AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ

ಜೆನಿಲಿಯಾಗೆ ಕೆಲವರು ಓವರ್​ ಆ್ಯಕ್ಟಿಂಗ್​ ಆಂಟಿ, ನಾಚಿಕೆ ಆಗಬೆಕು ನಿಮಗೆ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ. ಅಷ್ಟೇ ಅಲ್ಲ ನಿಮಗೆ ವಯಸ್ಸಾಗಿದೆ ಎಂದು ಅವರಿಗೆ ಹೇಳಲಾಗಿತ್ತು.

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ
ಜೆನಿಲಿಯಾ-ರಿತೇಶ್​
TV9 Web
| Edited By: |

Updated on: Sep 29, 2021 | 6:00 PM

Share

ನಟಿ ಜೆನೆಲಿಯಾ ಡಿಸೋಜಾ ಬಾಲಿವುಡ್​ ಮಾತ್ರವಲ್ಲ ದಕ್ಷಿಣ ಭಾರತದಲ್ಲೂ ನಟಿಸಿದ್ದಾರೆ. ಅವರು ಸದ್ಯ, ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಪತಿ ರಿತೇಶ್​​ ದೇಶ್​ಮುಖ್​ ಜತೆ ಫನ್ನಿ ವಿಡಿಯೋಗಳನ್ನು ಮಾಡಿ ಪೋಸ್ಟ್​ ಮಾಡುತ್ತಾ ಇರುತ್ತಾರೆ. ಇದು ಅನೇಕರಿಗೆ ಇಷ್ಟವಾಗಿದೆ. ಆದರೆ, ಕೆಲವರಿಗೆ ಇದು ಓವರ್ ಆ್ಯಕ್ಟಿಂಗ್​ ಅನಿಸಿದೆ. ಈ ಬಗ್ಗೆ ಕೆಲವರು ಜೆನಿಲಿಯಾ ಸೋಶಿಯಲ್​ ಮೀಡಿಯಾ ಖಾತೆಯಲ್ಲೇ ಕಮೆಂಟ್​ ಹಾಕಿದ್ದಾರೆ. ಇದಕ್ಕೆ ಜೆನಿಲಿಯಾ ಉತ್ತರ ನೀಡಿದ್ದಾರೆ.

ಜೆನಿಲಿಯಾಗೆ ಕೆಲವರು ಓವರ್​ ಆ್ಯಕ್ಟಿಂಗ್​ ಆಂಟಿ, ನಾಚಿಕೆ ಆಗಬೆಕು ನಿಮಗೆ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ. ಅಷ್ಟೇ ಅಲ್ಲ ನಿಮಗೆ ವಯಸ್ಸಾಗಿದೆ. ಇಬ್ಬರು ಮಕ್ಕಳಿದ್ದಾರೆ. ನಿಮ್ಮ ಅವತಾರ ನೋಡಿ ಮಕ್ಕಳು ಕೂಡ ಶಾಕ್​ ಆಗಬಹುದು. ನಾವು ಕೂಡ ಈ ರೀತಿ ಮಾಡಲ್ಲ’ ಎಂದು ಜೆನಿಲಿಯಾಗೆ ಅಭಿಮಾನಿಯೋರ್ವ ಕಮೆಂಟ್​ ಮಾಡಿದ್ದ.

ಜೆನಿಲಿಯಾ ಸಾಕಷ್ಟು ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿ ತೆರಳುತ್ತಿದ್ದಾರೆ. ಇತ್ತೀಚೆಗೆ ಅವರು ಶೋ ಒಂದಕ್ಕೆ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಂದ ಬಂದ ಕಮೆಂಟ್​ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಎಲ್ಲರೂ ಜೆನಿಲಿಯಾ ಸಿಟ್ಟಾಗುತ್ತಾರೆ, ಖಡಕ್​ ಆಗಿ ಉತ್ತರಿಸುತ್ತಾರೆ ಎಂದೇ ಭಾವಿಸಿದ್ದರು. ಆದರೆ, ಅವರು ಹೇಳಿದ ರೀತಿಯೇ ಬೇರೆ ರೀತಿಯಲ್ಲಿ ಇತ್ತು.

‘ಬಹುಶಃ ಕಮೆಂಟ್​ ಮಾಡಿದ ವ್ಯಕ್ತಿಯ ದಿನ ಕೆಟ್ಟದಾಗಿತ್ತು ಅನಿಸುತ್ತದೆ. ಮನೆಯಲ್ಲಿ ಏನೋ ಜಗಳವಾಗಿತ್ತು. ಈ ಕಾರಣಕ್ಕೆ ಅವರು ಆ ರೀತಿ ಕಮೆಂಟ್​ ಹಾಕಿರಬಹುದು. ಅವರ ಮನೆಯಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ನಾನು ಭಾವಿಸಿದ್ದೇನೆ’ ಎಂದು ಸೈಲೆಂಟ್​ ಆಗಿ ಉತ್ತರಿಸಿದ್ದಾರೆ ಜೆನಿಲಿಯಾ.

ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಂತರದಲ್ಲಿ ಶಿಲ್ಪಾ ಶೆಟ್ಟಿ ಅಪ್ಸೆಟ್​ ಆಗಿದ್ದರು. ಅವರು ಜಡ್ಜ್​ ಆಗಿದ್ದ ಡ್ಯಾನ್ಸ್​ ಶೋಗೆ ಗೈರಾಗಿದ್ದರು. ಈ ವೇಳೆ ಜೆನಿಲಿಯಾ ಹಾಗೂ ರಿತೇಶ್​​ ಜಡ್ಜ್​ ಆಗಿ ಶೋಗೆ ಆಗಮಿಸಿದ್ದರು.

ಇದನ್ನೂ ಓದಿ: ಖ್ಯಾತ ನಟಿ ಜೆನಿಲಿಯಾ ಡಿಸೋಜಾ ಈಗ ಎಲ್ಲಿದ್ದಾರೆಂದು ವಿವರಿಸುತ್ತದೆ ಈ ಫೊಟೊ ಗ್ಯಾಲರಿ!

KBC 13: ಕೆಬಿಸಿ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ‘ಐ ಲವ್ ಯೂ ಟೂ’ ಎಂದ ಜೆನಿಲಿಯಾ; ಏನಿದು ಸಮಾಚಾರ?

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!