AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಡುಗಿಯರೂ ಅಸಹ್ಯವಾಗಿ ಮುಟ್ಟುತ್ತಾರೆ’: ಕೆಟ್ಟ ಘಟನೆ ವಿವರಿಸಿದ ‘ಹೀರಾಮಂಡಿ’ ನಟಿ

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ಸಂಜೀದಾ ಶೇಖ್​ ನಟಿಸಿದ್ದಾರೆ. ಇದರಲ್ಲಿ ಅವರು ವಹೀದಾ ಎಂಬ ಪಾತ್ರ ಮಾಡಿದ್ದಾರೆ. ಅವರ ನಟನೆಗೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಈ ನಡುವೆ ಸಂಜೀದಾ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ತಮ್ಮ ಜೀವನದಲ್ಲಿ ನಡೆದ ಒಂದು ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದಾರೆ.

‘ಹುಡುಗಿಯರೂ ಅಸಹ್ಯವಾಗಿ ಮುಟ್ಟುತ್ತಾರೆ’: ಕೆಟ್ಟ ಘಟನೆ ವಿವರಿಸಿದ ‘ಹೀರಾಮಂಡಿ’ ನಟಿ
ಸಂಜೀದಾ ಶೇಖ್​
ಮದನ್​ ಕುಮಾರ್​
|

Updated on: Jun 02, 2024 | 10:21 PM

Share

ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ‘ಹೀರಾಮಂಡಿ’ (Heeramandi) ವೆಬ್​ ಸರಣಿಯಲ್ಲಿ ಅನೇಕ ಕಲಾವಿದರು ನಟಿಸಿದ್ದಾರೆ. ಪ್ರಮುಖವಾಗಿ ನಟಿಯರಿಗೆ ಈ ವೆಬ್​ ಸಿರೀಸ್​ನಲ್ಲಿ ಪ್ರಾಮುಖ್ಯತೆ ಸಿಕ್ಕಿದೆ. ಒಂದು ಮುಖ್ಯವಾದ ಪಾತ್ರದಲ್ಲಿ ನಟಿ ಸಂಜೀದಾ ಶೇಖ್​ (Sanjeeda Shaikh) ಅವರು ಅಭಿನಯಿಸಿದ್ದಾರೆ. ‘ಹೀರಾಮಂಡಿ’ ಬಿಡುಗಡೆ ಆದ ಬಳಿಕ ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಒಂದು ಕಹಿ ಘಟನೆಯನ್ನು ಮೆಲುಕು ಹಾಕಿದ್ದಾರೆ. ಯುವತಿಯೊಬ್ಬಳಿಂದ ತಮಗೆ ಕೆಟ್ಟ ಅನುಭವ ಆಗಿತ್ತು ಎಂದು ಸಂಜೀದಾ ಶೇಖ್​ ಹೇಳಿದ್ದಾರೆ.

‘ಹುಡುಗಿಯೊಬ್ಬಳು ತುಂಬ ಅಶ್ಲೀಲವಾಗಿ ನಡೆದುಕೊಂಡ ಘಟನೆ ನನಗೆ ನೆನಪಿದೆ. ನಾನು ಒಂದು ನೈಟ್​ ಕ್ಲಬ್​ನಲ್ಲಿದ್ದೆ. ನನ್ನ ಬಳಿ ಬಂದ ಯುವತಿಯೊಬ್ಬಳು ನನ್ನ ಸ್ತನಗಳನ್ನು ಮುಟ್ಟಿ ಮುಂದಕ್ಕೆ ಸಾಗಿದಳು. ಅದರಿಂದ ನನಗೆ ಶಾಕ್​ ಆಯಿತು. ಏನಾಯಿತು ಎಂಬುದೇ ತಿಳಿಯಲಿಲ್ಲ. ಗಂಡಸರು ಕೆಟ್ಟದಾಗಿ ವರ್ತಿಸುತ್ತಾರೆ ಎಂಬುದನ್ನು ನಾವು ಕೇಳಿದ್ದೇವೆ. ಆ ವಿಚಾರದಲ್ಲಿ ಹುಡುಗಿಯರೂ ಕಡಿಮೆ ಏನಿಲ್ಲ’ ಎಂದು ಸಂಜೀದಾ ಶೇಖ್​ ಹೇಳಿದ್ದಾರೆ.

‘ನೀವು ತಪ್ಪು ಹಾದಿಯಲ್ಲಿ ಹೋಗಿದ್ದರೆ ಅದರಲ್ಲಿ ಗಂಡು-ಹೆಣ್ಣು ಎಂಬ ಭೇದ ಇಲ್ಲ. ತಪ್ಪು ತಪ್ಪೇ. ನಿಮ್ಮ ಜೊತೆ ಮಹಿಳೆ ತಪ್ಪಾಗಿ ನಡೆದುಕೊಂಡಿದ್ದರೂ ಆಕೆಗೆ ಹೇಳಿ’ ಎಂದಿದ್ದಾರೆ ಸಂಜೀದಾ ಶೇಖ್​. ಹಿಂದಿ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಸಂಜೀದಾ ಫೇಮಸ್​ ಆಗಿದ್ದಾರೆ. ‘ಹೀರಾಮಂಡಿ’ ವೆಬ್​ ಸರಣಿಯ ಯಶಸ್ಸಿನಿಂದ ಅವರಿಗೆ ಅವಕಾಶಗಳು ಹೆಚ್ಚಾಗಿವೆ.

ಇದನ್ನೂ ಓದಿ: ‘ಹೀರಾಮಂಡಿ’ ಸೂಪರ್​ ಹಿಟ್​ ಆದ್ರೂ ಶರ್ಮಿನ್​ಗೆ ತಪ್ಪಲಿಲ್ಲ ಟ್ರೋಲ್​ ಕಾಟ

2012ರಲ್ಲಿ ಸಂಜೀದಾ ಶೇಖ್​ ಅವರು ಆಮಿರ್​ ಅಲಿ ಜೊತೆ ಮದುವೆ ಆಗಿದ್ದರು. ಆದರೆ 2021ರಲ್ಲಿ ಅವರು ವಿಚ್ಛೇದನ ನೀಡಿದರು. ಬಳಿಕ ನಟ ಹರ್ಷವರ್ಧನ್​ ರಾಣೆ ಜೊತೆ ಸಂಜೀದಾ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ಗಾಸಿಪ್​ ಹರಡಿತ್ತು. ಇಬ್ಬರೂ ಜೊತೆಯಾಗಿ ಪ್ರವಾಸಕ್ಕೆ ತೆರಳಿದ್ದಾರೆ ಎಂದು ವರದಿ ಆಗಿತ್ತು. ಡೇಟಿಂಗ್​ ವಿಚಾರವನ್ನು ಹರ್ಷವರ್ಧನ್​ ರಾಣೆ ಅವರು ತಳ್ಳಿ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್