AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?

Allu Arjun: ‘ಪಾತ್ರಕ್ಕಾಗಿ ಅಲ್ಲು ಅರ್ಜುನ್​ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?
ಅಲ್ಲು ಅರ್ಜುನ್, ಹೇಮಾ ಮಾಲಿನಿ
ಮದನ್​ ಕುಮಾರ್​
|

Updated on: May 12, 2023 | 11:09 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಒಂದು ಕಾಲದಲ್ಲಿ ಕೇವಲ ಟಾಲಿವುಡ್​ಗೆ ಸೀಮಿತ ಆಗಿದ್ದ ಅವರು ಈಗ ಪ್ಯಾನ್​ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ‘ಪುಷ್ಪ’ ಸಿನಿಮಾ (Pushpa Movie) ಸೂಪರ್​ ಹಿಟ್​ ಆದ ಬಳಿಕ ಅವರ ಚಾರ್ಮ್​ ಹೆಚ್ಚಿತು. ದಕ್ಷಿಣ ಭಾರತದ ಸಿನಿಪ್ರಿಯರು ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರು ಕೂಡ ‘ಪುಷ್ಪ’ ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಲಿವುಡ್​ ಸೆಲೆಬ್ರಿಟಿಗಳಿಗೂ ಈ ಚಿತ್ರ ಸಖತ್​ ಇಷ್ಟ ಆಯಿತು. ಹಿರಿಯ ನಟಿ ಹೇಮಾ ಮಾಲಿನಿ (Hema Malini) ಕೂಡ ಈ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಹಾಗಾಗಿ ಅವರು ಅಲ್ಲು ಅರ್ಜುನ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲು ಅರ್ಜುನ್​ ಅವರನ್ನು ಹೊಗಳುವ ಭರದಲ್ಲಿ ಹಿಂದಿ ಹೀರೋಗಳನ್ನು ತೆಗಳಿದ್ದಾರೆ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಹೇಮಾ ಮಾಲಿನಿ ಹೇಳಿದ್ದೇನು?

‘ನಾನು ಪುಷ್ಪ ಸಿನಿಮಾವನ್ನು ನೋಡಿ ತುಂಬ ಎಂಜಾಯ್​ ಮಾಡಿದೆ. ಆ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ನಡೆಯುವ ಶೈಲಿಯಲ್ಲಿ ಅನೇಕರು ಡ್ಯಾನ್ಸ್​ ಮಾಡಿದ್ದಾರೆ. ನಾನು ಅಲ್ಲು ಅರ್ಜುನ್​ ಅವರ ನಟನೆಯನ್ನು ಗಮನಿಸಿದೆ. ಅವರ ಬೇರೆ ಸಿನಿಮಾಗಳನ್ನೂ ನೋಡಿದೆ. ಅವರು ತುಂಬ ಸುಂದರವಾದ ನಟ. ಆದರೆ ಪುಷ್ಪ ಚಿತ್ರಕ್ಕಾಗಿ ಆ ರೀತಿ ರಗಡ್​ ಲುಕ್​ನಲ್ಲಿ, ಲುಂಗಿ ಧರಿಸಿ ನಟಿಸಿದ್ದಾರೆ. ಅಂಥ ಮಾತ್ರ ಮಾಡಿ ಅವರು ಹೀರೋ ಎನಿಸಿಕೊಂಡಿದ್ದಾರೆ’ ಎಂದು ಹೇಮಾ ಮಾಲಿನಿ ಹೊಗಳಿದ್ದಾರೆ.

ಇದನ್ನೂ ಓದಿ: 2023ರ ಬಹುನಿರೀಕ್ಷಿತ ಹಿಂದಿ ಚಿತ್ರಗಳಲ್ಲಿ ‘ಪುಷ್ಪ 2’ಗೆ ಸ್ಥಾನ; ಶಾರುಖ್​ನ ಹಿಂದಿಕ್ಕಿದ ಅಲ್ಲು ಅರ್ಜುನ್

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

‘ಪಾತ್ರಕ್ಕಾಗಿ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ. ‘ರಜಿಯಾ ಸುಲ್ತಾನ್​’ ಸಿನಿಮಾದಲ್ಲಿ ಧರ್ಮೇಂದ್ರ ಅವರು ಆ ರೀತಿ ಕಾಣಿಸಿಕೊಳ್ಳಲು ಹಿಂಜರಿಕೆಪಟ್ಟುಕೊಂಡಿದ್ದು ನನಗೆ ನೆನಪಿದೆ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ. ಈ ಮೂಲಕ ಹಿಂದಿ ಚಿತ್ರರಂಗದ ಹೀರೋಗಳನ್ನು ತೆಗಳಿದ್ದಾರೆ ಎಂದು ಅನೇಕರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: 150 ಮಕ್ಕಳ ದತ್ತು ಪಡೆದು ಶಿಕ್ಷಣ ನೀಡುತ್ತಿರುವ ತಮಿಳು ನಟ, ಭೇಷ್ ಎಂದ ಅಲ್ಲು ಅರ್ಜುನ್

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಇದಕ್ಕೆ ಬಂಡವಾಳ ಹೂಡುತ್ತಿದೆ. ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್