AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hema Malini: ‘ಸೀರೆಯ ಸೆರಗು ಜಾರಿ ಬೀಳಿಸುವ ಆಲೋಚನೆಯಲ್ಲಿ ಆ ನಿರ್ದೇಶಕ ಇದ್ದ’; ಹೇಮಾ ಮಾಲಿನಿ

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹೆಚ್ಚಿದೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದರ ಜೊತೆಗೆ ಖಾಸಗಿ ಭಾಗ ತೋರಿಸುವಂತೆ ನಿರ್ದೇಶಕರು ಒತ್ತಾಯ ಹೇರಿದರು ಎಂಬ ಆರೋಪವನ್ನೂ ಕೆಲವರು ಮಾಡಿದ್ದಿದೆ.

Hema Malini: ‘ಸೀರೆಯ ಸೆರಗು ಜಾರಿ ಬೀಳಿಸುವ ಆಲೋಚನೆಯಲ್ಲಿ ಆ ನಿರ್ದೇಶಕ ಇದ್ದ’; ಹೇಮಾ ಮಾಲಿನಿ
ಹೇಮಾ ಮಾಲಿನಿ
ರಾಜೇಶ್ ದುಗ್ಗುಮನೆ
|

Updated on: Jul 10, 2023 | 11:44 AM

Share

ಚಿತ್ರರಂಗದಲ್ಲಿ ಅನೇಕರಿಗೆ ಅನೇಕ ರೀತಿಯ ಅನುಭವ ಆಗಿರುತ್ತದೆ. ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮೆರೆದವರಿಗೂ ಅಹಿತಕರ ಅನುಭವ ಆದ ಉದಾಹರಣೆ ಇದೆ. ಹಿರಿಯ ನಟಿ, ಸಂಸದೆ ಹೇಮಾ ಮಾಲಿನಿಗೂ (Hema Malini) ಇದೇ ರೀತಿಯ ಅನುಭವ ಆಗಿತ್ತು. ಈ ಬಗ್ಗೆ ಅವರು ಈಗ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ. ನಿರ್ದೇಶಕನ ಕೆಟ್ಟ ಮನಸ್ಥಿತಿ ಯಾವ ರೀತಿಯಲ್ಲಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ಆದರೆ ಆ ನಿರ್ದೇಶಕನ ಹೆಸರನ್ನು ಅವರು ಎಲ್ಲಿಯೂ ರಿವೀಲ್ ಮಾಡಿಲ್ಲ. ಡೈರೆಕ್ಟರ್ ಹೆಸರನ್ನು ಅವರು ಹೇಳಬೇಕಿತ್ತು ಎಂದು ಫ್ಯಾನ್ಸ್ ಬಯಸಿದ್ದಾರೆ.

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹೆಚ್ಚಿದೆ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದರ ಜೊತೆಗೆ ಖಾಸಗಿ ಭಾಗ ತೋರಿಸುವಂತೆ ನಿರ್ದೇಶಕರು ಒತ್ತಾಯ ಹೇರಿದರು ಎಂಬ ಆರೋಪವನ್ನೂ ಕೆಲವರು ಮಾಡಿದ್ದಿದೆ. ನಟಿ ಹೇಮಾ ಮಾಲಿನಿ ಅವರು ಮಾಡಿರುವ ಆರೋಪ ಕೂಡ ಇದೇ ರೀತಿಯದ್ದು. ಅವರು ಸಂದರ್ಶನ ಒಂದರಲ್ಲಿ ಈ ಕುರಿತು ಹೇಳಿದ್ದಾರೆ.

‘ಒಂದು ದೃಶ್ಯದ ಶೂಟಿಂಗ್ ಇತ್ತು. ನಾನು ಸೀರೆ ಉಟ್ಟು ಬಂದಿದ್ದೆ. ನಾನು ನನ್ನ ಸೀರೆಯ ಸೆರಗಿಗೆ ಸದಾ ಪಿನ್ ಧರಿಸುತ್ತಿದ್ದೆ. ಆ ಪಿನ್ ತೆಗೆಯುವಂತೆ ನಿರ್ದೇಶಕರು ಹೇಳಿದರು. ಹಾಗಾದಲ್ಲಿ ಸೀರೆ ಬಿದ್ದು ಹೋಗುತ್ತದೆ ಎಂದು ನಾನು ಹೇಳಿದೆ. ‘ಅದೇ ಬೇಕಾಗಿರುವುದು’ ಎಂದು ನಿರ್ದೇಶಕರು ಹೇಳಿದರು’ ಎಂದಿದ್ದಾರೆ ಹೇಮಾ ಮಾಲಿನಿ. ಮುಂದೇನಾಯಿತು ಎಂಬ ವಿಚಾರವನ್ನು ಅವರು ರಿವೀಲ್ ಮಾಡಿಲ್ಲ.

ಇದನ್ನೂ ಓದಿ: ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ

ಹೇಮಾ ಮಾಲಿನಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ತುಮ್ ಹಸೀನ್ ಮೇ ಜವಾನ್’ (1970), ‘ರಾಜಾ ಜಾನಿ ಆ್ಯಂಡ್ ಸೀತಾ ಔರ್ ಗೀತಾ (1972), ‘ಶೋಲೆ’ (1975), ‘ಡ್ರೀಮ್ ಗರ್ಲ್​ ಆ್ಯಂಡ್ ‘ಕಿನಾರಾ’ (1977) ‘ಸೆತ್ತೇ ಪೇ ಸತ್ತಾ’ (1982) ಸೇರಿ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅವರು ಮಥುರಾ ಕ್ಷೇತ್ರದಿಂದ ಸಂಸದೆ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ