AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ ಕುಂದ್ರಾ ದಾರಿ ತಪ್ಪಲು ಕಾರಣವಾದ ಈಕೆಗೆ ಬಟ್ಟೆ ಬಿಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ’: ಗೆಹನಾ ಆರೋಪ

‘2012ರಿಂದಲೇ ಶೆರ್ಲಿನ್​ ಚೋಪ್ರಾ ಇಂಥ ಸಿನಿಮಾ ಮಾಡುತ್ತಿದ್ದಾಳೆ. ನೀಲಿ ಚಿತ್ರ ದಂಧೆಗೆ ರಾಜ್​ ಕುಂದ್ರಾ ಅವರನ್ನು ಎಳೆದು ತಂದಿದ್ದೇ ಈಕೆ’ ಎಂದು ನಟಿ ಗೆಹನಾ ವಸಿಷ್ಠ್​ ಆರೋಪಿಸಿದ್ದಾರೆ.

‘ರಾಜ್​ ಕುಂದ್ರಾ ದಾರಿ ತಪ್ಪಲು ಕಾರಣವಾದ ಈಕೆಗೆ ಬಟ್ಟೆ ಬಿಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ’: ಗೆಹನಾ ಆರೋಪ
ಗೆಹನಾ ವಸಿಷ್ಠ್, ಶೆರ್ಲಿನ್ ಚೋಪ್ರಾ, ರಾಜ್ ಕುಂದ್ರಾ,
TV9 Web
| Edited By: |

Updated on: Sep 28, 2021 | 4:10 PM

Share

ಉದ್ಯಮಿ ರಾಜ್​ ಕುಂದ್ರಾ ಅವರು ನೀಲಿ ಚಿತ್ರ ನಿರ್ಮಾಣ ದಂಧೆಯ ಆರೋಪ ಹೊತ್ತು ಜೈಲು ಸೇರಿದ್ದರು. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಹಾಗಂತ ಅವರ ಕುರಿತಾದ ಸುದ್ದಿಗಳು ನಿಂತಿಲ್ಲ. ಅಶ್ಲೀಲ ಸಿನಿಮಾ ಲೋಕದಲ್ಲಿ ಕುತ್ಯಾತಿ ಪಡೆದಿರುವ ನಟಿಯರಾದ ಶೆರ್ಲಿನ್​ ಚೋಪ್ರಾ ಮತ್ತು ಗೆಹನಾ ವಸಿಷ್ಠ್​ ಅವರು ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದಾರೆ. ಈ ನಡುವೆ ರಾಜ್​ ಕುಂದ್ರಾ ಹೆಸರನ್ನು ಎಳೆದು ತಂದಿದ್ದಾರೆ. ರಾಜ್​ ಕುಂದ್ರಾ ಮೇಲೆ ಶೆರ್ಲಿನ್​ ಚೋಪ್ರಾ ಹಲವು ಆರೋಪಗಳನ್ನು ಮಾಡಿದ್ದರು. ಅದಕ್ಕೆಲ್ಲ ಈಗ ಗೆಹನಾ ವಸಿಷ್ಠ್​ ತಿರುಗೇಟು ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಬಯಲಿಗೆ ಎಳೆದಿದ್ದಾರೆ.

‘2012ರಿಂದಲೇ ಶೆರ್ಲಿನ್​ ಚೋಪ್ರಾ ಇಂಥ ಸಿನಿಮಾ ಮಾಡುತ್ತಿದ್ದಾಳೆ. ನೀಲಿ ಚಿತ್ರ ದಂಧೆಗೆ ರಾಜ್​ ಕುಂದ್ರಾ ಅವರನ್ನು ಎಳೆದು ತಂದಿದ್ದೇ ಈಕೆ. ಕೇವಲ ಎರಡೂವರೆ ವರ್ಷದ ಹಿಂದೆ ಅವರಿಬ್ಬರಿಗೂ ಪರಸ್ಪರ ಪರಿಚಯ ಆಗಿತ್ತು. ಇಂದು ಶೆರ್ಲಿನ್ ಏನೇ ಗಳಿಸಿದ್ದರೂ ಕೂಡ ಅದು ರಾಜ್​ ಕುಂದ್ರಾ ಕಾರಣದಿಂದ. ಹಾಗಾಗಿ ಅವರಿಗೆ ಆಕೆ ಋಣಿಯಾಗಿ ಇರಬೇಕು’ ಎಂದು ಗೆಹನಾ ವಸಿಷ್ಠ್​ ಹೇಳಿದ್ದಾರೆ.

‘ಶೆರ್ಲಿನ್​ಗೆ ಮಾಡಲು ಏನೂ ಕೆಲಸ ಇಲ್ಲ. ಸದಾ ಸುದ್ದಿಯಲ್ಲಿ ಇರಬೇಕು ಎಂಬ ಕಾರಣಕ್ಕೆ ಇದನ್ನೆಲ್ಲ ಮಾಡುತ್ತಿದ್ದಾಳೆ. ತಾನು ತಪ್ಪಿಸಿಕೊಳ್ಳಲು ಇಷ್ಟೆಲ್ಲ ಡ್ರಾಮಾ ಮಾಡುತ್ತಿದ್ದಾಳೆ. ಈಗ ಶಿಲ್ಪಾ ಶೆಟ್ಟಿಯನ್ನು ಟಾರ್ಗೆಟ್​ ಮಾಡಿದ್ದಾಳೆ. ಅದಕ್ಕೆಲ್ಲ ಶಿಲ್ಪಾ ಗಮನ ಕೊಡುತ್ತಿಲ್ಲ’ ಎಂದು ಗೆಹನಾ ವಸಿಷ್ಠ್​ ಹೇಳಿದ್ದಾರೆ.

‘ಶೆರ್ಲಿನ್​ಗೆ ಬೆತ್ತಲಾಗುವುದು ಬಿಟ್ಟು ಬೇರೇನೋ ಗೊತ್ತಿಲ್ಲ. ನೀಲಿ ಚಿತ್ರದ ದಂಧೆಗೆ ರಾಜ್​ ಕುಂದ್ರಾ ಎಂಟ್ರಿ ಪಡೆಯಲು ಆಕೆಯೇ ಕಾರಣ. ಈಗ ರಾಜ್​ ಕುಂದ್ರಾ ವಿರುದ್ಧವಾಗಿ ಮಾತನಾಡಿದರೆ ಮಾತ್ರ ಜನರ ಗಮನವನ್ನು ತನ್ನತ್ತ ಸೆಳೆದುಕೊಳ್ಳಬಹುದು ಎಂಬುದು ಆಕೆಗೆ ಗೊತ್ತಾಗಿದೆ. ಅದಕ್ಕೆ ಹೀಗೆಲ್ಲ ಮಾಡುತ್ತಿದ್ದಾಳೆ. ಆಕೆ ಎಷ್ಟೇ ಕೂಗಾಡಿದರೂ ಕೂಡ ಶಿಲ್ಪಾ ಶೆಟ್ಟಿ ಗಮನ ಕೊಡುತ್ತಿಲ್ಲ. ಅವರ ಪಾಲಿಗೆ ಆಕೆ ಲೆಕ್ಕಕ್ಕೇ ಇಲ್ಲ’ ಎಂದು ಗೆಹನಾ ವಸಿಷ್ಠ್​ ಹೇಳಿದ್ದಾರೆ. ಈ ಮಾತುಗಳಿಗೆ ಶೆರ್ಲಿನ್​ ಚೋಪ್ರಾ ಯಾವ ರೀತಿ ತಿರುಗೇಟು ನೀಡುತ್ತಾರೆ ಎಂಬ ಕೌತುಕ ಈಗ ನಿರ್ಮಾಣ ಆಗಿದೆ.

ಇದನ್ನೂ ಓದಿ:

ಕೇಸ್​ ಮೇಲೆ ಕೇಸ್​ ಬಿದ್ರೂ ಕಮ್ಮಿ ಆಗಿಲ್ಲ ಗೆಹನಾ ಮಾದಕತೆ; ನೀಲಿ ಚಿತ್ರ ದಂಧೆ ಆರೋಪಿಯ ಹೊಸ ಫೋಟೋಶೂಟ್​

ರಾಜ್​ ಕುಂದ್ರಾ ಜಾಮೀನು ಸುದ್ದಿ ಕೇಳಿ ಶಿಲ್ಪಾ ಶೆಟ್ಟಿಗೆ ಖುಷಿಯೋ ದುಃಖವೋ? ಹೀಗಿತ್ತು ನೋಡಿ ಮೊದಲ ಪ್ರತಿಕ್ರಿಯೆ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!