AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​​ನಲ್ಲಿ ಅದ್ಭುತ ಸೃಷ್ಟಿಸಿದ ಸಿನಿಮಾ, ಸೀಕ್ವೆಲ್ ಘೋಷಿಸಿದ ನಿರ್ದೇಶಕ

Hanuman Ansh movie: ‘ಟಾಕ್ಸಿಕ್’, ‘ಇರುಮುಡಿ’ ಸಿನಿಮಾಗಳ ಅಬ್ಬರದ ನಡುವೆ ತೀರ ಸಣ್ಣ ಬಜೆಟ್​​ನ ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದೆ. ಕೇವಲ 1.8 ಕೋಟಿ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ ‘ಹನುಮಾನ್ ಅಂಶ್’ ಸಿನಿಮಾ 50 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದ್ದು, ಈ ಸಿನಿಮಾದ ಸೀಕ್ವೆಲ್ ಅನ್ನು ಸಹ ನಿರ್ದೇಶಕರು ಘೋಷಣೆ ಮಾಡಿದ್ದಾರೆ.

ಬಾಕ್ಸ್ ಆಫೀಸ್​​ನಲ್ಲಿ ಅದ್ಭುತ ಸೃಷ್ಟಿಸಿದ ಸಿನಿಮಾ, ಸೀಕ್ವೆಲ್ ಘೋಷಿಸಿದ ನಿರ್ದೇಶಕ
Hanuman Ansh
ಮಂಜುನಾಥ ಸಿ.
|

Updated on: Sep 02, 2026 | 7:01 PM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಬರೆಯುತ್ತಿರುವ ಸಣ್ಣ ಸಿನಿಮಾ
  • 1.8 ಕೋಟಿಯಲ್ಲಿ ನಿರ್ಮಾಣಗೊಂಡಿರುವ ಹನುಮಾನ್ ಅಂಶ್ ಸಿನಿಮಾ
  • ಸಿನಿಮಾದ ಸೀಕ್ವೆಲ್ ಅನ್ನು ಸಹ ಘೋಷಣೆ ಮಾಡಲಾಗಿದೆ.

ಈಗ ಬಿಡುಗಡೆ ಆಗುತ್ತಿರುವ ಬಹುತೇಕ ಪ್ಯಾನ್ ಇಂಡಿಯಾ (Pan India) ಸಿನಿಮಾಗಳು, 500 ಕೋಟಿ, 1000 ಕೋಟಿ ಬಜೆಟ್​​ ಹೊಂದಿರುತ್ತವೆ. ಬಾಕ್ಸ್ ಆಫೀಸ್​​ನಲ್ಲೂ ಬಹುತೇಕ ಅಷ್ಟೇ ಗಳಿಕೆ ಮಾಡುತ್ತವೆ ಅದೂ ಹಿಟ್ ಆದರೆ, ಪ್ಲಾಪ್ ಆದರೆ ಹಾಕಿದ ಹಣ ವ್ಯರ್ಥ. ಆದರೆ ಇಲ್ಲೊಂದು ಸಿನಿಮಾ ಕೇವಲ 1.8 ಕೋಟಿ ರೂಪಾಯಿಯಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಬಾಕ್ಸ್ ಆಫೀಸ್​​ನಲ್ಲಿ 50 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ. ಅದುವೇ ‘ಹನುಮಾನ್ ಅಂಶ್’. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 50 ಕೋಟಿ ರೂಪಾಯಿ ಗಳಿಕೆ ದಾಟಿದ ಬೆನ್ನಲ್ಲೆ ಸಿನಿಮಾದ ಸೀಕ್ವೆಲ್ ಅನ್ನು ನಿರ್ದೇಶಕ ಘೋಷಿಸಿದ್ದಾರೆ.

ಆಗಸ್ಟ್ 7ರಂದು ಬಿಡುಗಡೆ ಆದ ಈ ಬಹಳ ಸಣ್ಣ ಬಜೆಟ್​​ನ ಹಿಂದಿ ಸಿನಿಮಾ, ತಮ್ಮ ಕಂಟೆಂಟ್, ಹಾಡುಗಳಿಂದ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ‘ನೀಮ್ ಕರೋಲಿ ಬಾಬ’ ಅವರ ಜೀವನ ಆಧರಿಸಿದ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಭಕ್ತರನ್ನು ಬಹುವಾಗಿ ಸೆಳೆಯುತ್ತಿದೆ ಈ ಸಿನಿಮಾ. ಕೆಲವೇ ಕೆಲವು ಶೋಗಳ ಮೂಲಕ ಬಿಡುಗಡೆ ಆದ ಈ ಸಿನಿಮಾ ಈಗ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಶೋಗಳನ್ನು ಪಡೆದುಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಂತೂ ಅಬ್ಬರಿಸುತ್ತಿದೆ.

ಕೇವಲ 1.8 ಕೋಟಿ ಬಜೆಟ್​​ನಲ್ಲಿ ನಿರ್ಮಾಣ ಆದ ಈ ಸಿನಿಮಾ ಈಗಾಗಲೇ 50 ಕೋಟಿ ಗಳಿಕೆ ದಾಟಿದ್ದು, ಈ ವರ್ಷದ ಈ ವರೆಗಿನ ಅತ್ಯಂತ ಲಾಭದಾಯಕ ಸಿನಿಮಾ ಎನಿಸಿಕೊಂಡಿದೆ. ಬಜೆಟ್​​ನ 50 ಪಟ್ಟು ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್​​ನಲ್ಲಿ ಬಾಚಿಕೊಂಡಿದೆ ಈ ಸಿನಿಮಾ.

ಇದನ್ನೂ ಓದಿ:ವಾಮಿಕಾ ಕೈಯಲ್ಲಿ ಎಂಟು ಸಿನಿಮಾ, ಹೊಸ ಪ್ಯಾನ್ ಇಂಡಿಯಾ ಸ್ಟಾರ್ ನಟಿ?

ಇತ್ತೀಚೆಗೆ ಆಗ್ರಾದ ಮಲ್ಟಿಪ್ಲೆಕ್ಸ್‌ನಲ್ಲಿ ಪ್ರೇಕ್ಷಕರೊಂದಿಗೆ ಸಂವಾದ ನಡೆಸುವ ವೇಳೆ ಸೀಕ್ವೆಲ್ ಯೋಜನೆಗಳ ಕುರಿತು ಮಾತನಾಡಿದ ಸಿನಿಮಾದ ನಿರ್ದೇಶಕ ವಿಶಾಲ್, ಮುಂಬರುವ ಭಾಗದಲ್ಲಿ ನೀಮ್ ಕರೋಲಿ ಬಾಬಾ ಅವರ ಜೀವನದ ಪ್ರಮುಖ ಅಧ್ಯಾಯಗಳನ್ನು ಅನ್ವೇಷಿಸಲಾಗುವುದು ಎಂದಿದ್ದಾರೆ. ಅವರ ಜನ್ಮಸ್ಥಳವಾದ ಫಿರೋಜ್‌ಬಾದ್‌ನ ಮೇಲೆ ಕಥೆಯು ಮೊದಲು ಗಮನಹರಿಸಲಿದೆ ಮತ್ತು ನಂತರ ಆಗ್ರಾ, ಮಥುರಾ ಹಾಗೂ ಅವರ ಜೀವನ ಮತ್ತು ಆಧ್ಯಾತ್ಮಿಕ ಪಯಣಕ್ಕೆ ಸಂಬಂಧಿಸಿದ ಇತರ ಸ್ಥಳಗಳಿಗೆ ಕಥೆ ಸಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಇದೇ ವರ್ಷದ ಫೆಬ್ರವರಿ 20ರಂದು ಚಿತ್ರವನ್ನು ಅಧಿಕೃತವಾಗಿ ಘೋಷಿಸಿದಾಗಲೇ ಈ ಸಿನಿಮಾ ಅನ್ನು ಮೂರು ಭಾಗಗಳಾಗಿ ಬಿಡುಗಡೆ ಮಾಡುವ ಯೋಜನೆ ಇತ್ತು ಎಂದಿರುವ ಅವರು ಈ ಅಧ್ಯಾತ್ಮಿಕ ಕಥೆಯು ವಿಶಾಲ್ ಚತುರ್ವೇದಿ ಬರೆದಿರುವ ‘ಡಿವೈನ್ ಡಿಟೂರ್’ ಪುಸ್ತಕದಿಂದ ಸ್ಫೂರ್ತಿ ಪಡೆದಿದೆ ಎಂದು ಸಹ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು