AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ವರ್ಷದ ಹಿಂದಿನ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಶಾರುಖ್​​ಗೆ ಆಗಲಿದೆ ಶಿಕ್ಷೆ; ದಂಡದ ಮೊತ್ತ ಎಷ್ಟು?

2017ರ ಜನವರಿ 25ರಂದು ಶಾರುಖ್​ ಖಾನ್​ ನಟನೆಯ ‘ರಯೀಸ್​’ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಮಕಾಡೆ ಮಲಗಿತ್ತು. ಈ ಚಿತ್ರಕ್ಕೆ ಶಾರುಖ್​ ಖಾನ್​ ಅವರು ದೊಡ್ಡ ಮಟ್ಟದಲ್ಲೇ ಪ್ರಚಾರ ನೀಡಿದ್ದರು.

ಐದು ವರ್ಷದ ಹಿಂದಿನ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಶಾರುಖ್​​ಗೆ ಆಗಲಿದೆ ಶಿಕ್ಷೆ; ದಂಡದ ಮೊತ್ತ ಎಷ್ಟು?
ಶಾರುಖ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 20, 2022 | 1:05 PM

ಶಾರುಖ್​ ಖಾನ್ (Shah Rukh Khan)​ ಅವರು ಬಾಲಿವುಡ್​ನಲ್ಲಿ ತುಂಬಾನೇ ಫೇಮಸ್​. ಅವರು ವಿವಾದದಿಂದ ಆದಷ್ಟು ದೂರ ಇರೋಕೆ ಪ್ರಯತ್ನಿಸುತ್ತಾರೆ. ಆದಾಗ್ಯೂ ಕೆಲವೊಮ್ಮೆ ವಿವಾದಗಳೇ (Controversy) ಅವರನ್ನು ಹುಡುಕಿಕೊಂಡು ಬರುತ್ತವೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಅವರು ಮಾಡುವ ಸಣ್ಣ ತಪ್ಪು ದೊಡ್ಡದಾಗಿ ಕಾಣುತ್ತದೆ. ಇದಕ್ಕೆ ಕೇಸ್​ಗಳು ಬಿದ್ದ ಉದಾಹರಣೆಯೂ ಇದೆ. ಅದೇ ರೀತಿ ಐದು ವರ್ಷದ ಹಿಂದಿನ ಪ್ರಕರಣವೊಂದರ ವಿಚಾರಣೆ ಈಗ ಆರಂಭಗೊಂಡಿದೆ. ಈ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಅವರಿಗೆ ಸಣ್ಣ ಪ್ರಮಾಣದ ಶಿಕ್ಷೆ ಆಗಲಿದೆ. ಇಲ್ಲದಿದ್ದರೆ ಅವರು 250 ರೂಪಾಯಿ ದಂಡ ಕಟ್ಟಬೇಕಾಗಿ ಬರಹುದು! ಹಾಗಾದರೆ, ಏನಿದು ಪ್ರಕರಣ? ಆ ಪ್ರಶ್ನೆಗೆ ಉತ್ತರ ಪಡೆಯಲು ಈ ಸ್ಟೋರಿ ಓದಿ.

2017ರ ಜನವರಿ 25ರಂದು ಶಾರುಖ್​ ಖಾನ್​ ನಟನೆಯ ‘ರಯೀಸ್​’ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಮಕಾಡೆ ಮಲಗಿತ್ತು. ವಿಮರ್ಶಕರಿಂದ ನೆಗೆಟಿವ್​ ವಿಮರ್ಶೆ ಬಂದಿದ್ದು ಮಾತ್ರವಲ್ಲ, ಬಾಕ್ಸ್​ ಆಫೀಸ್​ನಲ್ಲೂ ಸೊರಗಿತ್ತು. ಈ ಚಿತ್ರಕ್ಕೆ ಶಾರುಖ್​ ಖಾನ್​ ಅವರು ದೊಡ್ಡ ಮಟ್ಟದಲ್ಲೇ ಪ್ರಚಾರ ನೀಡಿದ್ದರು. ಈ ಚಿತ್ರದ ಪ್ರಮೋಷನ್​ಗಾಗಿ ಜನವರಿ 23ರಂದು ಅವರು ಟ್ರೇನ್​ನಲ್ಲಿ ತೆರಳಿದ್ದರು. ಗುಜರಾತ್​ನ ಬರೋಡಾ ರೈಲ್ವೆ ನಿಲ್ದಾಣದ ಮೂಲಕ ಅವರು ಸಂಚರಿಸುತ್ತಿದ್ದ ರೈಲು​ ಹಾದು ಹೋಗಿತ್ತು. ಶಾರುಖ್​ ಅವರನ್ನು ನೋಡಲು ರೈಲ್ವೆ ನಿಲ್ದಾಣದಲ್ಲಿ ಸಾಕಷ್ಟು ಜನರು ನೆರೆದಿದ್ದರು.

ಶಾರುಖ್​ ಖಾನ್​ ಅವರು ಬರೋಡಾ ರೈಲ್ವೆ ನಿಲ್ದಾಣದಲ್ಲಿ ತಮ್ಮ ಶರ್ಟ್​ಅನ್ನು ತೆಗೆದು ಅಭಿಮಾನಿಗಳತ್ತ ಎಸೆದಿದ್ದರು. ನೆಚ್ಚಿನ ನಟ ಎಸೆದ ಶರ್ಟ್​ಅನ್ನು ಬಾಚಿಕೊಳ್ಳಲು ಅಭಿಮಾನಿಗಳು ಮುತ್ತಿಕೊಂಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿತ್ತು. ಓರ್ವ ವ್ಯಕ್ತಿ ಮೃತಪಟ್ಟರೆ, ಇಬ್ಬರು ಪೊಲೀಸ್​ ಕಾನ್ಸ್​ಟೇಬಲ್​ಗಳು ಗಾಯಗೊಂಡಿದ್ದರು. ಈ ಕಾಲ್ತುಳಿತಕ್ಕೆ ಶಾರುಖ್​ ಅವರೇ ಕಾರಣ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಶಾರುಖ್​ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು. ಈ ಪ್ರಕರಣ ಈಗ ಗುಜರಾತ್​ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬಂದಿದೆ.

ಶಾರುಖ್​ ಪರ ವಾದ ಮಂಡಿಸಿದ ವಕೀಲ ಮಿಹಿರ್ ಠಾಕ್ರೆ, ‘ಶಾರುಖ್​ ಖಾನ್​ ರೈಲ್ವೆ ನಿಲ್ದಾಣದಲ್ಲಿ ಇಳಿದುಕೊಂಡಿಲ್ಲ. ಅವರು ರೈಲಿನಿಂದಲೇ ಕೈ ಬೀಸಿ, ಶರ್ಟ್​ ಎಸೆದಿದ್ದಾರೆ. ಈ ವೇಳೆ ಮೃತಪಟ್ಟ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅದರಿಂದಲೇ ಅವರು ಮೃತಪಟ್ಟ ಬಗ್ಗೆ ಕುಟುಂಬವೂ ಒಪ್ಪಿಕೊಂಡಿದೆ’ ಎಂದರು.

ಐಪಿಸಿ ಸೆಕ್ಷನ್​ 336 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಾರುಖ್​ ತಪ್ಪು ಸಾಬೀತಾದರೆ ಕೋರ್ಟ್​ 3 ತಿಂಗಳು ಶಿಕ್ಷೆ ಅಥವಾ 250 ರೂಪಾಯಿ ದಂಡ ವಿಧಿಸಬಹುದು. ಎರಡನ್ನೂ ವಿಧಿಸುವ ಅವಕಾಶ ಕೋರ್ಟ್​ಗೆ ಇದೆ. ಆದರೆ, ಪ್ರಕರಣವನ್ನು ಹೆಚ್ಚು ಎಳೆಯದೇ, ನಟ ಶಾರುಖ್​ ಕ್ಷಮೆ ಕೇಳಲಿ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.  ಪ್ರಕರಣದ ವಿಚಾರಣೆ ಫೆಬ್ರವರಿ 24ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: 80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?

ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK