AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಹೇಮಾ ಮಾಲಿನಿಗೆ ಆಗಿತ್ತು ಭಯಾನಕ ಅನುಭವ

ಹೇಮಾ ಮಾಲಿನಿ ಚಿತ್ರರಂಗಕ್ಕೆ ಬಂದ ಆರಂಭದ ದಿನಗಳು ಅವು. ಅವರು ಬಾಂದ್ರಾದ ಫ್ಲ್ಯಾಟ್​ ಒಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆದ  ಘಟನೆ ಬಗ್ಗೆ ಕೆಲ ವರ್ಷಗಳ ಹಿಂದೆ ಹೇಳಿಕೊಂಡಿದ್ದರು. ‘

ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಹೇಮಾ ಮಾಲಿನಿಗೆ ಆಗಿತ್ತು ಭಯಾನಕ ಅನುಭವ
ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಹೇಮಾ ಮಾಲಿನಿಗೆ ಆಗಿತ್ತು ಭಯಾನಕ ಅನುಭವ
TV9 Web
| Edited By: |

Updated on: Sep 16, 2021 | 8:44 PM

Share

ಭೂತಪ್ರೇತಗಳು ಇವೆ ಎನ್ನುವುದನ್ನು ಅನೇಕರು ನಂಬುತ್ತಾರೆ. ಇನ್ನೂ ಕೆಲವರು ನಂಬುವುದಿಲ್ಲ. ಕೆಲವರಿಗೆ ಈ ಬಗ್ಗೆ ಅನುಭವ ಕೂಡ ಆಗಿರುತ್ತದೆ. ಬಾಲಿವುಡ್ ಖ್ಯಾತ ನಟಿ ಹೇಮಾ ಮಾಲಿನಿಗೆ ಚಿತ್ರರಂಗಕ್ಕೆ ಬಂದ ಆರಂಭದಲ್ಲಿ ಹಿಂಗೊಂದು ಭಯಾನಕ ಅನುಭವ ಆಗಿತ್ತು. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

ಹೇಮಾ ಮಾಲಿನಿ ಚಿತ್ರರಂಗಕ್ಕೆ ಬಂದ ಆರಂಭದ ದಿನಗಳು ಅವು. ಅವರು ಬಾಂದ್ರಾದ ಫ್ಲ್ಯಾಟ್​ ಒಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆದ  ಘಟನೆ ಬಗ್ಗೆ ಕೆಲ ವರ್ಷಗಳ ಹಿಂದೆ ಹೇಳಿಕೊಂಡಿದ್ದರು. ‘ನಾನು ‘ಸಪ್ನೋಂ ಕಾ ಸೌದಾಗರ್​’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದೆ. ಆಗಲೇ ‘ಅಭಿನೇತ್ರಿ’ ಸಿನಿಮಾ ನನಗೆ ಸಿಕ್ಕಿತ್ತು. ನಾನು ಆಗ ಬಾಂದ್ರಾ ಅಪಾರ್ಟ್​ಮೆಂಟ್​ನಲ್ಲಿದ್ದೆ. ಅಲ್ಲಿಂದ, ನಾವು ಜುಹುಗೆ ಶಿಫ್ಟ್​ ಆದೆವು. ಆಗ ನಮಗೆ ವಿಚಿತ್ರ ಅನುಭವ ಆಗೋಕೆ ಆರಂಭವಾಯ್ತು’ ಎಂದಿದ್ದಾರೆ ಹೇಮಾ.

‘ಪ್ರತಿ ದಿನ ರಾತ್ರಿ ಯಾರೋ ನನ್ನನ್ನು ಉಸಿರುಗಟ್ಟಿಸುತ್ತಿದ್ದಾರೆ ಅನಿಸುತ್ತಿತ್ತು. ಉಸಿರಾಡಲು ಕಷ್ಟಪಡುತ್ತಿದೆ. ಒಂದೆರಡು ರಾತ್ರಿ ಈ ರೀತಿ ಆಗಿದ್ದರೆ ನಾವು ಹೇಗೋ ನಿರ್ಲಕ್ಷ್ಯ ಮಾಡಬಹುದಿತ್ತು. ಆದರೆ, ನಿತ್ಯ ರಾತ್ರಿ ಇದೇ ರೀತಿ ಆಗುತ್ತಿತ್ತು. ಈ ಕಾರಣಕ್ಕೆ ನಾವು ನಮ್ಮದೇ ಅಪಾರ್ಟ್​ಮೆಂಟ್​ ಕೊಂಡುಕೊಳ್ಳಲು ನಿರ್ಧರಿಸಿದೆವು’ ಎಂದು ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ ಅವರು.

ನಂತರ ಹೇಮಾ ಮಾಲಿನಿ ಬೇರೆ ಮನೆಗೆ ಸ್ಥಳಾಂತರಗೊಂಡರು. ಆ ಸಮಯದಲ್ಲಿ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಡೇಟ್​ ಮಾಡುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. 1970ರಲ್ಲಿ ಮೊದಲ ಬಾರಿಗೆ ಇವರು ಒಂದೇ ಸಿನಿಮಾದಲ್ಲಿ ನಟಿಸಿದ್ದರು. ‘ತುಮ್​ ಹಸೀನ್​ ಮೈ ಜವಾನ್’​ ಸಿನಿಮಾದಲ್ಲಿ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಒಟ್ಟಾಗಿ ಕೆಲಸ ಮಾಡಿದ್ದರು. ನಂತರ ಇಬ್ಬರೂ ಪ್ರೀತಿಯಲ್ಲಿ ಬಿದ್ದರು. ಆಗಲೇ ಧರ್ಮೇಂದ್ರ ಅವರಿಗೆ ಮದುವೆ ಆಗಿತ್ತು. 1980ರಲ್ಲಿ ಹೇಮಾ ಅವರನ್ನು ಧರ್ಮೇಂದ್ರ ಮದುವೆ ಆದರು.

ಇದನ್ನೂ ಓದಿ: ಬಾಲಿವುಡ್​ನ ಯಾವೆಲ್ಲಾ ಖ್ಯಾತ ನಟರು ಕೂದಲು ಕಸಿ ಮಾಡಿಸಿಕೊಂಡಿದ್ದಾರೆ?; ಇಲ್ಲಿದೆ ಅಚ್ಚರಿಯ ಮಾಹಿತಿ

ಹೇಮಾ ಮಾಲಿನಿ-ಧರ್ಮೆಂದ್ರಗೆ ಅವಳಿ ಮೊಮ್ಮಕ್ಕಳು! ಮನೆಯಲ್ಲಿ ಸಂಭ್ರಮ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್