AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಡುಗಿಯರೂ ಅಸಹ್ಯವಾಗಿ ಮುಟ್ಟುತ್ತಾರೆ’: ಕೆಟ್ಟ ಘಟನೆ ವಿವರಿಸಿದ ‘ಹೀರಾಮಂಡಿ’ ನಟಿ

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ಸಂಜೀದಾ ಶೇಖ್​ ನಟಿಸಿದ್ದಾರೆ. ಇದರಲ್ಲಿ ಅವರು ವಹೀದಾ ಎಂಬ ಪಾತ್ರ ಮಾಡಿದ್ದಾರೆ. ಅವರ ನಟನೆಗೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಈ ನಡುವೆ ಸಂಜೀದಾ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ತಮ್ಮ ಜೀವನದಲ್ಲಿ ನಡೆದ ಒಂದು ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದಾರೆ.

‘ಹುಡುಗಿಯರೂ ಅಸಹ್ಯವಾಗಿ ಮುಟ್ಟುತ್ತಾರೆ’: ಕೆಟ್ಟ ಘಟನೆ ವಿವರಿಸಿದ ‘ಹೀರಾಮಂಡಿ’ ನಟಿ
ಸಂಜೀದಾ ಶೇಖ್​
ಮದನ್​ ಕುಮಾರ್​
|

Updated on: Jun 02, 2024 | 10:21 PM

Share

ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ‘ಹೀರಾಮಂಡಿ’ (Heeramandi) ವೆಬ್​ ಸರಣಿಯಲ್ಲಿ ಅನೇಕ ಕಲಾವಿದರು ನಟಿಸಿದ್ದಾರೆ. ಪ್ರಮುಖವಾಗಿ ನಟಿಯರಿಗೆ ಈ ವೆಬ್​ ಸಿರೀಸ್​ನಲ್ಲಿ ಪ್ರಾಮುಖ್ಯತೆ ಸಿಕ್ಕಿದೆ. ಒಂದು ಮುಖ್ಯವಾದ ಪಾತ್ರದಲ್ಲಿ ನಟಿ ಸಂಜೀದಾ ಶೇಖ್​ (Sanjeeda Shaikh) ಅವರು ಅಭಿನಯಿಸಿದ್ದಾರೆ. ‘ಹೀರಾಮಂಡಿ’ ಬಿಡುಗಡೆ ಆದ ಬಳಿಕ ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಒಂದು ಕಹಿ ಘಟನೆಯನ್ನು ಮೆಲುಕು ಹಾಕಿದ್ದಾರೆ. ಯುವತಿಯೊಬ್ಬಳಿಂದ ತಮಗೆ ಕೆಟ್ಟ ಅನುಭವ ಆಗಿತ್ತು ಎಂದು ಸಂಜೀದಾ ಶೇಖ್​ ಹೇಳಿದ್ದಾರೆ.

‘ಹುಡುಗಿಯೊಬ್ಬಳು ತುಂಬ ಅಶ್ಲೀಲವಾಗಿ ನಡೆದುಕೊಂಡ ಘಟನೆ ನನಗೆ ನೆನಪಿದೆ. ನಾನು ಒಂದು ನೈಟ್​ ಕ್ಲಬ್​ನಲ್ಲಿದ್ದೆ. ನನ್ನ ಬಳಿ ಬಂದ ಯುವತಿಯೊಬ್ಬಳು ನನ್ನ ಸ್ತನಗಳನ್ನು ಮುಟ್ಟಿ ಮುಂದಕ್ಕೆ ಸಾಗಿದಳು. ಅದರಿಂದ ನನಗೆ ಶಾಕ್​ ಆಯಿತು. ಏನಾಯಿತು ಎಂಬುದೇ ತಿಳಿಯಲಿಲ್ಲ. ಗಂಡಸರು ಕೆಟ್ಟದಾಗಿ ವರ್ತಿಸುತ್ತಾರೆ ಎಂಬುದನ್ನು ನಾವು ಕೇಳಿದ್ದೇವೆ. ಆ ವಿಚಾರದಲ್ಲಿ ಹುಡುಗಿಯರೂ ಕಡಿಮೆ ಏನಿಲ್ಲ’ ಎಂದು ಸಂಜೀದಾ ಶೇಖ್​ ಹೇಳಿದ್ದಾರೆ.

‘ನೀವು ತಪ್ಪು ಹಾದಿಯಲ್ಲಿ ಹೋಗಿದ್ದರೆ ಅದರಲ್ಲಿ ಗಂಡು-ಹೆಣ್ಣು ಎಂಬ ಭೇದ ಇಲ್ಲ. ತಪ್ಪು ತಪ್ಪೇ. ನಿಮ್ಮ ಜೊತೆ ಮಹಿಳೆ ತಪ್ಪಾಗಿ ನಡೆದುಕೊಂಡಿದ್ದರೂ ಆಕೆಗೆ ಹೇಳಿ’ ಎಂದಿದ್ದಾರೆ ಸಂಜೀದಾ ಶೇಖ್​. ಹಿಂದಿ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಸಂಜೀದಾ ಫೇಮಸ್​ ಆಗಿದ್ದಾರೆ. ‘ಹೀರಾಮಂಡಿ’ ವೆಬ್​ ಸರಣಿಯ ಯಶಸ್ಸಿನಿಂದ ಅವರಿಗೆ ಅವಕಾಶಗಳು ಹೆಚ್ಚಾಗಿವೆ.

ಇದನ್ನೂ ಓದಿ: ‘ಹೀರಾಮಂಡಿ’ ಸೂಪರ್​ ಹಿಟ್​ ಆದ್ರೂ ಶರ್ಮಿನ್​ಗೆ ತಪ್ಪಲಿಲ್ಲ ಟ್ರೋಲ್​ ಕಾಟ

2012ರಲ್ಲಿ ಸಂಜೀದಾ ಶೇಖ್​ ಅವರು ಆಮಿರ್​ ಅಲಿ ಜೊತೆ ಮದುವೆ ಆಗಿದ್ದರು. ಆದರೆ 2021ರಲ್ಲಿ ಅವರು ವಿಚ್ಛೇದನ ನೀಡಿದರು. ಬಳಿಕ ನಟ ಹರ್ಷವರ್ಧನ್​ ರಾಣೆ ಜೊತೆ ಸಂಜೀದಾ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ಗಾಸಿಪ್​ ಹರಡಿತ್ತು. ಇಬ್ಬರೂ ಜೊತೆಯಾಗಿ ಪ್ರವಾಸಕ್ಕೆ ತೆರಳಿದ್ದಾರೆ ಎಂದು ವರದಿ ಆಗಿತ್ತು. ಡೇಟಿಂಗ್​ ವಿಚಾರವನ್ನು ಹರ್ಷವರ್ಧನ್​ ರಾಣೆ ಅವರು ತಳ್ಳಿ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್