AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?

Allu Arjun: ‘ಪಾತ್ರಕ್ಕಾಗಿ ಅಲ್ಲು ಅರ್ಜುನ್​ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?
ಅಲ್ಲು ಅರ್ಜುನ್, ಹೇಮಾ ಮಾಲಿನಿ
ಮದನ್​ ಕುಮಾರ್​
|

Updated on: May 12, 2023 | 11:09 AM

Share

ಮುಖ್ಯಾಂಶಗಳು

  • ‘ನಾನು ಪುಷ್ಪ ಸಿನಿಮಾವನ್ನು ನೋಡಿ ತುಂಬ ಎಂಜಾಯ್​ ಮಾಡಿದೆ’ ಎಂದ ಹೇಮಾ ಮಾಲಿನಿ
  • ಪಾತ್ರಕ್ಕಾಗಿ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ
  • ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ

ನಟ ಅಲ್ಲು ಅರ್ಜುನ್​ (Allu Arjun) ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಒಂದು ಕಾಲದಲ್ಲಿ ಕೇವಲ ಟಾಲಿವುಡ್​ಗೆ ಸೀಮಿತ ಆಗಿದ್ದ ಅವರು ಈಗ ಪ್ಯಾನ್​ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ‘ಪುಷ್ಪ’ ಸಿನಿಮಾ (Pushpa Movie) ಸೂಪರ್​ ಹಿಟ್​ ಆದ ಬಳಿಕ ಅವರ ಚಾರ್ಮ್​ ಹೆಚ್ಚಿತು. ದಕ್ಷಿಣ ಭಾರತದ ಸಿನಿಪ್ರಿಯರು ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರು ಕೂಡ ‘ಪುಷ್ಪ’ ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಲಿವುಡ್​ ಸೆಲೆಬ್ರಿಟಿಗಳಿಗೂ ಈ ಚಿತ್ರ ಸಖತ್​ ಇಷ್ಟ ಆಯಿತು. ಹಿರಿಯ ನಟಿ ಹೇಮಾ ಮಾಲಿನಿ (Hema Malini) ಕೂಡ ಈ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಹಾಗಾಗಿ ಅವರು ಅಲ್ಲು ಅರ್ಜುನ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲು ಅರ್ಜುನ್​ ಅವರನ್ನು ಹೊಗಳುವ ಭರದಲ್ಲಿ ಹಿಂದಿ ಹೀರೋಗಳನ್ನು ತೆಗಳಿದ್ದಾರೆ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಹೇಮಾ ಮಾಲಿನಿ ಹೇಳಿದ್ದೇನು?

‘ನಾನು ಪುಷ್ಪ ಸಿನಿಮಾವನ್ನು ನೋಡಿ ತುಂಬ ಎಂಜಾಯ್​ ಮಾಡಿದೆ. ಆ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ನಡೆಯುವ ಶೈಲಿಯಲ್ಲಿ ಅನೇಕರು ಡ್ಯಾನ್ಸ್​ ಮಾಡಿದ್ದಾರೆ. ನಾನು ಅಲ್ಲು ಅರ್ಜುನ್​ ಅವರ ನಟನೆಯನ್ನು ಗಮನಿಸಿದೆ. ಅವರ ಬೇರೆ ಸಿನಿಮಾಗಳನ್ನೂ ನೋಡಿದೆ. ಅವರು ತುಂಬ ಸುಂದರವಾದ ನಟ. ಆದರೆ ಪುಷ್ಪ ಚಿತ್ರಕ್ಕಾಗಿ ಆ ರೀತಿ ರಗಡ್​ ಲುಕ್​ನಲ್ಲಿ, ಲುಂಗಿ ಧರಿಸಿ ನಟಿಸಿದ್ದಾರೆ. ಅಂಥ ಮಾತ್ರ ಮಾಡಿ ಅವರು ಹೀರೋ ಎನಿಸಿಕೊಂಡಿದ್ದಾರೆ’ ಎಂದು ಹೇಮಾ ಮಾಲಿನಿ ಹೊಗಳಿದ್ದಾರೆ.

ಇದನ್ನೂ ಓದಿ: 2023ರ ಬಹುನಿರೀಕ್ಷಿತ ಹಿಂದಿ ಚಿತ್ರಗಳಲ್ಲಿ ‘ಪುಷ್ಪ 2’ಗೆ ಸ್ಥಾನ; ಶಾರುಖ್​ನ ಹಿಂದಿಕ್ಕಿದ ಅಲ್ಲು ಅರ್ಜುನ್

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

‘ಪಾತ್ರಕ್ಕಾಗಿ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ. ‘ರಜಿಯಾ ಸುಲ್ತಾನ್​’ ಸಿನಿಮಾದಲ್ಲಿ ಧರ್ಮೇಂದ್ರ ಅವರು ಆ ರೀತಿ ಕಾಣಿಸಿಕೊಳ್ಳಲು ಹಿಂಜರಿಕೆಪಟ್ಟುಕೊಂಡಿದ್ದು ನನಗೆ ನೆನಪಿದೆ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ. ಈ ಮೂಲಕ ಹಿಂದಿ ಚಿತ್ರರಂಗದ ಹೀರೋಗಳನ್ನು ತೆಗಳಿದ್ದಾರೆ ಎಂದು ಅನೇಕರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: 150 ಮಕ್ಕಳ ದತ್ತು ಪಡೆದು ಶಿಕ್ಷಣ ನೀಡುತ್ತಿರುವ ತಮಿಳು ನಟ, ಭೇಷ್ ಎಂದ ಅಲ್ಲು ಅರ್ಜುನ್

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಇದಕ್ಕೆ ಬಂಡವಾಳ ಹೂಡುತ್ತಿದೆ. ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್