AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಿಂತ ಹೆಚ್ಚಾಗಿ ಬೇರೆ ನಟಿಯರ ಜೊತೆ ಕಾಲ ಕಳೆದರು: ಗೋವಿಂದ ಪತ್ನಿ ಸುನೀತಾ ಆರೋಪ

ಬಾಲಿವುಡ್ ಹೀರೋ ಗೋವಿಂದ ಅವರನ್ನು ಮದುವೆಯಾದ ಸುನೀತಾ ಅಹುಜಾ ಅವರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಸ್ಟಾರ್ ನಟನ ಪತ್ನಿಯಾಗುವುದು ಅಷ್ಟು ಸುಲಭ ಅಲ್ಲ ಎಂದು ಅವರು ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ಸುನೀತಾ ಅಹುಜಾ ಅವರು ಸಂದರ್ಶನ ನೀಡಿದ್ದು, ಕೆಲವು ಇಂಟರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ನನಗಿಂತ ಹೆಚ್ಚಾಗಿ ಬೇರೆ ನಟಿಯರ ಜೊತೆ ಕಾಲ ಕಳೆದರು: ಗೋವಿಂದ ಪತ್ನಿ ಸುನೀತಾ ಆರೋಪ
Govinda, Sunita Ahuja
ಮದನ್​ ಕುಮಾರ್​
|

Updated on: Jun 13, 2025 | 7:26 PM

Share

ನಟ ಗೋವಿಂದ (Govinda) ಅವರ ಖಾಸಗಿ ಜೀವನದ ಬಗ್ಗೆ ಹಲವು ಅಂತೆ-ಕಂತೆಗಳು ಹರಿದಾಡಿವೆ. ಪತ್ನಿ ಸುನೀತಾ ಅಹುಜಾ ಜೊತೆ ಗೋವಿಂದ ಕಿರಿಕ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ ವಿಚ್ಛೇದನ ಪಡೆಯುವ ಸಾಧ್ಯತೆ ಇದೆ ಎಂದು ಕೂಡ ಗಾಸಿಪ್ ಹಬ್ಬಿಸಲಾಗಿತ್ತು. ಆದರೆ ಅದು ಯಾವುದೂ ನಿಜ ಆಗಲಿಲ್ಲ. ಹಾಗಂತ ಗೋವಿಂದ ಮತ್ತು ಸುನೀತಾ ಅಹುಜಾ (Sunita Ahuja) ನಡುವೆ ಎಲ್ಲವೂ ಚೆನ್ನಾಗಿದೆ ಎಂದೇನಿಲ್ಲ. ಗಂಡನ ಬಗ್ಗೆ ಸುನೀತಾ ಅಹುಜಾ ಅವರಿಗೆ ಸಾಕಷ್ಟು ದೂರುಗಳಿವೆ. ಆ ಕುರಿತು ಅವರು ಮುಕ್ತವಾಗಿ ಹೇಳಿಕೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸುನೀತಾ ಅಹುಜಾ ಅವರು ಮಾತನಾಡಿದ್ದಾರೆ. ಸ್ಟಾರ್ ನಟನ ಪತ್ನಿಯಾಗಿ ಕಾಲ ಕಳೆಯುವುದು ಸುಲಭವಲ್ಲ ಎಂದು ಅವರು ಹೇಳಿದ್ದಾರೆ. ಸಿನಿಮಾ ಕೆಲಸಗಳ ಸಲುವಾಗಿ ಗೋವಿಂದ ಅವರು ಮನೆಯಿಂದ ಹೊರಗೆ ಇದ್ದಿದ್ದೇ ಹೆಚ್ಚು. ಆ ಸಂದರ್ಭಗಳಲ್ಲಿ ಸುನೀತಾ ಅಹುಜಾ ಅವರಿಗೆ ಅಭದ್ರತೆ ಕಾಡಿತ್ತು.

‘ಸಿನಿಮಾ ನಟನ ಹೆಂಡತಿ ಆಗಬೇಕು ಎಂದರೆ ನಿಮ್ಮ ಹೃದಯ ಕಲ್ಲಾಗಿರಬೇಕು. ಹೀರೋಗಳು ತಮ್ಮ ಪತ್ನಿಗಿಂತಲೂ ಹೆಚ್ಚಾಗಿ ಹೀರೋಯಿನ್​ಗಳ ಜೊತೆ ಸಮಯ ಕಳೆಯುತ್ತಾರೆ’ ಎಂದು ಸುನೀತಾ ಅಹುಜಾ ಹೇಳಿದ್ದಾರೆ. ಪಾರ್ಟ್ನರ್ ಮೇಲೆ ನಂಬಿಕೆ ಇಲ್ಲದಿದ್ದರೆ ಜೀವನವೇ ಹಾಳಾಗುತ್ತದೆ ಎಂಬುದು ಸುಹೀತಾ ಅವರಿಗೆ ಅರ್ಥ ಆಗಿದೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

1987ರಲ್ಲಿ ಸುನೀತಾ ಅಹುಜಾ ಮತ್ತು ಗೋವಿಂದ ಅವರ ಮದುವೆ ನಡೆಯಿತು. ಈ ಜೋಡಿಗೆ ಇಬ್ಬರು ಮಕ್ಕಳು ಇದ್ದಾರೆ. ಸುನೀತಾ ಅಹುಜಾ ಅವರು ಮಕ್ಕಳಿಗೆ ಜನ್ಮ ನೀಡುವಾಗಲೂ ಗೋವಿಂದ ಜೊತೆಗೆ ಇರಲಿಲ್ಲ. ಆ ಘಟನೆಯನ್ನೆಲ್ಲ ಸುನೀತಾ ಅವರು ಈಗ ಮೆಲುಕು ಹಾಕಿದ್ದಾರೆ. ಕುಟುಂಬದವರ ಬೆಂಬಲದಿಂದ ಎಲ್ಲ ಸವಾಲುಗಳನ್ನು ಎದುರಿಸಿರುವುದಾಗಿ ಸುನೀತಾ ಹೇಳಿದ್ದಾರೆ.

ಇದನ್ನೂ ಓದಿ: ‘ಜೀವನ ಹಾಳು ಮಾಡುತ್ತಿದ್ದೀರಿ’: ನಟ ಗೋವಿಂದ ಬಗ್ಗೆ ಪತ್ನಿ ಸುನೀತಾ ಟೀಕೆ

ಹಲವು ವರ್ಷಗಳಿಂದ ಗೋವಿಂದ ಅವರು ಸೈಲೆಂಟ್ ಆಗಿದ್ದಾರೆ. ಸಿನಿಮಾದಲ್ಲಿ ನಟಿಸಲು ಅವರು ಆಸಕ್ತಿ ತೋರಿಸುತ್ತಿಲ್ಲ. ಆ ಬಗ್ಗೆ ಸುನೀತಾ ಅಹುಜಾ ಅವರಿಗೆ ಬೇಸರ ಇದೆ. ಬರೀ ಮನೆಯಲ್ಲಿ ಕುಳಿತುಕೊಂಡು ಗೋವಿಂದ ಅವರು ತಮ್ಮ ಪ್ರತಿಭೆಯನ್ನು ಹಾಳುಮಾಡಿಕೊಳ್ಳಬಾರದು. ಬೇರೆ ನಟರ ರೀತಿ ಸಿನಿಮಾದಲ್ಲಿ ಆ್ಯಕ್ಟೀವ್ ಆಗಬೇಕು ಎಂದು ಸುನೀತಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್