AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ವರ್ಷದ ಹಿಂದಿನ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಶಾರುಖ್​​ಗೆ ಆಗಲಿದೆ ಶಿಕ್ಷೆ; ದಂಡದ ಮೊತ್ತ ಎಷ್ಟು?

2017ರ ಜನವರಿ 25ರಂದು ಶಾರುಖ್​ ಖಾನ್​ ನಟನೆಯ ‘ರಯೀಸ್​’ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಮಕಾಡೆ ಮಲಗಿತ್ತು. ಈ ಚಿತ್ರಕ್ಕೆ ಶಾರುಖ್​ ಖಾನ್​ ಅವರು ದೊಡ್ಡ ಮಟ್ಟದಲ್ಲೇ ಪ್ರಚಾರ ನೀಡಿದ್ದರು.

ಐದು ವರ್ಷದ ಹಿಂದಿನ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಶಾರುಖ್​​ಗೆ ಆಗಲಿದೆ ಶಿಕ್ಷೆ; ದಂಡದ ಮೊತ್ತ ಎಷ್ಟು?
ಶಾರುಖ್​
TV9 Web
| Edited By: |

Updated on: Feb 20, 2022 | 1:05 PM

Share

ಶಾರುಖ್​ ಖಾನ್ (Shah Rukh Khan)​ ಅವರು ಬಾಲಿವುಡ್​ನಲ್ಲಿ ತುಂಬಾನೇ ಫೇಮಸ್​. ಅವರು ವಿವಾದದಿಂದ ಆದಷ್ಟು ದೂರ ಇರೋಕೆ ಪ್ರಯತ್ನಿಸುತ್ತಾರೆ. ಆದಾಗ್ಯೂ ಕೆಲವೊಮ್ಮೆ ವಿವಾದಗಳೇ (Controversy) ಅವರನ್ನು ಹುಡುಕಿಕೊಂಡು ಬರುತ್ತವೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಅವರು ಮಾಡುವ ಸಣ್ಣ ತಪ್ಪು ದೊಡ್ಡದಾಗಿ ಕಾಣುತ್ತದೆ. ಇದಕ್ಕೆ ಕೇಸ್​ಗಳು ಬಿದ್ದ ಉದಾಹರಣೆಯೂ ಇದೆ. ಅದೇ ರೀತಿ ಐದು ವರ್ಷದ ಹಿಂದಿನ ಪ್ರಕರಣವೊಂದರ ವಿಚಾರಣೆ ಈಗ ಆರಂಭಗೊಂಡಿದೆ. ಈ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಅವರಿಗೆ ಸಣ್ಣ ಪ್ರಮಾಣದ ಶಿಕ್ಷೆ ಆಗಲಿದೆ. ಇಲ್ಲದಿದ್ದರೆ ಅವರು 250 ರೂಪಾಯಿ ದಂಡ ಕಟ್ಟಬೇಕಾಗಿ ಬರಹುದು! ಹಾಗಾದರೆ, ಏನಿದು ಪ್ರಕರಣ? ಆ ಪ್ರಶ್ನೆಗೆ ಉತ್ತರ ಪಡೆಯಲು ಈ ಸ್ಟೋರಿ ಓದಿ.

2017ರ ಜನವರಿ 25ರಂದು ಶಾರುಖ್​ ಖಾನ್​ ನಟನೆಯ ‘ರಯೀಸ್​’ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಮಕಾಡೆ ಮಲಗಿತ್ತು. ವಿಮರ್ಶಕರಿಂದ ನೆಗೆಟಿವ್​ ವಿಮರ್ಶೆ ಬಂದಿದ್ದು ಮಾತ್ರವಲ್ಲ, ಬಾಕ್ಸ್​ ಆಫೀಸ್​ನಲ್ಲೂ ಸೊರಗಿತ್ತು. ಈ ಚಿತ್ರಕ್ಕೆ ಶಾರುಖ್​ ಖಾನ್​ ಅವರು ದೊಡ್ಡ ಮಟ್ಟದಲ್ಲೇ ಪ್ರಚಾರ ನೀಡಿದ್ದರು. ಈ ಚಿತ್ರದ ಪ್ರಮೋಷನ್​ಗಾಗಿ ಜನವರಿ 23ರಂದು ಅವರು ಟ್ರೇನ್​ನಲ್ಲಿ ತೆರಳಿದ್ದರು. ಗುಜರಾತ್​ನ ಬರೋಡಾ ರೈಲ್ವೆ ನಿಲ್ದಾಣದ ಮೂಲಕ ಅವರು ಸಂಚರಿಸುತ್ತಿದ್ದ ರೈಲು​ ಹಾದು ಹೋಗಿತ್ತು. ಶಾರುಖ್​ ಅವರನ್ನು ನೋಡಲು ರೈಲ್ವೆ ನಿಲ್ದಾಣದಲ್ಲಿ ಸಾಕಷ್ಟು ಜನರು ನೆರೆದಿದ್ದರು.

ಶಾರುಖ್​ ಖಾನ್​ ಅವರು ಬರೋಡಾ ರೈಲ್ವೆ ನಿಲ್ದಾಣದಲ್ಲಿ ತಮ್ಮ ಶರ್ಟ್​ಅನ್ನು ತೆಗೆದು ಅಭಿಮಾನಿಗಳತ್ತ ಎಸೆದಿದ್ದರು. ನೆಚ್ಚಿನ ನಟ ಎಸೆದ ಶರ್ಟ್​ಅನ್ನು ಬಾಚಿಕೊಳ್ಳಲು ಅಭಿಮಾನಿಗಳು ಮುತ್ತಿಕೊಂಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿತ್ತು. ಓರ್ವ ವ್ಯಕ್ತಿ ಮೃತಪಟ್ಟರೆ, ಇಬ್ಬರು ಪೊಲೀಸ್​ ಕಾನ್ಸ್​ಟೇಬಲ್​ಗಳು ಗಾಯಗೊಂಡಿದ್ದರು. ಈ ಕಾಲ್ತುಳಿತಕ್ಕೆ ಶಾರುಖ್​ ಅವರೇ ಕಾರಣ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಶಾರುಖ್​ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು. ಈ ಪ್ರಕರಣ ಈಗ ಗುಜರಾತ್​ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬಂದಿದೆ.

ಶಾರುಖ್​ ಪರ ವಾದ ಮಂಡಿಸಿದ ವಕೀಲ ಮಿಹಿರ್ ಠಾಕ್ರೆ, ‘ಶಾರುಖ್​ ಖಾನ್​ ರೈಲ್ವೆ ನಿಲ್ದಾಣದಲ್ಲಿ ಇಳಿದುಕೊಂಡಿಲ್ಲ. ಅವರು ರೈಲಿನಿಂದಲೇ ಕೈ ಬೀಸಿ, ಶರ್ಟ್​ ಎಸೆದಿದ್ದಾರೆ. ಈ ವೇಳೆ ಮೃತಪಟ್ಟ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅದರಿಂದಲೇ ಅವರು ಮೃತಪಟ್ಟ ಬಗ್ಗೆ ಕುಟುಂಬವೂ ಒಪ್ಪಿಕೊಂಡಿದೆ’ ಎಂದರು.

ಐಪಿಸಿ ಸೆಕ್ಷನ್​ 336 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಾರುಖ್​ ತಪ್ಪು ಸಾಬೀತಾದರೆ ಕೋರ್ಟ್​ 3 ತಿಂಗಳು ಶಿಕ್ಷೆ ಅಥವಾ 250 ರೂಪಾಯಿ ದಂಡ ವಿಧಿಸಬಹುದು. ಎರಡನ್ನೂ ವಿಧಿಸುವ ಅವಕಾಶ ಕೋರ್ಟ್​ಗೆ ಇದೆ. ಆದರೆ, ಪ್ರಕರಣವನ್ನು ಹೆಚ್ಚು ಎಳೆಯದೇ, ನಟ ಶಾರುಖ್​ ಕ್ಷಮೆ ಕೇಳಲಿ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.  ಪ್ರಕರಣದ ವಿಚಾರಣೆ ಫೆಬ್ರವರಿ 24ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: 80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್