ರಾಜಿ ಮಾಡಿದ್ರೆ ‘ಹೇರಾ ಫೇರಿ 3’ಗೆ ಬರ್ತಾರಾ ಪರೇಶ್ ರಾವಲ್? ನಟನ ಉತ್ತರ ಏನು?

ಪರೇಶ್ ರಾವಲ್ ಅವರ ‘ಹೇರಾ ಫೇರಿ 3’ ಚಿತ್ರದಿಂದ ಹೊರ ಹೋಗಿದ್ದು ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಅಕ್ಷಯ್ ಕುಮಾರ್ ಅವರ ನಿರ್ಮಾಣ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಪರೇಶ್ ರಾವಲ್ ಚಿತ್ರಕ್ಕೆ ಮರಳುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ. ಈ ವಿವಾದದ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ರಾಜಿ ಮಾಡಿದ್ರೆ ‘ಹೇರಾ ಫೇರಿ 3’ಗೆ ಬರ್ತಾರಾ ಪರೇಶ್ ರಾವಲ್? ನಟನ ಉತ್ತರ ಏನು?
ಹೇರಾ ಫೇರಿ

Updated on: Jun 09, 2025 | 2:20 PM

‘ಹೇರಾ ಫೇರಿ 3’ ಸಿನಿಮಾದಿಂದ ಪರೇಶ್ ರಾವಲ್ (Paresh Rawal)  ಹೊರ ನಡೆದಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ವಿಚಾರದಲ್ಲಿ ತಪ್ಪು ಯಾರದ್ದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಒಡೆತನದ ನಿರ್ಮಾಣ ಸಂಸ್ಥೆ ಪರೇಶ್​ಗೆ ನೋಟಿಸ್ ನೀಡಿದೆ. ಈ ನೋಟಿಸ್​ನಿಂದ ಪರೇಶ್​ಗೆ ಮತ್ತಷ್ಟು ಬೇಸರ ಮೂಡಿಸಿದೆ. ಹಾಗಾದರೆ ಮುಂದಿನ ದಿನಗಳಲ್ಲಿ ಪರೇಶ್ ಅವರು ಈ ಸರಣಿಗೆ ಮರಳುತ್ತಾರಾ? ಸಾಧ್ಯವೇ ಇಲ್ಲ ಎಂಬುದು ಅವರ ಸ್ಪಷ್ಟ ಮಾತು.

ಈ ಮೊದಲು ದೊಡ್ಡ ದೊಡ್ಡ ಸಿನಿಮಾಗಳಿಂದ ಸ್ಟಾರ್ ಹೀರೋಗಳು, ಪೋಷಕ ಕಲಾವಿದರು ಹೊರ ನಡೆದ ಸಾಕಷ್ಟು ಉದಾಹರಣೆ ಇದೆ. ಆದರೆ, ಕೆಲವೊಮ್ಮೆ ಮಾತುಕತೆಯಿಂದ ಸಮಸ್ಯೆ ಬಗೆಹರಿದು ಕಲಾವಿದರು ಮರಳಿದ ಸಾಕಷ್ಟು ಉದಾಹರಣೆ ಇದೆ. ‘ಹೇರಾ ಫೇರಿ 3’ ಚಿತ್ರದಲ್ಲೂ ಆ ಸಾಧ್ಯತೆ ಇದೆಯೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರವನ್ನು ಅಭಿಮಾನಿಯೋರ್ವ ಕೇಳಿದ್ದಾನೆ.

ಇದನ್ನೂ ಓದಿ
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ದೀಪಿಕಾಳಿಂದ ದೂರವಾದ ಬಗ್ಗೆ ನನಗೆ ಬೇಸರ ಇಲ್ಲ; ಮಾಜಿ ಬಾಯ್​ಫ್ರೆಂಡ್ ಹೇಳಿಕೆ
ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್
ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’; ಕನ್ನಡಿಗರ ತಂಟೆಗೆ ಬಂದವರ

ಎಕ್ಸ್ (ಟ್ವಿಟರ್) ಮೂಲಕ ಅಭಿಮಾನಿಯೋರ್ವ ಪರೇಶ್ ಅವರನ್ನು ಟ್ಯಾಗ್ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ಸರ್ ದಯವಿಟ್ಟು ಸಿನಿಮಾ ತಂಡ ಸೇರುವ ಬಗ್ಗೆ ಯೋಚಿಸಿ’ ಎಂದು ಬರೆದಿದ್ದರು. ಇದಕ್ಕೆ ಉತ್ತರಿಸಿರೋ ಪರೇಶ್ ರಾವಲ್, ‘ಇಲ್ಲ, ಹೇರಾ ಫೇರಿಯಲ್ಲಿ ಮೂರು ಹೀರೋಗಳು ಇದ್ದಾರೆ’ ಎಂದು ಹೇಳಿದ್ದಾರೆ. ಅಂದರೆ, ಇಲ್ಲಿ ಏನೋ ದೊಡ್ಡದಾಗಿಯೇ ಸಮಸ್ಯೆ ಉಂಟಾಗಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಆ ಮೂರು ಹೀರೋಗಳು ಯಾರು ಎನ್ನುವ ಪ್ರಶ್ನೆ ಸದ್ಯದ್ದು.

ಇದನ್ನೂ ಓದಿ: ‘ಅವರನ್ನು​​ ಮೂರ್ಖ ಎನ್ನಬೇಡಿ, ಒಳ್ಳೆಯ ಸ್ನೇಹಿತ’; ಪರೇಶ್ ಪರ ಅಕ್ಷಯ್ ಕುಮಾರ್ ಬ್ಯಾಟಿಂಗ್

ಪರೇಶ್ ರಾವಲ್ ಅವರು ಈ ಸಿನಿಮಾದಿಂದ ಹೊರ ನಡೆಯಲು ಇಗೋ ಕ್ಲ್ಯಾಶ್ ಕಾರಣ ಎಂದು ಹೇಳಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇಲ್ಲ. ಇನ್ನು ಅಕ್ಷಯ್ ಒಡೆತನ ನಿರ್ಮಾಣ ಸಂಸ್ಥೆ ಮೂಲಕ ಪರೇಶ್​ಗೆ ನೋಟಿಸ್ ಹೋಗಿದೆ. ಈ ನೋಟಿಸ್​ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಪ್ರಕರಣ ಕೋರ್ಟ್​ನಲ್ಲಿ ಇರುವುದರಿಂದ ಈ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದು ಅಕ್ಷಯ್ ಕುಮಾರ್ ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us