AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಗ್ಯಾಂಗ್​ಸ್ಟರ್ ಹೆಸರಲ್ಲಿ ಸಲ್ಲು ಮನೆಯಿಂದ ಕ್ಯಾಬ್ ಬುಕ್ ಮಾಡಿದ ವ್ಯಕ್ತಿ; ಆ ಬಳಿಕ ಏನಾಯ್ತು?

ರೋಹಿತ್ ತ್ಯಾಗಿ ಎಂಬ 20 ವರ್ಷದ ವ್ಯಕ್ತಿ ಸಲ್ಮಾನ್ ಖಾನ್ ಮನೆಯಿಂದ ಕಾರ್ ಬುಕ್ ಮಾಡಿದ್ದ. ಇಷ್ಟೇ ಆಗಿದ್ದರೆ ಅಷ್ಟೇನು ಸಮಸ್ಯೆ ಆಗುತ್ತಿರಲಿಲ್ಲವೇನೋ. ಆತ ಕ್ಯಾಬ್ ಬುಕ್ ಮಾಡಿದ್ದು ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಹೆಸರಿನಿಂದ. ಈ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ.

Salman Khan: ಗ್ಯಾಂಗ್​ಸ್ಟರ್ ಹೆಸರಲ್ಲಿ ಸಲ್ಲು ಮನೆಯಿಂದ ಕ್ಯಾಬ್ ಬುಕ್ ಮಾಡಿದ ವ್ಯಕ್ತಿ; ಆ ಬಳಿಕ ಏನಾಯ್ತು?
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 11:35 AM

Share

ಸಲ್ಮಾನ್ ಖಾನ್ (Salman Khan) ಅವರು ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದ್ದಾರೆ. ಅವರಿಗೆ ದಿನ ಕಳೆದಂತೆ ಬೆದರಿಕೆ ಹೆಚ್ಚುತ್ತಿದೆ. ಇತ್ತೀಚೆಗೆ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿತ್ತು. ಈಗ ಮತ್ತೊಂದು ಪ್ರಕರಣ ನಡೆದಿದೆ. ಗ್ಯಾಂಗ್​ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಸಲ್ಲುಗೆ ಜೀವ ಬೆದರಿಕೆ ಇದೆ. ಈಗ ಮತ್ತೋರ್ವ ವ್ಯಕ್ತಿ ಅರೆಸ್ಟ್ ಆಗಿದ್ದಾರೆ.

ರೋಹಿತ್ ತ್ಯಾಗಿ ಎಂಬ 20 ವರ್ಷದ ವ್ಯಕ್ತಿ ಸಲ್ಮಾನ್ ಖಾನ್ ಮನೆಯಿಂದ ಕಾರ್ ಬುಕ್ ಮಾಡಿದ್ದ. ಇಷ್ಟೇ ಆಗಿದ್ದರೆ ಅಷ್ಟೇನು ಸಮಸ್ಯೆ ಆಗುತ್ತಿರಲಿಲ್ಲವೇನೋ. ಆತ ಕ್ಯಾಬ್ ಬುಕ್ ಮಾಡಿದ್ದು ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಹೆಸರಿನಿಂದ. ಈ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ. ಕ್ಯಾಬ್ ಬುಕ್ ಮಾಡಿದವನು ಉತ್ತರ ಪ್ರದೇಶದ ಗಜಿಯಾಬಾದ್​ನವನು.

ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ವಾಸವಾಗಿರುವ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್ ಬಳಿ ಬಂದಿದ್ದಾನೆ. ‘ಲಾರೆನ್ಸ್ ಬಿಷ್ನೋಯ್ ಕ್ಯಾಬ್ ಬುಕ್ ಮಾಡಿದ್ದಾರೆ’ ಎಂದು ಸೆಕ್ಯುರಿಟಿ ಬಳಿ ಹೇಳಿದ್ದಾರೆ. ಇದನ್ನು ಕೇಳಿ ಸೆಕ್ಯುರಿಟಿ ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಪೊಲೀಸರು ತನಿಖೆ ನಡೆಸಿದಾಗ ಇದು ಫೇಕ್ ಬುಕಿಂಗ್ ಅನ್ನೋದು ಗೊತ್ತಾಗಿದೆ.

ರೋಹಿತ್ ತ್ಯಾಗಿ ಎಂಬಾತ ಈ ಕ್ಯಾಬ್ ಬುಕ್ ಮಾಡಿದ್ದಾನೆ ಅನ್ನೋದು ಪೊಲೀಸರಿಗೆ ಗೊತ್ತಾಗಿದೆ. ಆ ಬಳಿಕ ಆತನ ಬಂಧಿಸಲಾಗಿದೆ. ಪ್ರ್ಯಾಂಕ್ ಮಾಡಲು ಈ ರೀತಿ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾರೆ. ಸದ್ಯ ಗಜಿಯಾಬಾದ್​ನಿಂದ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಆ ಜಾಗ ಇನ್ನೂ ಕಾಡುತ್ತದೆ’; ಹಿಟ್ ಆ್ಯಂಡ್ ರನ್ ಕೇಸ್ ಬಗ್ಗೆ ಮಾತನಾಡಿದ್ದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಸದ್ಯ ದುಬೈನಲ್ಲಿದ್ದಾರೆ. ಸಲ್ಮಾನ್​ ಖಾನ್​ ಅವರಿಗೆ ಭಾರತದಲ್ಲಿ ವೈ ಪ್ಲಸ್​ ಭದ್ರತೆ ನೀಡಲಾಗಿದೆ. ಬುಲೆಟ್​ ಪ್ರೂಫ್​ ಕಾರಿನಲ್ಲಿ ಅವರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವರದಿಗಳ ಪ್ರಕಾರ, ಸಲ್ಮಾನ್​ ಖಾನ್​ ಅವರು ದುಬೈನಲ್ಲಿ ನಡೆಯುವ ಒಂದು ಕಾರ್ಯಕ್ರಮಕ್ಕೆ ಹಾಜರಿ ಹಾಕಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ