AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು; ನಡೆದಿದ್ದು ಏನು?

ಇದು ಆಕಸ್ಮಿಕವಾಗಿ ನಡೆದಿರೋ ಘಟನೆ. ಬುಲೆಟ್ ಫೈಯರ್ ಆಗಿದ್ದು, ಅವರ ಕಾಲಿಗೆ ತಾಗಿದೆ. ಮುಂಜನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು; ನಡೆದಿದ್ದು ಏನು?
ಗೋವಿಂದ
ರಾಜೇಶ್ ದುಗ್ಗುಮನೆ
|

Updated on:Oct 01, 2024 | 10:08 AM

Share

ನಟ ಗೋವಿಂದ ಅವರು ತಮ್ಮದೇ ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದು ಆಕಸ್ಮಿಕವಾಗಿ ನಡೆದಿರೋ ಘಟನೆ. ಗನ್​ನಿಂದ ಫೈಯರ್ ಆದ ಬುಲೆಟ್ , ಅವರ ಕಾಲಿಗೆ ತಾಗಿದೆ. ಮುಂಜನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರಾ ಗೋವಿಂದ್ ಸೊಸೆ? ಮೌನ ಮುರಿದ ನಟಿ ರಾಗಿಣಿ

ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.  ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್​ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಗೋವಿಂದ ಅವರು ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ. ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಬ್ರ್ಯಾಂಡ್​ಗಳನ್ನು ಪ್ರಚಾರ ಮಾಡಿಕೊಂಡು ಸಮಯ ಕಳೆಯುತ್ತಿದ್ದಾರೆ.

‘ಕೂಲಿ ನಂಬರ್ 1’, ‘ಹಸೀನಾ ಮಾನ್ ಜಾಯೇಗಿ’, ‘ಸ್ವರ್ಗ್’, ‘ಸಾಜನ್ ಚಲೇ ಸಸುರಾಲ್’, ‘ರಾಜಾ ಬಾಬು’ ‘ರಾಜಾಜಿ’, ‘ಪಾರ್ಟ್ನರ್’ ಸಿನಿಮಾಗಳ ಮೂಲಕ ನಟಿಸಿ ಗಮನ ಸೆಳೆದಿದ್ದಾರೆ. ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ರಂಗೀಲ ರಾಜ’ ಸಿನಿಮಾದಲ್ಲಿ. ಈ ಚಿತ್ರ 2019ರಲ್ಲಿ ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:38 am, Tue, 1 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ