AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಬಚ್ಚನ್​ಗೆ 79ನೇ ಹುಟ್ಟುಹಬ್ಬ; ದಣಿವರಿಯದ ಚಿರ ಯುವಕನಿಗೆ ಜನ್ಮದಿನದ ಶುಭಾಶಯ

ನಟ ಅಮಿತಾಭ್​ ಬಚ್ಚನ್​ ಅವರ 79ನೇ ಜನ್ಮದಿನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನಿರ್ಮಾಪಕ ಆನಂದ್​ ಪಂಡಿತ್​ ಅವರ ಮನೆಯಲ್ಲಿ ಈ ಬಾರಿ ಹುಟ್ಟುಹಬ್ಬ ಆಚರಿಸಲಾಗಿದೆ. ಬಿಗ್​ ಬಿ ಪಾರ್ಟಿಗೆ ತೆರಳುತ್ತಿರುವ ಫೋಟೋ ವೈರಲ್​ ಆಗಿದೆ.

ಅಮಿತಾಭ್​ ಬಚ್ಚನ್​ಗೆ 79ನೇ ಹುಟ್ಟುಹಬ್ಬ; ದಣಿವರಿಯದ ಚಿರ ಯುವಕನಿಗೆ ಜನ್ಮದಿನದ ಶುಭಾಶಯ
ಅಮಿತಾಭ್ ಬಚ್ಚನ್
TV9 Web
| Edited By: |

Updated on:Oct 11, 2021 | 9:07 AM

Share

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಅವರಿಗೆ ಇಂದು (ಅ.11) ಜನ್ಮದಿನದ ಸಂಭ್ರಮ. 79ನೇ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರು ಶುಭಾಶಯ ಕೋರುತ್ತಿದ್ದಾರೆ. ಈ ವಯಸ್ಸಿನಲ್ಲೂ ಹದಿಹರೆಯದ ಯುವಕನಂತೆ ಆ್ಯಕ್ಟೀವ್​ ಆಗಿರುವ ಅಮಿತಾಭ್​ ಬಚ್ಚನ್​ ಎಲ್ಲರಿಗೂ ಸ್ಫೂರ್ತಿ. ಈಗಲೂ ಅವರು ಬಹುಬೇಡಿಕೆಯ ನಟನಾಗಿ ಬಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಹೊಸ ಹೀರೋಗಳಿಗೆ ಭರ್ಜರಿ ಪೈಪೋಟಿ ನೀಡುವಂತಹ ಚಾರ್ಮ್​ ಈಗಲೂ ಅವರಲ್ಲಿದೆ. ಪ್ರಸ್ತುತ ಹಲವು ಸಿನಿಮಾಗಳಲ್ಲಿ ಅಮಿತಾಭ್​ ಬಚ್ಚನ್​ ನಟಿಸುತ್ತಿದ್ದಾರೆ.

ನಿರ್ಮಾಪಕ ಆನಂದ್​ ಪಂಡಿತ್​ ಅವರ ಮನೆಯಲ್ಲಿ ಈ ಬಾರಿ ಅಮಿತಾಭ್​ ಬಚ್ಚನ್​ ಜನ್ಮದಿನವನ್ನು ಆಚರಿಸಲಾಗಿದೆ. ಈ ಪಾರ್ಟಿಗೆ ತೆರಳುತ್ತಿರುವಾಗ ಕ್ಲಿಕ್ಕಿಸಿದ ಫೋಟೋವನ್ನು ಬಿಗ್​ ಬಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘80ರ ಕಡೆಗೆ ಪಯಣ’ ಎಂದು ಅವರು ಈ ಪೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಕೆಲವೇ ಗಂಟೆ ಕಳೆಯುವುದರೊಳಗೆ ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗೆ 7 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಬಟನ್​ ಒತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕಮೆಂಟ್​ಗಳ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಅತಿ ಹೆಚ್ಚು ಬ್ಯುಸಿ ಆಗಿರುವ ನಟರ ಪೈಕಿ ಅಮಿತಾಭ್​ ಬಚ್ಚನ್​ ಹೆಸರು ಕೂಡ ಮುಂಚೂಣಿಯಲ್ಲಿದೆ. ನಟನೆ ಮಾತ್ರವಲ್ಲದೆ, ಕಿರುತೆರೆಯ ‘ಕೌನ್​ ಬನೇಗಾ ಕರೋಡ್​ಪತಿ’ (KBC) ಕಾರ್ಯಕ್ರಮದ ನಿರೂಪಣೆಯಲ್ಲೂ ಬಿಗ್​ ಬಿ ತೊಡಗಿಕೊಂಡಿದ್ದಾರೆ. ಈ ಕಾರ್ಯಕ್ರಮದ 13ನೇ ಸೀಸನ್​ ಪ್ರಸಾರ ಆಗುತ್ತಿದೆ. ಸಿನಿಮಾ ಶೂಟಿಂಗ್​ಗಳ ನಡುವೆ ‘ಕೌನ್​ ಬನೇಗಾ ಕರೋಡ್​ಪತಿ’ ಶೋ ಸಲುವಾಗಿಯೂ ಅವರು ಸಮಯ ಹೊಂದಿಸಿಕೊಳ್ಳುತ್ತಾರೆ.

ಇಮ್ರಾನ್​ ಹಷ್ಮಿ ಜೊತೆ ಅಮಿತಾಭ್​ ನಟಿಸಿದ್ದ ‘ಜೆಹ್ರೆ’ ಚಿತ್ರ ಆ.27ರಂದು ತೆರೆಕಂಡಿತು. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ಜೊತೆ ‘ಗುಡ್​ ಬೈ’ ಸಿನಿಮಾದಲ್ಲಿ ಬಿಗ್​ ಬಿ ನಟಿಸುತ್ತಿದ್ದಾರೆ. ‘ಜುಂಡ್​’, ‘ಬ್ರಹ್ಮಾಸ್ತ್ರ’, ‘ಮೇಡೇ’, ‘ಊಂಚಾಯಿ’ ಮುಂತಾದ ಚಿತ್ರಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಮಹಾನಟಿ’ ಖ್ಯಾತಿಯ ನಿರ್ದೇಶಕ ನಾಗ್​ ಅಶ್ವಿನ್​ ಜೊತೆಗೂ ಅಮಿತಾಭ್​ ಒಂದು ಸಿನಿಮಾ ಮಾಡುತ್ತಿದ್ದು, ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

‘ಹಾಗಲ್ಲ ಸರ್​..’ ಎಂದು ಅಮಿತಾಭ್​ಗೆ ನಟನೆ ಹೇಳಿಕೊಟ್ಟ ದೀಪಿಕಾ, ಫರ್ಹಾ ಖಾನ್​; ವಿಡಿಯೋ ವೈರಲ್​

‘ಪಾನ್ ಮಸಾಲಾದ ಪ್ರಚಾರದಿಂದ ದಯವಿಟ್ಟು ಹಿಂದೆ ಸರಿಯಿರಿ’; ಅಮಿತಾಭ್​ಗೆ ತಂಬಾಕು ವಿರೋಧಿ ಸಂಘಟನೆ ಒತ್ತಾಯ

Published On - 8:59 am, Mon, 11 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ