AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಹೇಮಾ ಮಾಲಿನಿಗೆ ಆಗಿತ್ತು ಭಯಾನಕ ಅನುಭವ

ಹೇಮಾ ಮಾಲಿನಿ ಚಿತ್ರರಂಗಕ್ಕೆ ಬಂದ ಆರಂಭದ ದಿನಗಳು ಅವು. ಅವರು ಬಾಂದ್ರಾದ ಫ್ಲ್ಯಾಟ್​ ಒಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆದ  ಘಟನೆ ಬಗ್ಗೆ ಕೆಲ ವರ್ಷಗಳ ಹಿಂದೆ ಹೇಳಿಕೊಂಡಿದ್ದರು. ‘

ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಹೇಮಾ ಮಾಲಿನಿಗೆ ಆಗಿತ್ತು ಭಯಾನಕ ಅನುಭವ
ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಹೇಮಾ ಮಾಲಿನಿಗೆ ಆಗಿತ್ತು ಭಯಾನಕ ಅನುಭವ
TV9 Web
| Edited By: |

Updated on: Sep 16, 2021 | 8:44 PM

Share

ಭೂತಪ್ರೇತಗಳು ಇವೆ ಎನ್ನುವುದನ್ನು ಅನೇಕರು ನಂಬುತ್ತಾರೆ. ಇನ್ನೂ ಕೆಲವರು ನಂಬುವುದಿಲ್ಲ. ಕೆಲವರಿಗೆ ಈ ಬಗ್ಗೆ ಅನುಭವ ಕೂಡ ಆಗಿರುತ್ತದೆ. ಬಾಲಿವುಡ್ ಖ್ಯಾತ ನಟಿ ಹೇಮಾ ಮಾಲಿನಿಗೆ ಚಿತ್ರರಂಗಕ್ಕೆ ಬಂದ ಆರಂಭದಲ್ಲಿ ಹಿಂಗೊಂದು ಭಯಾನಕ ಅನುಭವ ಆಗಿತ್ತು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

ಹೇಮಾ ಮಾಲಿನಿ ಚಿತ್ರರಂಗಕ್ಕೆ ಬಂದ ಆರಂಭದ ದಿನಗಳು ಅವು. ಅವರು ಬಾಂದ್ರಾದ ಫ್ಲ್ಯಾಟ್​ ಒಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆದ  ಘಟನೆ ಬಗ್ಗೆ ಕೆಲ ವರ್ಷಗಳ ಹಿಂದೆ ಹೇಳಿಕೊಂಡಿದ್ದರು. ‘ನಾನು ‘ಸಪ್ನೋಂ ಕಾ ಸೌದಾಗರ್​’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದೆ. ಆಗಲೇ ‘ಅಭಿನೇತ್ರಿ’ ಸಿನಿಮಾ ನನಗೆ ಸಿಕ್ಕಿತ್ತು. ನಾನು ಆಗ ಬಾಂದ್ರಾ ಅಪಾರ್ಟ್​ಮೆಂಟ್​ನಲ್ಲಿದ್ದೆ. ಅಲ್ಲಿಂದ, ನಾವು ಜುಹುಗೆ ಶಿಫ್ಟ್​ ಆದೆವು. ಆಗ ನಮಗೆ ವಿಚಿತ್ರ ಅನುಭವ ಆಗೋಕೆ ಆರಂಭವಾಯ್ತು’ ಎಂದಿದ್ದಾರೆ ಹೇಮಾ.

‘ಪ್ರತಿ ದಿನ ರಾತ್ರಿ ಯಾರೋ ನನ್ನನ್ನು ಉಸಿರುಗಟ್ಟಿಸುತ್ತಿದ್ದಾರೆ ಅನಿಸುತ್ತಿತ್ತು. ಉಸಿರಾಡಲು ಕಷ್ಟಪಡುತ್ತಿದೆ. ಒಂದೆರಡು ರಾತ್ರಿ ಈ ರೀತಿ ಆಗಿದ್ದರೆ ನಾವು ಹೇಗೋ ನಿರ್ಲಕ್ಷ್ಯ ಮಾಡಬಹುದಿತ್ತು. ಆದರೆ, ನಿತ್ಯ ರಾತ್ರಿ ಇದೇ ರೀತಿ ಆಗುತ್ತಿತ್ತು. ಈ ಕಾರಣಕ್ಕೆ ನಾವು ನಮ್ಮದೇ ಅಪಾರ್ಟ್​ಮೆಂಟ್​ ಕೊಂಡುಕೊಳ್ಳಲು ನಿರ್ಧರಿಸಿದೆವು’ ಎಂದು ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ ಅವರು.

ನಂತರ ಹೇಮಾ ಮಾಲಿನಿ ಬೇರೆ ಮನೆಗೆ ಸ್ಥಳಾಂತರಗೊಂಡರು. ಆ ಸಮಯದಲ್ಲಿ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಡೇಟ್​ ಮಾಡುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. 1970ರಲ್ಲಿ ಮೊದಲ ಬಾರಿಗೆ ಇವರು ಒಂದೇ ಸಿನಿಮಾದಲ್ಲಿ ನಟಿಸಿದ್ದರು. ‘ತುಮ್​ ಹಸೀನ್​ ಮೈ ಜವಾನ್’​ ಸಿನಿಮಾದಲ್ಲಿ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಒಟ್ಟಾಗಿ ಕೆಲಸ ಮಾಡಿದ್ದರು. ನಂತರ ಇಬ್ಬರೂ ಪ್ರೀತಿಯಲ್ಲಿ ಬಿದ್ದರು. ಆಗಲೇ ಧರ್ಮೇಂದ್ರ ಅವರಿಗೆ ಮದುವೆ ಆಗಿತ್ತು. 1980ರಲ್ಲಿ ಹೇಮಾ ಅವರನ್ನು ಧರ್ಮೇಂದ್ರ ಮದುವೆ ಆದರು.

ಇದನ್ನೂ ಓದಿ: ಬಾಲಿವುಡ್​ನ ಯಾವೆಲ್ಲಾ ಖ್ಯಾತ ನಟರು ಕೂದಲು ಕಸಿ ಮಾಡಿಸಿಕೊಂಡಿದ್ದಾರೆ?; ಇಲ್ಲಿದೆ ಅಚ್ಚರಿಯ ಮಾಹಿತಿ

ಹೇಮಾ ಮಾಲಿನಿ-ಧರ್ಮೆಂದ್ರಗೆ ಅವಳಿ ಮೊಮ್ಮಕ್ಕಳು! ಮನೆಯಲ್ಲಿ ಸಂಭ್ರಮ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ