AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pankaj Udhas: ‘ಬರೆಯದ ಮೌನದ ಕವಿತೆ..’ ಗಾಯಕ ಪಂಕಜ್​ ಉಧಾಸ್​ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ನಿಧನ

‘ಸ್ಪರ್ಶ’ ಚಿತ್ರದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’ ಮತ್ತು ‘ಚಂದಕಿಂತ ಚಂದ ನೀನೇ ಸುಂದರ..’ ಗೀತೆಗಳು ಪಂಕಜ್​ ಉಧಾಸ್​ ಅವರ ಕಂಠದಲ್ಲಿ ಮೂಡಿಬಂದಿದ್ದವು. ಇಂದು (ಫೆಬ್ರವರಿ 26) ಪಂಕಜ್​ ಉಧಾಸ್​ ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಕಂಬಿನಿ ಮಿಡಿಯುತ್ತಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

Pankaj Udhas: ‘ಬರೆಯದ ಮೌನದ ಕವಿತೆ..’ ಗಾಯಕ ಪಂಕಜ್​ ಉಧಾಸ್​ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ನಿಧನ
ಪಂಕಜ್​ ಉಧಾಸ್​
TV9 Web
| Edited By: |

Updated on:Feb 26, 2024 | 5:12 PM

Share

ಜನಪ್ರಿಯ ಗಾಯಕ ಪಂಕಜ್​ ಉಧಾಸ್​ (Pankaj Udhas) ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73ರ ಪ್ರಾಯದ ಅವರು ಇಂದು (ಫೆಬ್ರವರಿ 26) ಕೊನೆಯುಸಿರು ಎಳೆದರು. ಅವರ ನಿಧನದ (Pankaj Udhas Death) ಸುದ್ದಿಯನ್ನು ಪುತ್ರಿ ನಯಾಬ್​ ಉಧಾಸ್​ ಖಚಿತಪಡಿಸಿದ್ದಾರೆ. 1980ರ ದಶಕದಲ್ಲಿ ಪಂಕಜ್​ ಉಧಾಸ್​ ಅವರು ಗಝಲ್​ ಗಾಯನದ ಮೂಲಕ ಫೇಮಸ್​ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಾಲಿವುಡ್​ನ ಅನೇಕ ಸೂಪರ್​ ಹಿಟ್​ ಹಾಡುಗಳಿಗೆ (Pankaj Udhas Songs) ಅವರು ಧ್ವನಿ ನೀಡಿದ್ದರು. ಕಿಚ್ಚ ಸುದೀಪ್​ ಅಭಿನಯದ ‘ಸ್ಪರ್ಶ’ ಸಿನಿಮಾದ ಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರನ್ನು ಅವರು ರಂಜಿಸಿದ್ದರು.

ಪಂಕಜ್​ ಉಧಾಸ್​ ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಸ್ಪರ್ಶ’ ಸಿನಿಮಾದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’, ‘ಚಂದಕಿಂತ ಚಂದ ನೀನೇ ಸುಂದರ..’ ಹಾಡುಗಳು ಪಂಕಜ್​ ಉಧಾಸ್​ ಅವರ ಕಂಠದಲ್ಲಿ ಮೂಡಿಬಂದಿದ್ದವು. ಕೇಳುಗರ ಫೇವರಿಟ್​ ಲಿಸ್ಟ್​ನಲ್ಲಿ ಈ ಹಾಡುಗಳು ಈಗಲೂ ಜಾಗ ಪಡೆದುಕೊಂಡಿವೆ. ಪಂಕಜ್​ ಉಧಾಸ್​ ಅವರ ಅಗಲಿಕೆಗೆ ಕರುನಾಡಿನಲ್ಲಿನ ಅಭಿಮಾನಿಗಳು ಕೂಡ ಕಂಬನಿ ಮಿಡಿಯುತ್ತಿದ್ದಾರೆ.

ಪಂಕಜ್​ ಉಧಾಸ್​ ಕುಟುಂಬದವರ ಸೋಶಿಯಲ್​ ಮೀಡಿಯಾ ಪೋಸ್ಟ್​:

View this post on Instagram

A post shared by Nayaab Udhas (@nayaabudhas)

ಹಲವಾರು ಆಲ್ಬಂ ಗೀತೆಗಳಿಗೆ ಪಂಕಜ್​ ಉಧಾಸ್​ ಧ್ವನಿಯಾಗಿದ್ದರು. ಅವರದ್ದು ಸಂಗೀತಗಾರರ ಕುಟುಂಬ. ಅವರ ಸಹೋದರರಾದ ಮನ್​ಹರ್​ ಉಧಾಸ್​, ನಿರ್ಮಲ್​ ಉಧಾಸ್​ ಅವರು ಕೂಡ ಗಾಯಕರಾಗಿ ಗುರುತಿಸಿಕೊಂಡಿದ್ದಾರೆ. 1986ರಲ್ಲಿ ತೆರೆಕಂಡ ‘ನಾಮ್​’ ಸಿನಿಮಾದಲ್ಲಿನ ‘ಚಿಟ್ಟಿ ಆಯಿ ಹೈ..’ ಹಾಡಿಗೆ ಧ್ವನಿ ನೀಡುವ ಮೂಲಕ ಪಂಕಜ್​ ಉಧಾಸ್​ ಅವರು ಬಹಳ ಜನಪ್ರಿಯತೆ ಪಡೆದರು. ಸಂಜಯ್​ ದತ್​ ಅಭಿನಯದ ಆ ಸಿನಿಮಾದಲ್ಲಿ ಪಂಕಜ್​ ಅವರು ಗಾಯಕನಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಖ್ಯಾತ ಕಿರುತೆರೆ ಕಲಾವಿದೆಗೆ ಹೃದಯಾಘಾತ; ನಟಿ, ನಿರ್ದೇಶಕಿ ಕವಿತಾ ಚೌಧರಿ ನಿಧನ

2006ರಲ್ಲಿ ಪಂಕಜ್ ಉಧಾಸ್​ ಅವರಿಗೆ ಭಾರತ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಲ್ಲದೇ, ಅನೇಕ ಪ್ರತಿಷ್ಠಿತ ಪ್ರಶಸ್ತಿ, ಪುರಸ್ಕಾರಗಳು ಪಂಕಜ್​ ಉಧಾಸ್​ ಅವರನ್ನು ಅರಸಿ ಬಂದಿದ್ದವು. ಭಾರತದ ಮಾತ್ರವಲ್ಲದೇ ವಿದೇಶದ ಹಲವು ವೇದಿಕೆಗಳಲ್ಲಿ ಅವರು ಸಂಗೀತ ಕಾರ್ಯಕ್ರಮ ನೀಡಿದ್ದರು. ಲೆಜೆಂಡರಿ ಗಾಯಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:52 pm, Mon, 26 February 24

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು