AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದವರನ್ನು ಟೀಕಿಸಲು ಬಂದ ಹಿಂದಿಯವರನ್ನು ಅಲ್ಲೇ ತಡೆದ ಜೆನಿಲಿಯಾ

ಜೆನಿಲಿಯಾ ಅವರು ಮುಂಬೈನಲ್ಲಿ ನೆಲೆಸಿದ್ದರೂ, ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಅವರ ಅನುಭವ ಅಪಾರ. ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾದರು. ‘ಸತ್ಯ ಇನ್ ಲವ್’ ಮತ್ತು ‘ಜೂನಿಯರ್’ ಹೆಸರಿನ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಪಡೆದ ಅನುಭವ ಮತ್ತು ಪಾತ್ರಗಳನ್ನು ಮೆಚ್ಚಿಕೊಂಡಿದ್ದಾರೆ.

ದಕ್ಷಿಣದವರನ್ನು ಟೀಕಿಸಲು ಬಂದ ಹಿಂದಿಯವರನ್ನು ಅಲ್ಲೇ ತಡೆದ ಜೆನಿಲಿಯಾ
ಜೆನಿಲಿಯಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jun 20, 2025 | 11:00 AM

Share

ನಟಿ ಜೆನಿಲಿಯಾ (Genilia) ಅವರು ಈಗ ಮುಂಬೈನಲ್ಲಿ ಸೆಟಲ್ ಆಗಿರಬಹುದು. ಹಿಂದಿಯಲ್ಲಿ ಅವರು ಕೆಲವು ಸಿನಿಮಾ ಮಾಡಿರಬಹುದು. ಆದರೆ, ದಕ್ಷಿಣ ಚಿತ್ರರಂಗವನ್ನು ಅವರು ಮರೆತಿಲ್ಲ ಎಂಬುದನ್ನು ನೀವು ಸ್ಪಷ್ಟವಾಗಿ ನೋಡಬಹುದು. ಜೆನಿಲಿಯಾ ಅವರು ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಈಗ ಹಿಂದಿಯ ‘ಸಿತಾರೇ ಜಮೀನ್ ಪರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇಂದು (ಜೂನ್ 20) ರಿಲೀಸ್ ಆಗಿದೆ. ಈ ಸಿನಿಮಾದ ಪ್ರಚಾರದ ವೇಳೆ ಕೆಲವರು ಅವರಿಗೆ ‘ನಿಮಗೆ ದಕ್ಷಿಣದಲ್ಲಿ ಒಳ್ಳೆಯ ಪಾತ್ರ ಸಿಕ್ಕಿಲ್ಲವಲ್ಲ’ ಎಂದು ಹೇಳಲು ಬಂದರು. ಆದರೆ, ಇದನ್ನು ಅವರು ತಳ್ಳಿ ಹಾಕಿದ್ದಾರೆ.

ಜೆನಿಲಿಯಾ ಹುಟ್ಟಿದ್ದು ಮುಂಬೈನಲ್ಲಿ. ಆದರೆ, ಅವರಿಗೆ ಹೆಚ್ಚು ಜನಪ್ರಿಯತೆ ನೀಡಿದ್ದು ದಕ್ಷಿಣದ ಚಿತ್ರರಂಗ. ಅವರು ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. 2008ರಲ್ಲಿ ರಿಲೀಸ್ ಆದ ಶಿವರಾಜ್​ಕುಮಾರ್ ನಟನೆಯ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಬಣ್ಣ ಹಚ್ಚಿದರು. ಈ ಮೂಲಕ ಕನ್ನಡಕ್ಕೆ ಬಂದರು. ಈಗ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅವರಿಗೆ ದಕ್ಷಿಣದ ಬಗ್ಗೆ ಭಾರೀ ಗೌರವ ಇದೆ.

ಇದನ್ನೂ ಓದಿ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್​ಬೈ; ಹೊಸ ಕಲಾವಿದೆ ಇವರೇ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ಹಿಂದಿಯವರು ಸಂದರ್ಶನ ಮಾಡುವಾಗ ‘ದಕ್ಷಿಣದಲ್ಲಿ ಆ ಸಮಸ್ಯೆ ಇದೆ’ ಎಂಬಿತ್ಯಾದಿ ಪ್ರಶ್ನೆ ಕೇಳೋದು ಸಾಮಾನ್ಯ. ಜೆನಿಲಿಯಾ ಅವರಿಗೂ ಇದೇ ರೀತಿ ಪ್ರಶ್ನೆಗಳು ಎದುರಾದವು. ‘ನಿಮಗೆ ದಕ್ಷಿಣದಲ್ಲಿ ಒಳ್ಳೆಯ ಪಾತ್ರ ಸಿಕ್ಕೇ ಇಲ್ಲ ಅಲ್ಲವಾ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಇಲ್ಲ ನನಗೆ ಒಳ್ಳೆಯ ಪಾತ್ರಗಳು ಸಿಕ್ಕಿವೆ. ನನ್ನ ದಕ್ಷಿಣದ ಸಿನಿಮಾಗಳನ್ನು ನೋಡಿದರೆ ನನ್ನ ವೃತ್ತಿ ಜೀವನದ ಅತ್ಯುತ್ತಮ ಪಾತ್ರಗಳು ಸಿಕ್ಕಿದ್ದು ಅಲ್ಲಿಯೇ. ಅದು ನನ್ನ ಕಲಿಕೆಯ ಸ್ಥಳ ಆಗಿತ್ತು. ಹೈದರಾಬಾದ್​ಗೆ ಹೋದರೆ ನನ್ನನ್ನು ಈಗಲೂ ಹಾಸಿನಿ (ಬೊಮ್ಮರಿಲ್ಲು ಚಿತ್ರದ ಪಾತ್ರ) ಎಂದು ಕರೆಯುತ್ತಾರೆ. ತಮಿಳಿನಲ್ಲಿ ಹರಿಣಿ ಎನ್ನುತ್ತಾರೆ. ಈ ರೀತಿ ಪಾತ್ರ ಸಿಗೋಕೆ ನಾನು ಅದೃಷ್ಟ ಮಾಡಿದ್ದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಸ್ಪರ್ಧೆ ಬೇಡ ಎಂಬ ನಿರ್ಧಾರ; ಅಂದುಕೊಂಡಿದ್ದಕ್ಕಿಂತ ಮೊದಲೇ ಆಮಿರ್ ಖಾನ್ ಸಿನಿಮಾ ರಿಲೀಸ್

ಶಂಕರ್ ಹಾಗೂ ರಾಜಮೌಳಿ ರೀತಿಯ ನಿರ್ದೇಶಕರ ಜೊತೆ ಹಾಗೂ ಹೊಸ ತಂತ್ರಜ್ಞರ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಅವರಿಗೆ ಖುಷಿ ಇದೆ.  ‘ಸಿತಾರೇ ಜಮೀನ್ ಪರ್’ ಚಿತ್ರದಲ್ಲಿ ಅವರ ಪಾತ್ರ ಯಾವ ರೀತಿ ಇರಲಿದೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ