AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ

ಬಾಲಿವುಡ್‌ನ ಜನಪ್ರಿಯ 'ಹೇರಾ ಫೇರಿ 3' ಸಿನಿಮಾ ಮತ್ತೆ ವಿವಾದದ ಸುಳಿಯಲ್ಲಿದೆ. ಬಾಬುರಾವ್ ಖ್ಯಾತಿಯ ಪರೇಶ್ ರಾವಲ್ ಚಿತ್ರದಿಂದ ಹೊರಬಂದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದ್ದು, 11 ಲಕ್ಷ ರೂ. ಸೈನಿಂಗ್ ಅಮೌಂಟ್ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ. ಆದರೆ ನಿರ್ದೇಶಕ ಪ್ರಿಯದರ್ಶನ್ ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಭಾವನೆ ವಿಳಂಬ ಮತ್ತು ಚಿತ್ರೀಕರಣದ ಸುದೀರ್ಘ ಕಾಯುವಿಕೆಯೇ ಪರೇಶ್ ನಿರ್ಗಮನಕ್ಕೆ ಕಾರಣ ಎನ್ನಲಾಗಿದೆ.

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ
ಹೇರಾ ಫೇರಿ Image Credit source: Hera Pheri
ರಾಜೇಶ್ ದುಗ್ಗುಮನೆ
|

Updated on: May 25, 2026 | 2:45 PM

Share

ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಚಿತ್ರದ ನಿರ್ದೇಶಕ ಪ್ರಿಯದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.

ಪರೇಶ್ ರಾವಲ್ ಚಿತ್ರದಿಂದ ಹೊರಹೋಗಿರುವ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಿಯದರ್ಶನ್ , ‘ಈ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಕಿ ಇಲ್ಲದೆ ಹೊಗೆ ಆಡೋದಿಲ್ಲ ಎಂಬುದು ನೆಟ್ಟಿಗರ ವಾದ.

ಇದನ್ನೂ ಓದಿ: ‘ಹೇರಾ ಪೇರಿ 3’: ಮುನಿಸು ಮರೆತು ಅಕ್ಷಯ್ ಜೊತೆ ಕೈಜೋಡಿಸಿದ ಪರೇಶ್ ರಾವಲ್

ಪರೇಶ್ ರಾವಲ್ ಚಿತ್ರದಿಂದ ಹೊರನಡೆಯುತ್ತಿರುವುದು ಇದೇ ಮೊದಲೇನಲ್ಲ. 2025ರಲ್ಲೂ ಅವರು ಚಿತ್ರದಿಂದ ದಿಢೀರ್ ಹೊರನಡೆದಾಗ, ಮುಖ್ಯ ಭೂಮಿಕೆಯಲ್ಲಿದ್ದ ಅಕ್ಷಯ್ ಕುಮಾರ್ ಅವರು ಪರೇಶ್ ವಿರುದ್ಧ 25 ಕೋಟಿ ರೂ.ಗಳ ಮೊಕದ್ದಮೆ ಹೂಡಿದ್ದರು. ಆದರೆ ನಂತರ ಆ ಸಮಸ್ಯೆ ಬಗೆಹರಿದು ಪರೇಶ್ ರಾವಲ್ ಚಿತ್ರಕ್ಕೆ ಮರಳಿದ್ದರು.

ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ಅಕ್ಷಯ್ ಕುಮಾರ್, ‘ಹೇರಾ ಫೇರಿ 3 ಸದ್ಯಕ್ಕೆ ಸೆಟ್ಟೇರುತ್ತಿಲ್ಲ’ ಎಂದಿದ್ದರು. ಈ ಸಿನಿಮಾ 2027ರಲ್ಲಿ ಆರಂಭ ಆಗುವ ನಿರೀಕ್ಷೆ ಇದೆ.

ಪರೇಶ್ ಹಿಂದೇಟಿಗೆ ಕಾರಣ ಏನು?

ವರದಿಗಳ ಪ್ರಕಾರ, ಸಿನಿಮಾದ ಚಿತ್ರೀಕರಣ 2027ರಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಅಂದರೆ, ‘ಹೇರಾ ಫೇರಿ 3’ ತೆರೆಗೆ ಬರಲು 2027ರ ಅಂತ್ಯ ಅಥವಾ 2028ರ ತನಕ ಕಾಯಬೇಕಾಗುತ್ತದೆ. ಇನ್ನು ಸಂಭಾವನೆಯ ಒಪ್ಪಂದದ ಅನ್ವಯ, ಪರೇಶ್ ರಾವಲ್ ಅವರು ತಮ್ಮ ಪೂರ್ಣ ಪೇಮೆಂಟ್ ಪಡೆಯಲು ಕನಿಷ್ಠ ಎರಡು ವರ್ಷ ಕಾಯಬೇಕಾದ ಪರಿಸ್ಥಿತಿ ಇತ್ತು. ಇಷ್ಟು ಸುದೀರ್ಘ ಸಮಯ ಕಾಯಲು ಸಿದ್ಧರಿಲ್ಲದ ಕಾರಣವೇ ಅವರು ಚಿತ್ರದಿಂದ ಹೊರಹೋಗುವ ತೀರ್ಮಾನ ತಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!