AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು; ನಡೆದಿದ್ದು ಏನು?

ಇದು ಆಕಸ್ಮಿಕವಾಗಿ ನಡೆದಿರೋ ಘಟನೆ. ಬುಲೆಟ್ ಫೈಯರ್ ಆಗಿದ್ದು, ಅವರ ಕಾಲಿಗೆ ತಾಗಿದೆ. ಮುಂಜನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು; ನಡೆದಿದ್ದು ಏನು?
ಗೋವಿಂದ
ರಾಜೇಶ್ ದುಗ್ಗುಮನೆ
|

Updated on:Oct 01, 2024 | 10:08 AM

Share

ನಟ ಗೋವಿಂದ ಅವರು ತಮ್ಮದೇ ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದು ಆಕಸ್ಮಿಕವಾಗಿ ನಡೆದಿರೋ ಘಟನೆ. ಗನ್​ನಿಂದ ಫೈಯರ್ ಆದ ಬುಲೆಟ್ , ಅವರ ಕಾಲಿಗೆ ತಾಗಿದೆ. ಮುಂಜನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರಾ ಗೋವಿಂದ್ ಸೊಸೆ? ಮೌನ ಮುರಿದ ನಟಿ ರಾಗಿಣಿ

ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.  ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್​ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಗೋವಿಂದ ಅವರು ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ. ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಬ್ರ್ಯಾಂಡ್​ಗಳನ್ನು ಪ್ರಚಾರ ಮಾಡಿಕೊಂಡು ಸಮಯ ಕಳೆಯುತ್ತಿದ್ದಾರೆ.

‘ಕೂಲಿ ನಂಬರ್ 1’, ‘ಹಸೀನಾ ಮಾನ್ ಜಾಯೇಗಿ’, ‘ಸ್ವರ್ಗ್’, ‘ಸಾಜನ್ ಚಲೇ ಸಸುರಾಲ್’, ‘ರಾಜಾ ಬಾಬು’ ‘ರಾಜಾಜಿ’, ‘ಪಾರ್ಟ್ನರ್’ ಸಿನಿಮಾಗಳ ಮೂಲಕ ನಟಿಸಿ ಗಮನ ಸೆಳೆದಿದ್ದಾರೆ. ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ರಂಗೀಲ ರಾಜ’ ಸಿನಿಮಾದಲ್ಲಿ. ಈ ಚಿತ್ರ 2019ರಲ್ಲಿ ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:38 am, Tue, 1 October 24

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ