ಅಮಿತಾಭ್​ ಬಚ್ಚನ್​ಗೆ 79ನೇ ಹುಟ್ಟುಹಬ್ಬ; ದಣಿವರಿಯದ ಚಿರ ಯುವಕನಿಗೆ ಜನ್ಮದಿನದ ಶುಭಾಶಯ

ನಟ ಅಮಿತಾಭ್​ ಬಚ್ಚನ್​ ಅವರ 79ನೇ ಜನ್ಮದಿನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನಿರ್ಮಾಪಕ ಆನಂದ್​ ಪಂಡಿತ್​ ಅವರ ಮನೆಯಲ್ಲಿ ಈ ಬಾರಿ ಹುಟ್ಟುಹಬ್ಬ ಆಚರಿಸಲಾಗಿದೆ. ಬಿಗ್​ ಬಿ ಪಾರ್ಟಿಗೆ ತೆರಳುತ್ತಿರುವ ಫೋಟೋ ವೈರಲ್​ ಆಗಿದೆ.

ಅಮಿತಾಭ್​ ಬಚ್ಚನ್​ಗೆ 79ನೇ ಹುಟ್ಟುಹಬ್ಬ; ದಣಿವರಿಯದ ಚಿರ ಯುವಕನಿಗೆ ಜನ್ಮದಿನದ ಶುಭಾಶಯ
ಅಮಿತಾಭ್ ಬಚ್ಚನ್
Follow us
| Updated By: ಮದನ್​ ಕುಮಾರ್​

Updated on:Oct 11, 2021 | 9:07 AM

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಅವರಿಗೆ ಇಂದು (ಅ.11) ಜನ್ಮದಿನದ ಸಂಭ್ರಮ. 79ನೇ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರು ಶುಭಾಶಯ ಕೋರುತ್ತಿದ್ದಾರೆ. ಈ ವಯಸ್ಸಿನಲ್ಲೂ ಹದಿಹರೆಯದ ಯುವಕನಂತೆ ಆ್ಯಕ್ಟೀವ್​ ಆಗಿರುವ ಅಮಿತಾಭ್​ ಬಚ್ಚನ್​ ಎಲ್ಲರಿಗೂ ಸ್ಫೂರ್ತಿ. ಈಗಲೂ ಅವರು ಬಹುಬೇಡಿಕೆಯ ನಟನಾಗಿ ಬಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಹೊಸ ಹೀರೋಗಳಿಗೆ ಭರ್ಜರಿ ಪೈಪೋಟಿ ನೀಡುವಂತಹ ಚಾರ್ಮ್​ ಈಗಲೂ ಅವರಲ್ಲಿದೆ. ಪ್ರಸ್ತುತ ಹಲವು ಸಿನಿಮಾಗಳಲ್ಲಿ ಅಮಿತಾಭ್​ ಬಚ್ಚನ್​ ನಟಿಸುತ್ತಿದ್ದಾರೆ.

ನಿರ್ಮಾಪಕ ಆನಂದ್​ ಪಂಡಿತ್​ ಅವರ ಮನೆಯಲ್ಲಿ ಈ ಬಾರಿ ಅಮಿತಾಭ್​ ಬಚ್ಚನ್​ ಜನ್ಮದಿನವನ್ನು ಆಚರಿಸಲಾಗಿದೆ. ಈ ಪಾರ್ಟಿಗೆ ತೆರಳುತ್ತಿರುವಾಗ ಕ್ಲಿಕ್ಕಿಸಿದ ಫೋಟೋವನ್ನು ಬಿಗ್​ ಬಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘80ರ ಕಡೆಗೆ ಪಯಣ’ ಎಂದು ಅವರು ಈ ಪೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಕೆಲವೇ ಗಂಟೆ ಕಳೆಯುವುದರೊಳಗೆ ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗೆ 7 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಬಟನ್​ ಒತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕಮೆಂಟ್​ಗಳ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಅತಿ ಹೆಚ್ಚು ಬ್ಯುಸಿ ಆಗಿರುವ ನಟರ ಪೈಕಿ ಅಮಿತಾಭ್​ ಬಚ್ಚನ್​ ಹೆಸರು ಕೂಡ ಮುಂಚೂಣಿಯಲ್ಲಿದೆ. ನಟನೆ ಮಾತ್ರವಲ್ಲದೆ, ಕಿರುತೆರೆಯ ‘ಕೌನ್​ ಬನೇಗಾ ಕರೋಡ್​ಪತಿ’ (KBC) ಕಾರ್ಯಕ್ರಮದ ನಿರೂಪಣೆಯಲ್ಲೂ ಬಿಗ್​ ಬಿ ತೊಡಗಿಕೊಂಡಿದ್ದಾರೆ. ಈ ಕಾರ್ಯಕ್ರಮದ 13ನೇ ಸೀಸನ್​ ಪ್ರಸಾರ ಆಗುತ್ತಿದೆ. ಸಿನಿಮಾ ಶೂಟಿಂಗ್​ಗಳ ನಡುವೆ ‘ಕೌನ್​ ಬನೇಗಾ ಕರೋಡ್​ಪತಿ’ ಶೋ ಸಲುವಾಗಿಯೂ ಅವರು ಸಮಯ ಹೊಂದಿಸಿಕೊಳ್ಳುತ್ತಾರೆ.

ಇಮ್ರಾನ್​ ಹಷ್ಮಿ ಜೊತೆ ಅಮಿತಾಭ್​ ನಟಿಸಿದ್ದ ‘ಜೆಹ್ರೆ’ ಚಿತ್ರ ಆ.27ರಂದು ತೆರೆಕಂಡಿತು. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ಜೊತೆ ‘ಗುಡ್​ ಬೈ’ ಸಿನಿಮಾದಲ್ಲಿ ಬಿಗ್​ ಬಿ ನಟಿಸುತ್ತಿದ್ದಾರೆ. ‘ಜುಂಡ್​’, ‘ಬ್ರಹ್ಮಾಸ್ತ್ರ’, ‘ಮೇಡೇ’, ‘ಊಂಚಾಯಿ’ ಮುಂತಾದ ಚಿತ್ರಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಮಹಾನಟಿ’ ಖ್ಯಾತಿಯ ನಿರ್ದೇಶಕ ನಾಗ್​ ಅಶ್ವಿನ್​ ಜೊತೆಗೂ ಅಮಿತಾಭ್​ ಒಂದು ಸಿನಿಮಾ ಮಾಡುತ್ತಿದ್ದು, ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

‘ಹಾಗಲ್ಲ ಸರ್​..’ ಎಂದು ಅಮಿತಾಭ್​ಗೆ ನಟನೆ ಹೇಳಿಕೊಟ್ಟ ದೀಪಿಕಾ, ಫರ್ಹಾ ಖಾನ್​; ವಿಡಿಯೋ ವೈರಲ್​

‘ಪಾನ್ ಮಸಾಲಾದ ಪ್ರಚಾರದಿಂದ ದಯವಿಟ್ಟು ಹಿಂದೆ ಸರಿಯಿರಿ’; ಅಮಿತಾಭ್​ಗೆ ತಂಬಾಕು ವಿರೋಧಿ ಸಂಘಟನೆ ಒತ್ತಾಯ

Published On - 8:59 am, Mon, 11 October 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ