AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಮತ್ತೊಂದು ಶಾಕ್; ಕುಸಿದುಬಿದ್ದು ಆಸ್ಪತ್ರೆ ಸೇರಿದ ನಟ ಗೋವಿಂದ

Govinda Hospitalized: ಬಾಲಿವುಡ್ ನಟ ಧರ್ಮೇಂದ್ರ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಮಧ್ಯೆ ನಟ ಗೋವಿಂದ ಸಹ ನಿವಾಸದಲ್ಲಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ್ದಾರೆ. ಧರ್ಮೇಂದ್ರರನ್ನು ಭೇಟಿಯಾಗಿ ಗೋವಿಂದ ಬಂದಿದ್ದರು. ಇದಾದ ಒಂದೇ ದಿನದಲ್ಲಿ ಗೋವಿಂದ ಕೂಡ ಆಸ್ಪತ್ರೆ ಸೇರುವಂತೆ ಆಗಿದೆ.

ಬಾಲಿವುಡ್​ಗೆ ಮತ್ತೊಂದು ಶಾಕ್; ಕುಸಿದುಬಿದ್ದು ಆಸ್ಪತ್ರೆ ಸೇರಿದ ನಟ ಗೋವಿಂದ
ಗೋವಿಂದ
ರಾಜೇಶ್ ದುಗ್ಗುಮನೆ
|

Updated on: Nov 12, 2025 | 7:55 AM

Share

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Dharmendra) ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಮಧ್ಯೆ ಬಾಲಿವುಡ್ ನಟ ಗೋವಿಂದ ಕೂಡ ಆಸ್ಪತ್ರೆ ಸೇರಿದ್ದಾರೆ. ಅವರು ತಮ್ಮ ಮುಂಬೈ ನಿವಾಸದಲ್ಲಿ ಮಂಗಳವಾರ (ನವೆಂಬರ್ 11) ರಾತ್ರಿ ಕುಸಿದು ಬಿದ್ದರು. ಅವರನ್ನು ಜುಹುವಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಅವರ ಗೆಳೆಯ ಹಾಗೂ ಅವರ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಖಚಿತಪಡಿಸಿದ್ದಾರೆ.

ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳ ವರದಿ ಇನ್ನಷ್ಟೇ ಬರಬೇಕಿದೆ. ಗೋವಿಂದ ಪ್ರಜ್ಞೆತಪ್ಪಲು ಕಾರಣ ಇನ್ನೂ ಬಹಿರಂಗವಾಗಿಲ್ಲ.  ಪರೀಕ್ಷಾ ವರದಿ ಬಂದ ಬಳಿಕ ಈ ವಿಚಾರ ರಿವೀಲ್ ಆಗಲಿದೆ.

 ಧರ್ಮೇಂದ್ರ ಭೇಟಿ ತೆರಳಿದ್ದ ಗೋವಿಂದ

ಧರ್ಮೇಂದ್ರ ಅವರು ಆಸ್ಪತ್ರೆ ಸೇರಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಸೋಮವಾರ (ನವೆಂಬರ್ 10) ಗೋವಿಂದ ಅವರು ಧರ್ಮೇಂದ್ರ ದಾಖಲಾದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಅವರು ಗೋವಿಂದ ಅವರ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ತುಂಬಿ ಬಂದಿದ್ದರು. ಈ ಸಂದರ್ಭದಲ್ಲಿ ಗೋವಿಂದ ಅವರು ಭಾವುಕರಾಗಿದ್ದರು. ಗೋವಿಂದ ರೀತಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆರ್ಯನ್ ಖಾನ್ ಸೇರಿದಂತೆ ಅನೇಕರು ಧರ್ಮೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ‘ಇದು ಅಗೌರವ, ಅಜಾಗರೂಕತೆ’: ಆಕ್ರೋಶ ಹೊರಹಾಕಿದ ಹೇಮಾಮಾಲಿನಿ

ಗುಂಡು ಹಾರಿಸಿಕೊಂಡು ಆಸ್ಪತ್ರೆ ಸೇರಿದ್ದ ಗೋವಿಂದ

ಕಳೆದ ವರ್ಷ ಅಕ್ಟೋಬರ್​ನಲ್ಲಿ ಗೋವಿಂದ ಅವರು ಆಸ್ಪತ್ರೆ ಸೇರುವ ಪರಿಸ್ಥಿತಿ ಬಂದಿತ್ತು. ತಮ್ಮ ರಿವಾಲ್ವರ್​ನಿಂದ ಮಿಸ್ ಫೈಯರ್ ಆದ ಬುಲೆಟ್ ಅವರ ಕಾಲಿಗೆ ಹೊಡೆದಿತ್ತು. ಇದರಿಂದ ಅವರು ಆಸ್ಪತ್ರೆ ಸೇರಬೇಕಾಯಿತು. ಸದ್ಯ ಗೋವಿಂದ ಹಾಗೂ ಅವರ ಪತ್ನಿ ಸುನಿತಾ ಅಹುಜಾ ಸಂಬಂಧ ಹದಗೆಟ್ಟಿದೆ. ಇವರು ಶೀಘ್ರವೇ ವಿಚ್ಛೇದನ ಪಡೆಯುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಈ ದಂಪತಿಗೆ ಇಬ್ಬರು ಮಕ್ಕಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ