾ ಪಡುಕೋಣೆ, ಆಲಿಯಾ ಭಟ್​, ಹೃತಿಕ್​ ರೋಷನ್​, ಸೈಫ್​ ಅಲಿ ಖಾನ್​ ಮುಂತಾದ ಸೆಲೆಬ್ರಿಟಿಗಳು ತಮ್ಮ ಬಟ್ಟೆ ಬ್ರ್ಯಾಂಡ್​ ಹೊಂದಿದ್ದಾರೆ. ಅದಕ್ಕೆ ಆರ್ಯನ್​ ಖಾನ್​ ಕೂಡ ಸೇರ್ಪಡೆ ಆಗಿದ್ದಾರೆ. ಕೇವಲ ಆನ್​ಲೈನ್​ನಲ್ಲಿ ಮಾತ್ರ ಅವರು ಮಾರಾಟ ಮಾಡುತ್ತಿದ್ದಾರೆ. ಆರ್ಯನ್​ ಖಾನ್​ ಅವರು ಮಾರಾಟ ಮಾಡುತ್ತಿರುವ ಬಟ್ಟೆಗಳ ಬೆಲೆ ಸಿಕ್ಕಾಪಟ್ಟೆ ದುಬಾರಿ ಆಗಿವೆ. ಒಂದು ಜಾಕೆಟ್​ನ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ. ಟಿ-ಶರ್ಟ್​ ಬೆಲೆ 24 ಸಾವಿರ ರೂಪಾಯಿ. ಹಾಗಿದ್ದರೂ ಕೂಡ ಜನರು ಇದನ್ನು ಮುಗಿಬಿದ್ದು ಖರೀದಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ