AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಂದ್ರ ಹಾಗೂ ಹೇಮಾ ಮಾಲಿನ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?

ಧರ್ಮೇಂದ್ರ-ಹೇಮಾ ಮಾಲಿನಿ ಮದುವೆ, ಅವರ ವಯಸ್ಸಿನ ಅಂತರ ಹಾಗೂ ವಿವಾದಗಳ ಬಗ್ಗೆ ಈ ಲೇಖನ ವಿವರಿಸುತ್ತದೆ. ಮೊದಲ ಪತ್ನಿ ಮತ್ತು ಮಕ್ಕಳಿದ್ದರೂ ಧರ್ಮೇಂದ್ರ ಹೇಮಾ ಮಾಲಿನಿ ಅವರನ್ನು ವಿವಾಹವಾದರು. ನಂತರ ಡಿಯೋಲ್ ಕುಟುಂಬದೊಂದಿಗಿನ ಸಂಬಂಧ ಸುಧಾರಿಸಿದೆ. ಹೇಮಾ ಮಾಲಿನಿ ಮತ್ತು ಸನ್ನಿ ಡಿಯೋಲ್ ನಡುವಿನ ವಯಸ್ಸಿನ ಅಂತರ ಹಾಗೂ ಧರ್ಮೇಂದ್ರ ಅವರ ಇತ್ತೀಚಿನ ಆರೋಗ್ಯ ಅಪ್‌ಡೇಟ್ ಕುರಿತು ವಿವರಗಳು ಇಲ್ಲಿವೆ.

ಧರ್ಮೇಂದ್ರ ಹಾಗೂ ಹೇಮಾ ಮಾಲಿನ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?
ಹೇಮಾ-ಧರ್ಮೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 12, 2025 | 8:13 AM

Share

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Dharmendra) ಮತ್ತು ಅವರ ಎರಡನೇ ಪತ್ನಿ ಹೇಮಾ ಮಾಲಿನಿ ನಡುವೆ ಮದುವೆ ನಡೆದು ಸಾಕಷ್ಟು ಸಮಯ ಕಳೆದಿದೆ. ಇವರ ಸಂಬಂಧವು ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಚರ್ಚೆಯ ವಿಷಯವಾಗಿದೆ. ಹೇಮಾ ಮಾಲಿನಿಯನ್ನು ಮದುವೆ ಆಗುವಾಗ ಧರ್ಮೇಂದ್ರ ಅವರಿಗೆ ಆಗಲೇ ವಿವಾಹ ಆಗಿತ್ತು. ಆ ಸಮಯದಲ್ಲಿ ಇವರ ಮಧ್ಯೆ ತುಂಬಾನೇ ದೊಡ್ಡ ವಯಸ್ಸಿನ ಅಂತರ ಇತ್ತು.

ವಿವಾಹ ನಡೆಯುವಾಗ ಹೇಮಾ ಮಾಲಿನಿಗೆ 32 ವರ್ಷ ಹಾಗೂ ಧರ್ಮೇಂದ್ರ ಅವರಿಗೆ 45 ವರ್ಷ ಆಗಿತ್ತು. ಆದರೂ ಧರ್ಮೇಂದ್ರ ಅವರನ್ನು ವಿವಾಹವಾದರು ಹೇಮಾ ಮಾಲಿನಿ. ಆ ಸಮಯದಲ್ಲಿ, ಇಬ್ಬರ ಮದುವೆಯ ಬಗ್ಗೆ ಸಾಕಷ್ಟು ವಿವಾದಗಳು ನಡೆದವು. ಧರ್ಮೇಂದ್ರ ಅವರ ನಿರ್ಧಾರವು ಅವರ ಮನೆಯಲ್ಲಿ ಸಾಕಷ್ಟು ವಿವಾದಗಳಿಗೆ ಕಾರಣವಾಯಿತು. ಏಕೆಂದರೆ ಧರ್ಮೇಂದ್ರ ಅವರು ತಮ್ಮ ಮೊದಲ ಪತ್ನಿ ಮತ್ತು ನಾಲ್ಕು ಮಕ್ಕಳನ್ನು ಹೊಂದಿದ್ದಾಗ ಈ ಹೆಜ್ಜೆ ಇಟ್ಟಿದ್ದರು.

ಧರ್ಮೇಂದ್ರ ಹೇಮಾ ಮಾಲಿನಿಯನ್ನು ಮದುವೆಯಾದ ನಂತರ,  ಮೊದಲ ಪತ್ನಿ ಪ್ರಕಾಶ್ ಕೌರ್ ಮಮತ್ತು ತಮ್ಮ ಮಕ್ಕಳಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಅವರಿಂದ ದೂರ ಸರಿಯಬೇಕಾಯಿತು. ಧರ್ಮೇಂದ್ರ ಅವರ ಕುಟುಂಬದೊಂದಿಗಿನ ಸಂಬಂಧ ಹದಗೆಟ್ಟಿತ್ತು. ಆದರೆ ನಂತರ ಎಲ್ಲವೂ ಸಾಮಾನ್ಯವಾಯಿತು. ಹೇಮಾ ಮಾಲಿನಿ ಈಗ ಸನ್ನಿ ಮತ್ತು ಬಾಬಿ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಹೇಮಾ ಮಾಲಿನಿ ಮತ್ತು ಸನ್ನಿ ಡಿಯೋಲ್ ನಡುವೆ ವಯಸ್ಸಿನಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ.

ಸನ್ನಿ ತಮ್ಮ ಮಲತಾಯಿಗಿಂತ ಕೇವಲ 9 ವರ್ಷ ಚಿಕ್ಕವರು. ಹೇಮಾ ಮಾಲಿನಿ ಮತ್ತು ಬಾಬಿ ಡಿಯೋಲ್ ನಡುವೆ 21 ವರ್ಷಗಳ ವಯಸ್ಸಿನ ಅಂತರವಿದೆ. ಒಮ್ಮೆ, ಮಾತನಾಡುತ್ತಿರುವಾಗ, ಒಬ್ಬ ವ್ಯಕ್ತಿ ಹೇಮಾ ಮಾಲಿನಿಯವರನ್ನು ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ನಿಮ್ಮನ್ನು ಏನು ಕರೆಯುತ್ತಾರೆ ಎಂದು ಕೇಳಿದ್ದರು. ಇದಕ್ಕೆ ನಟಿ ‘ಹೇಮಾ ಜಿ’ ಎಂದು ಉತ್ತರಿಸಿದ್ದರು.

ಇದನ್ನೂ ಓದಿ: ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಮಗ ಸನ್ನಿ ಡಿಯೋಲ್

ಸದ್ಯ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಕಡೆಯಿಂದ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!