ಸೈನಿಕರ ಬಗ್ಗೆ ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಪೋಸ್ಟರ್​ನಲ್ಲಿ ತಪ್ಪು ಕಂಡುಹಿಡಿದ ಮಾಜಿ ಸೇನಾಧಿಕಾರಿ

ಅಕ್ಷಯ್​ ಕುಮಾರ್​ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಪೋಸ್ಟರ್​ನಲ್ಲಿ ಒಂದು ತಪ್ಪು ಕಾಣಿಸಿದೆ. ಅದನ್ನು ಮಾಜಿ ಸೇನಾಧಿಕಾರಿಯೊಬ್ಬರು ಗುರುತಿಸಿದ್ದಾರೆ.

ಸೈನಿಕರ ಬಗ್ಗೆ ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಪೋಸ್ಟರ್​ನಲ್ಲಿ ತಪ್ಪು ಕಂಡುಹಿಡಿದ ಮಾಜಿ ಸೇನಾಧಿಕಾರಿ
‘ಗೋರ್ಕಾ’ ಚಿತ್ರದ ಪೋಸ್ಟರ್​ನಲ್ಲಿ ಅಕ್ಷಯ್​ ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Oct 17, 2021 | 1:59 PM

ತುಂಬ ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವವರು ನಟ ಅಕ್ಷಯ್​ ಕುಮಾರ್​. ಸದ್ಯ ಅವರ ಕೈಯಲ್ಲಿ ರಕ್ಷಾ ಬಂಧನ್​, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಿವೆ. ಅವುಗಳ ಜೊತೆಗೆ ಇನ್ನೊಂದು ಹೊಸ ಚಿತ್ರವನ್ನು ಅವರು ಇತ್ತೀಚೆಗೆ ಘೋಷಿಸಿದರು. ‘ಗೋರ್ಕಾ’ ಎಂದು ಈ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಅಲ್ಲದೇ ಫಸ್ಟ್​ಲುಕ್​ ಕೂಡ ಅನಾವರಣ ಆಗಿದೆ. ಸೈನಿಕನ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸುವಲ್ಲಿ ಅವರು ಯಶಸ್ವಿ ಆಗಿದ್ದಾರೆ. ಆದರೆ ‘ಗೋರ್ಕಾ’ ಚಿತ್ರತಂಡ ಹಂಚಿಕೊಂಡ ಪೋಸ್ಟರ್​ನಲ್ಲಿ ಒಂದು ತಪ್ಪು ಕಾಣಿಸಿದೆ. ಅದನ್ನು ಮಾಜಿ ಸೇನಾಧಿಕಾರಿಯೊಬ್ಬರು ಕಂಡುಹಿಡಿದಿದ್ದಾರೆ.

ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್ ಅವರು ಗೋರ್ಕಾ ರೆಜಿಮೆಂಟ್​ ಸೈನಿಕನಾಗಿ ನಟಿಸಲಿದ್ದಾರೆ. ಗೋರ್ಕಾ ಸೈನಿಕರು ತಮ್ಮ ಜೊತೆ ಕುಕ್ರಿ ಎಂಬ ಚಾಕು ರೀತಿಯ ಆಯುಧವನ್ನು ಇಟ್ಟುಕೊಂಡಿರುತ್ತಾರೆ. ‘ಗೋರ್ಕಾ’ ಸಿನಿಮಾದ ಪೋಸ್ಟರ್​ನಲ್ಲೂ ಅದನ್ನು ತೋರಿಸಲಾಗಿದೆ. ಆದರೆ ಅಕ್ಷಯ್​ ಕುಮಾರ್​ ಹಿಡಿದುಕೊಂಡಿರುವುದು ಸರಿಯಾದ ಕುಕ್ರಿ ಅಲ್ಲ ಎಂದು ಮಾಜಿ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದು, ಸರಿಯಾದ ಕುಕ್ರಿ ಯಾವುದು ಮತ್ತು ಅದು ಹೇಗಿರುತ್ತದೆ ಎಂಬುದನ್ನು ಚಿತ್ರ ಸಮೇತ ವಿವರಿಸಿದ್ದಾರೆ.

‘ನೀವು ಈ ಸಿನಿಮಾ ಮಾಡುತ್ತಿರುವುದಕ್ಕೆ ಮಾಜಿ ಗೋರ್ಕಾ ಸೇನಾಧಿಕಾರಿಯಾದ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ ವಿವರಗಳು ತುಂಬ ಮುಖ್ಯವಾಗುತ್ತವೆ. ದಯವಿಟ್ಟು ಸರಿಯಾದ ಕುಕ್ರಿ ತೆಗೆದುಕೊಳ್ಳಿ’ ಎಂದು ಮಾಜಿ ಸೇನಾಧಿಕಾರಿ ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಅಕ್ಷಯ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ಇದನ್ನು ಕಂಡುಹಿಡಿದಿದ್ದಕ್ಕೆ ನಿಮಗೆ ಧನ್ಯವಾದಗಳು. ಚಿತ್ರೀಕರಣ ಮಾಡುವಾಗ ನಾವು ಹೆಚ್ಚು ಗಮನ ಹರಿಸುತ್ತೇವೆ. ಈ ಚಿತ್ರ ಮಾಡುತ್ತಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ನೈಜತೆಗೆ ಹತ್ತಿರ ಆಗಿಸುವಂತಹ ಯಾವುದೇ ಸಲಹೆಯನ್ನೂ ಸ್ವೀಕರಿಸಲಾಗುವುದು’ ಎಂದು ಅಕ್ಷಯ್​ ಕುಮಾರ್ ಉತ್ತರಿಸಿದ್ದಾರೆ.

ಈ ಸಿನಿಮಾದಲ್ಲಿ ವೀರ ಯೋಧ ಇಯನ್​ ಕಾರ್ಡೋಸೋ ಅವರ ಪಾತ್ರವನ್ನು ಅಕ್ಷಯ್​ ಕುಮಾರ್​ ಮಾಡುತ್ತಿದ್ದಾರೆ. 1962, 1965 ಮತ್ತು 1971ರ ಯುದ್ಧದಲ್ಲಿ ಇಯನ್​ ಕಾರ್ಡೋಸೋ ಹೇಗೆ ಹೋರಾಡಿದರು ಎಂಬುದನ್ನು ಈ ಸಿನಿಮಾ ವಿವರಿಸಲಿದೆ. ಸಂಜಯ್​ ಪುರಾಣ್​ ಸಿಂಗ್​ ಚೌಹಾಣ್​ ಅವರು ‘ಗೋರ್ಕಾ’ ಚಿತ್ರಕ್ಕೆ ನಿರ್ದೇಶನ ಮಾಡಿಲಿದ್ದಾರೆ.

ಇದನ್ನೂ ಓದಿ:

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ