AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದವರನ್ನು ಟೀಕಿಸಲು ಬಂದ ಹಿಂದಿಯವರನ್ನು ಅಲ್ಲೇ ತಡೆದ ಜೆನಿಲಿಯಾ

ಜೆನಿಲಿಯಾ ಅವರು ಮುಂಬೈನಲ್ಲಿ ನೆಲೆಸಿದ್ದರೂ, ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಅವರ ಅನುಭವ ಅಪಾರ. ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾದರು. ‘ಸತ್ಯ ಇನ್ ಲವ್’ ಮತ್ತು ‘ಜೂನಿಯರ್’ ಹೆಸರಿನ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಪಡೆದ ಅನುಭವ ಮತ್ತು ಪಾತ್ರಗಳನ್ನು ಮೆಚ್ಚಿಕೊಂಡಿದ್ದಾರೆ.

ದಕ್ಷಿಣದವರನ್ನು ಟೀಕಿಸಲು ಬಂದ ಹಿಂದಿಯವರನ್ನು ಅಲ್ಲೇ ತಡೆದ ಜೆನಿಲಿಯಾ
ಜೆನಿಲಿಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 20, 2025 | 11:00 AM

Share

ನಟಿ ಜೆನಿಲಿಯಾ (Genilia) ಅವರು ಈಗ ಮುಂಬೈನಲ್ಲಿ ಸೆಟಲ್ ಆಗಿರಬಹುದು. ಹಿಂದಿಯಲ್ಲಿ ಅವರು ಕೆಲವು ಸಿನಿಮಾ ಮಾಡಿರಬಹುದು. ಆದರೆ, ದಕ್ಷಿಣ ಚಿತ್ರರಂಗವನ್ನು ಅವರು ಮರೆತಿಲ್ಲ ಎಂಬುದನ್ನು ನೀವು ಸ್ಪಷ್ಟವಾಗಿ ನೋಡಬಹುದು. ಜೆನಿಲಿಯಾ ಅವರು ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಈಗ ಹಿಂದಿಯ ‘ಸಿತಾರೇ ಜಮೀನ್ ಪರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇಂದು (ಜೂನ್ 20) ರಿಲೀಸ್ ಆಗಿದೆ. ಈ ಸಿನಿಮಾದ ಪ್ರಚಾರದ ವೇಳೆ ಕೆಲವರು ಅವರಿಗೆ ‘ನಿಮಗೆ ದಕ್ಷಿಣದಲ್ಲಿ ಒಳ್ಳೆಯ ಪಾತ್ರ ಸಿಕ್ಕಿಲ್ಲವಲ್ಲ’ ಎಂದು ಹೇಳಲು ಬಂದರು. ಆದರೆ, ಇದನ್ನು ಅವರು ತಳ್ಳಿ ಹಾಕಿದ್ದಾರೆ.

ಜೆನಿಲಿಯಾ ಹುಟ್ಟಿದ್ದು ಮುಂಬೈನಲ್ಲಿ. ಆದರೆ, ಅವರಿಗೆ ಹೆಚ್ಚು ಜನಪ್ರಿಯತೆ ನೀಡಿದ್ದು ದಕ್ಷಿಣದ ಚಿತ್ರರಂಗ. ಅವರು ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. 2008ರಲ್ಲಿ ರಿಲೀಸ್ ಆದ ಶಿವರಾಜ್​ಕುಮಾರ್ ನಟನೆಯ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಬಣ್ಣ ಹಚ್ಚಿದರು. ಈ ಮೂಲಕ ಕನ್ನಡಕ್ಕೆ ಬಂದರು. ಈಗ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅವರಿಗೆ ದಕ್ಷಿಣದ ಬಗ್ಗೆ ಭಾರೀ ಗೌರವ ಇದೆ.

ಇದನ್ನೂ ಓದಿ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್​ಬೈ; ಹೊಸ ಕಲಾವಿದೆ ಇವರೇ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ಹಿಂದಿಯವರು ಸಂದರ್ಶನ ಮಾಡುವಾಗ ‘ದಕ್ಷಿಣದಲ್ಲಿ ಆ ಸಮಸ್ಯೆ ಇದೆ’ ಎಂಬಿತ್ಯಾದಿ ಪ್ರಶ್ನೆ ಕೇಳೋದು ಸಾಮಾನ್ಯ. ಜೆನಿಲಿಯಾ ಅವರಿಗೂ ಇದೇ ರೀತಿ ಪ್ರಶ್ನೆಗಳು ಎದುರಾದವು. ‘ನಿಮಗೆ ದಕ್ಷಿಣದಲ್ಲಿ ಒಳ್ಳೆಯ ಪಾತ್ರ ಸಿಕ್ಕೇ ಇಲ್ಲ ಅಲ್ಲವಾ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಇಲ್ಲ ನನಗೆ ಒಳ್ಳೆಯ ಪಾತ್ರಗಳು ಸಿಕ್ಕಿವೆ. ನನ್ನ ದಕ್ಷಿಣದ ಸಿನಿಮಾಗಳನ್ನು ನೋಡಿದರೆ ನನ್ನ ವೃತ್ತಿ ಜೀವನದ ಅತ್ಯುತ್ತಮ ಪಾತ್ರಗಳು ಸಿಕ್ಕಿದ್ದು ಅಲ್ಲಿಯೇ. ಅದು ನನ್ನ ಕಲಿಕೆಯ ಸ್ಥಳ ಆಗಿತ್ತು. ಹೈದರಾಬಾದ್​ಗೆ ಹೋದರೆ ನನ್ನನ್ನು ಈಗಲೂ ಹಾಸಿನಿ (ಬೊಮ್ಮರಿಲ್ಲು ಚಿತ್ರದ ಪಾತ್ರ) ಎಂದು ಕರೆಯುತ್ತಾರೆ. ತಮಿಳಿನಲ್ಲಿ ಹರಿಣಿ ಎನ್ನುತ್ತಾರೆ. ಈ ರೀತಿ ಪಾತ್ರ ಸಿಗೋಕೆ ನಾನು ಅದೃಷ್ಟ ಮಾಡಿದ್ದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಸ್ಪರ್ಧೆ ಬೇಡ ಎಂಬ ನಿರ್ಧಾರ; ಅಂದುಕೊಂಡಿದ್ದಕ್ಕಿಂತ ಮೊದಲೇ ಆಮಿರ್ ಖಾನ್ ಸಿನಿಮಾ ರಿಲೀಸ್

ಶಂಕರ್ ಹಾಗೂ ರಾಜಮೌಳಿ ರೀತಿಯ ನಿರ್ದೇಶಕರ ಜೊತೆ ಹಾಗೂ ಹೊಸ ತಂತ್ರಜ್ಞರ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಅವರಿಗೆ ಖುಷಿ ಇದೆ.  ‘ಸಿತಾರೇ ಜಮೀನ್ ಪರ್’ ಚಿತ್ರದಲ್ಲಿ ಅವರ ಪಾತ್ರ ಯಾವ ರೀತಿ ಇರಲಿದೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ