Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?

Allu Arjun: ‘ಪಾತ್ರಕ್ಕಾಗಿ ಅಲ್ಲು ಅರ್ಜುನ್​ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?
ಅಲ್ಲು ಅರ್ಜುನ್, ಹೇಮಾ ಮಾಲಿನಿ

Updated on: May 12, 2023 | 11:09 AM

ನಟ ಅಲ್ಲು ಅರ್ಜುನ್​ (Allu Arjun) ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಒಂದು ಕಾಲದಲ್ಲಿ ಕೇವಲ ಟಾಲಿವುಡ್​ಗೆ ಸೀಮಿತ ಆಗಿದ್ದ ಅವರು ಈಗ ಪ್ಯಾನ್​ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ‘ಪುಷ್ಪ’ ಸಿನಿಮಾ (Pushpa Movie) ಸೂಪರ್​ ಹಿಟ್​ ಆದ ಬಳಿಕ ಅವರ ಚಾರ್ಮ್​ ಹೆಚ್ಚಿತು. ದಕ್ಷಿಣ ಭಾರತದ ಸಿನಿಪ್ರಿಯರು ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರು ಕೂಡ ‘ಪುಷ್ಪ’ ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಲಿವುಡ್​ ಸೆಲೆಬ್ರಿಟಿಗಳಿಗೂ ಈ ಚಿತ್ರ ಸಖತ್​ ಇಷ್ಟ ಆಯಿತು. ಹಿರಿಯ ನಟಿ ಹೇಮಾ ಮಾಲಿನಿ (Hema Malini) ಕೂಡ ಈ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಹಾಗಾಗಿ ಅವರು ಅಲ್ಲು ಅರ್ಜುನ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲು ಅರ್ಜುನ್​ ಅವರನ್ನು ಹೊಗಳುವ ಭರದಲ್ಲಿ ಹಿಂದಿ ಹೀರೋಗಳನ್ನು ತೆಗಳಿದ್ದಾರೆ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಹೇಮಾ ಮಾಲಿನಿ ಹೇಳಿದ್ದೇನು?

‘ನಾನು ಪುಷ್ಪ ಸಿನಿಮಾವನ್ನು ನೋಡಿ ತುಂಬ ಎಂಜಾಯ್​ ಮಾಡಿದೆ. ಆ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ನಡೆಯುವ ಶೈಲಿಯಲ್ಲಿ ಅನೇಕರು ಡ್ಯಾನ್ಸ್​ ಮಾಡಿದ್ದಾರೆ. ನಾನು ಅಲ್ಲು ಅರ್ಜುನ್​ ಅವರ ನಟನೆಯನ್ನು ಗಮನಿಸಿದೆ. ಅವರ ಬೇರೆ ಸಿನಿಮಾಗಳನ್ನೂ ನೋಡಿದೆ. ಅವರು ತುಂಬ ಸುಂದರವಾದ ನಟ. ಆದರೆ ಪುಷ್ಪ ಚಿತ್ರಕ್ಕಾಗಿ ಆ ರೀತಿ ರಗಡ್​ ಲುಕ್​ನಲ್ಲಿ, ಲುಂಗಿ ಧರಿಸಿ ನಟಿಸಿದ್ದಾರೆ. ಅಂಥ ಮಾತ್ರ ಮಾಡಿ ಅವರು ಹೀರೋ ಎನಿಸಿಕೊಂಡಿದ್ದಾರೆ’ ಎಂದು ಹೇಮಾ ಮಾಲಿನಿ ಹೊಗಳಿದ್ದಾರೆ.

ಇದನ್ನೂ ಓದಿ: 2023ರ ಬಹುನಿರೀಕ್ಷಿತ ಹಿಂದಿ ಚಿತ್ರಗಳಲ್ಲಿ ‘ಪುಷ್ಪ 2’ಗೆ ಸ್ಥಾನ; ಶಾರುಖ್​ನ ಹಿಂದಿಕ್ಕಿದ ಅಲ್ಲು ಅರ್ಜುನ್

ಇದನ್ನೂ ಓದಿ
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

‘ಪಾತ್ರಕ್ಕಾಗಿ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ. ‘ರಜಿಯಾ ಸುಲ್ತಾನ್​’ ಸಿನಿಮಾದಲ್ಲಿ ಧರ್ಮೇಂದ್ರ ಅವರು ಆ ರೀತಿ ಕಾಣಿಸಿಕೊಳ್ಳಲು ಹಿಂಜರಿಕೆಪಟ್ಟುಕೊಂಡಿದ್ದು ನನಗೆ ನೆನಪಿದೆ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ. ಈ ಮೂಲಕ ಹಿಂದಿ ಚಿತ್ರರಂಗದ ಹೀರೋಗಳನ್ನು ತೆಗಳಿದ್ದಾರೆ ಎಂದು ಅನೇಕರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: 150 ಮಕ್ಕಳ ದತ್ತು ಪಡೆದು ಶಿಕ್ಷಣ ನೀಡುತ್ತಿರುವ ತಮಿಳು ನಟ, ಭೇಷ್ ಎಂದ ಅಲ್ಲು ಅರ್ಜುನ್

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಇದಕ್ಕೆ ಬಂಡವಾಳ ಹೂಡುತ್ತಿದೆ. ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us