AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕರ ಬಗ್ಗೆ ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಪೋಸ್ಟರ್​ನಲ್ಲಿ ತಪ್ಪು ಕಂಡುಹಿಡಿದ ಮಾಜಿ ಸೇನಾಧಿಕಾರಿ

ಅಕ್ಷಯ್​ ಕುಮಾರ್​ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಪೋಸ್ಟರ್​ನಲ್ಲಿ ಒಂದು ತಪ್ಪು ಕಾಣಿಸಿದೆ. ಅದನ್ನು ಮಾಜಿ ಸೇನಾಧಿಕಾರಿಯೊಬ್ಬರು ಗುರುತಿಸಿದ್ದಾರೆ.

ಸೈನಿಕರ ಬಗ್ಗೆ ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಪೋಸ್ಟರ್​ನಲ್ಲಿ ತಪ್ಪು ಕಂಡುಹಿಡಿದ ಮಾಜಿ ಸೇನಾಧಿಕಾರಿ
‘ಗೋರ್ಕಾ’ ಚಿತ್ರದ ಪೋಸ್ಟರ್​ನಲ್ಲಿ ಅಕ್ಷಯ್​ ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Oct 17, 2021 | 1:59 PM

Share

ತುಂಬ ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವವರು ನಟ ಅಕ್ಷಯ್​ ಕುಮಾರ್​. ಸದ್ಯ ಅವರ ಕೈಯಲ್ಲಿ ರಕ್ಷಾ ಬಂಧನ್​, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಿವೆ. ಅವುಗಳ ಜೊತೆಗೆ ಇನ್ನೊಂದು ಹೊಸ ಚಿತ್ರವನ್ನು ಅವರು ಇತ್ತೀಚೆಗೆ ಘೋಷಿಸಿದರು. ‘ಗೋರ್ಕಾ’ ಎಂದು ಈ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಅಲ್ಲದೇ ಫಸ್ಟ್​ಲುಕ್​ ಕೂಡ ಅನಾವರಣ ಆಗಿದೆ. ಸೈನಿಕನ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸುವಲ್ಲಿ ಅವರು ಯಶಸ್ವಿ ಆಗಿದ್ದಾರೆ. ಆದರೆ ‘ಗೋರ್ಕಾ’ ಚಿತ್ರತಂಡ ಹಂಚಿಕೊಂಡ ಪೋಸ್ಟರ್​ನಲ್ಲಿ ಒಂದು ತಪ್ಪು ಕಾಣಿಸಿದೆ. ಅದನ್ನು ಮಾಜಿ ಸೇನಾಧಿಕಾರಿಯೊಬ್ಬರು ಕಂಡುಹಿಡಿದಿದ್ದಾರೆ.

ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್ ಅವರು ಗೋರ್ಕಾ ರೆಜಿಮೆಂಟ್​ ಸೈನಿಕನಾಗಿ ನಟಿಸಲಿದ್ದಾರೆ. ಗೋರ್ಕಾ ಸೈನಿಕರು ತಮ್ಮ ಜೊತೆ ಕುಕ್ರಿ ಎಂಬ ಚಾಕು ರೀತಿಯ ಆಯುಧವನ್ನು ಇಟ್ಟುಕೊಂಡಿರುತ್ತಾರೆ. ‘ಗೋರ್ಕಾ’ ಸಿನಿಮಾದ ಪೋಸ್ಟರ್​ನಲ್ಲೂ ಅದನ್ನು ತೋರಿಸಲಾಗಿದೆ. ಆದರೆ ಅಕ್ಷಯ್​ ಕುಮಾರ್​ ಹಿಡಿದುಕೊಂಡಿರುವುದು ಸರಿಯಾದ ಕುಕ್ರಿ ಅಲ್ಲ ಎಂದು ಮಾಜಿ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದು, ಸರಿಯಾದ ಕುಕ್ರಿ ಯಾವುದು ಮತ್ತು ಅದು ಹೇಗಿರುತ್ತದೆ ಎಂಬುದನ್ನು ಚಿತ್ರ ಸಮೇತ ವಿವರಿಸಿದ್ದಾರೆ.

‘ನೀವು ಈ ಸಿನಿಮಾ ಮಾಡುತ್ತಿರುವುದಕ್ಕೆ ಮಾಜಿ ಗೋರ್ಕಾ ಸೇನಾಧಿಕಾರಿಯಾದ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ ವಿವರಗಳು ತುಂಬ ಮುಖ್ಯವಾಗುತ್ತವೆ. ದಯವಿಟ್ಟು ಸರಿಯಾದ ಕುಕ್ರಿ ತೆಗೆದುಕೊಳ್ಳಿ’ ಎಂದು ಮಾಜಿ ಸೇನಾಧಿಕಾರಿ ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಅಕ್ಷಯ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ಇದನ್ನು ಕಂಡುಹಿಡಿದಿದ್ದಕ್ಕೆ ನಿಮಗೆ ಧನ್ಯವಾದಗಳು. ಚಿತ್ರೀಕರಣ ಮಾಡುವಾಗ ನಾವು ಹೆಚ್ಚು ಗಮನ ಹರಿಸುತ್ತೇವೆ. ಈ ಚಿತ್ರ ಮಾಡುತ್ತಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ನೈಜತೆಗೆ ಹತ್ತಿರ ಆಗಿಸುವಂತಹ ಯಾವುದೇ ಸಲಹೆಯನ್ನೂ ಸ್ವೀಕರಿಸಲಾಗುವುದು’ ಎಂದು ಅಕ್ಷಯ್​ ಕುಮಾರ್ ಉತ್ತರಿಸಿದ್ದಾರೆ.

ಈ ಸಿನಿಮಾದಲ್ಲಿ ವೀರ ಯೋಧ ಇಯನ್​ ಕಾರ್ಡೋಸೋ ಅವರ ಪಾತ್ರವನ್ನು ಅಕ್ಷಯ್​ ಕುಮಾರ್​ ಮಾಡುತ್ತಿದ್ದಾರೆ. 1962, 1965 ಮತ್ತು 1971ರ ಯುದ್ಧದಲ್ಲಿ ಇಯನ್​ ಕಾರ್ಡೋಸೋ ಹೇಗೆ ಹೋರಾಡಿದರು ಎಂಬುದನ್ನು ಈ ಸಿನಿಮಾ ವಿವರಿಸಲಿದೆ. ಸಂಜಯ್​ ಪುರಾಣ್​ ಸಿಂಗ್​ ಚೌಹಾಣ್​ ಅವರು ‘ಗೋರ್ಕಾ’ ಚಿತ್ರಕ್ಕೆ ನಿರ್ದೇಶನ ಮಾಡಿಲಿದ್ದಾರೆ.

ಇದನ್ನೂ ಓದಿ:

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ