‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’: ವೈರಲ್​ ಆಯ್ತು ಕಾಂಡೋಮ್ ಕಂಪನಿಯ ಟ್ವೀಟ್

ಈ ಪೋಸ್ಟ್​ಗೆ ಎಲ್ಲರೂ ಶುಭಾಶಯ ತಿಳಿಸಿದ್ದರು. ಡ್ಯುರೆಕ್ಸ್ ಕಂಪನಿ ಕೂಡ ಈ ದಂಪತಿಗೆ ಶುಭಾಶಯ ತಿಳಿಸಿ ವಿಶೇಷ ಪೋಸ್ಟ್​ ಮಾಡಿದೆ.

‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’: ವೈರಲ್​ ಆಯ್ತು ಕಾಂಡೋಮ್ ಕಂಪನಿಯ ಟ್ವೀಟ್
ರಣಬೀರ್​-ಆಲಿಯಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 27, 2022 | 8:30 PM

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ (Ranbir Kapoor) ಮನೆಗೆ ಹೊಸ ಸದಸ್ಯನ ಆಗಮನವಾಗುತ್ತಿದೆ. ಮದುವೆ ಆಗಿ ಕೇವಲ ಎರಡೂವರೆ ತಿಂಗಳಲ್ಲಿ ಈ ದಂಪತಿ ಸಿಹಿ ಸುದ್ದಿ ನೀಡಿದೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಆಲಿಯಾ ಘೋಷಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆಲಿಯಾಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬರುತ್ತಿದೆ. ಎಲ್ಲರೂ ಆಲಿಯಾ ಹಾಗೂ ರಣಬೀರ್ ದಂಪತಿ ಬಗ್ಗೆ ಸಂತಸದ ಮಾತುಗಳನ್ನು ಆಡುತ್ತಿದ್ದಾರೆ. ಈ ದಂಪತಿಗೆ ಕಾಂಡೋಮ್ ಕಂಪನಿ ಡ್ಯುರೆಕ್ಸ್ ಕೂಡ ಶುಭಾಶಯ ತಿಳಿಸಿದೆ. ಫನ್ನಿಯಾಗಿ ಟ್ವೀಟ್ ಮಾಡಿದೆ. ಈ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.

ಆಲಿಯಾ ಭಟ್ ಅವರು ಇಂದು (ಜೂನ್ 27) ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಆಸ್ಪತ್ರೆಯಲ್ಲಿದ್ದಾರೆ. ರಣಬೀರ್ ಕಪೂರ್ ಕೂಡ ಆಲಿಯಾ ಜತೆ ಇದ್ದಾರೆ. ‘ಶೀಘ್ರವೇ ನಮ್ಮ ಮಗು ಬರಲಿದೆ’ ಎಂದು ಆಲಿಯಾ ಕ್ಯಾಪ್ಶನ್ ನೀಡಿದ್ದಾರೆ. ಈ ಪೋಸ್ಟ್​ಗೆ ಎಲ್ಲರೂ ಶುಭಾಶಯ ತಿಳಿಸಿದ್ದರು. ಡ್ಯುರೆಕ್ಸ್ ಕಂಪನಿ ಕೂಡ ಈ ದಂಪತಿಗೆ ಶುಭಾಶಯ ತಿಳಿಸಿ ವಿಶೇಷ ಪೋಸ್ಟ್​ ಮಾಡಿದೆ.

ಇದನ್ನೂ ಓದಿ
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

ಈ ಬಗ್ಗೆ ಟ್ವೀಟ್ ಮಾಡಿರುವ ಡ್ಯುರೆಕ್ಸ್, ‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’ ಎಂದು ಬರೆದುಕೊಂಡಿದೆ. ಜತೆಗೆ ಶೀಘ್ರವೇ ತಂದೆ-ತಾಯಿ ಆಗುತ್ತಿರುವ ಈ ದಂಪತಿಗೆ ಶುಭಾಶಯ ತಿಳಿಸಿದೆ.

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಏಪ್ರಿಲ್​ 14ರಂದು ಮುಂಬೈನಲ್ಲಿ ವಿವಾಹವಾದರು. ಅವರ ದಾಂಪತ್ಯ ಜೀವನಕ್ಕೆ ಎಲ್ಲರೂ ವಿಶ್ ತಿಳಿಸಿದ್ದರು. ಈ ಸಂದರ್ಭದಲ್ಲೂ ಡ್ಯುರೆಕ್ಸ್ ಕಂಪೆನಿಯವರು ಟ್ವೀಟ್ ಒಂದನ್ನು ಮಾಡಿದ್ದರು. ‘ಪ್ರೀತಿಯ ರಣಬೀರ್ ಹಾಗೂ ಆಲಿಯಾ, ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಇಲ್ಲ ಎಂದರೆ ಫನ್​ ಇರುವುದಿಲ್ಲ’ ಎಂದು ಡ್ಯುರೆಕ್ಸ್​ನವರು ಬರೆದಿದ್ದರು.

ಡ್ಯುರೆಕ್ಸ್​​ನವರು ಈಗ ಮಾಡಿದ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಕಂಪನಿಯ ಮಾರ್ಕೆಟಿಂಗ್ ತಂತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಟ್ರೋಲ್ ಪೇಜ್​ಗಳಲ್ಲೂ ಈ ಪೋಸ್ಟ್ ಬಳಕೆ ಆಗುತ್ತಿದೆ.

ಇದನ್ನೂ ಓದಿ: ​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​

 ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?