AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’; ಪರೇಶ್ ಬಗ್ಗೆ ನಟನ ಟೀಕೆ  

ಹೇರಾ ಫೇರಿ 3ರ ಚಿತ್ರೀಕರಣದ ನಂತರ ಪರೇಶ್ ರಾವಲ್ ಅವರ ನಿರ್ಗಮನದಿಂದ ಉಂಟಾದ ವಿವಾದವು ಈಗ ಬಗೆಹರಿದಿದೆ. ಅವರು ಚಿತ್ರದಲ್ಲಿ ಮತ್ತೆ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ. ಆದರೆ, ಕೆಆರ್‌ಕೆ ಅವರ ರಾಖಿ ಸಾವಂತ್‌ಗೆ ಹೋಲಿಸುವ ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’; ಪರೇಶ್ ಬಗ್ಗೆ ನಟನ ಟೀಕೆ  
ಪರೇಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 01, 2025 | 7:46 AM

Share

‘ಹೇರಾ ಫೇರಿ’ (Hera Pheri) ಚಿತ್ರದ ಮೂರನೇ ಭಾಗದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳಿಂದ ಚಿತ್ರ ವಿವಾದದ ಸುಳಿಯಲ್ಲಿ ಸಿಲುಕಿತ್ತು. ಏಕೆಂದರೆ ನಟ ಪರೇಶ್ ರಾವಲ್ ಚಿತ್ರದ ಪ್ರೋಮೋ ಚಿತ್ರೀಕರಣದ ನಂತರ ಚಿತ್ರದಲ್ಲಿ ಕೆಲಸ ಮಾಡಲು ನಿರಾಕರಿಸಿದರು. ನಟರಾದ ಅಕ್ಷಯ್ ಕುಮಾರ್ ಮತ್ತು ಸುನೀಲ್ ಶೆಟ್ಟಿ ಈ ಚಿತ್ರದಲ್ಲಿ ಪರೇಶ್ ರಾವಲ್ ಜೊತೆಗೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಎರಡು ಭಾಗಗಳಲ್ಲಿ ಈ ಚಿತ್ರ ಅಭಿಮಾನಿಗಳನ್ನು ನಗಿಸಿತು. ಆದರೆ ಮೂರನೇ ಭಾಗದಲ್ಲಿ ಕೆಲಸ ಮಾಡಲು ನಿರಾಕರಿಸಿದ ನಂತರ, ಪರೇಶ್ ರಾವಲ್ ಅವರ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಆದರೆ ಪರೇಶ್ ರಾವಲ್ ಕೊನೆಗೂ ಸಿನಿಮಾದಲ್ಲಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಪರೇಶ್ ರಾವಲ್ ಸಿನಿಮಾದಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾಗಿ ಸಂದರ್ಶನ ಒಂದರಲ್ಲಿ ಹೇಳಿದ್ದು, ಎಲ್ಲಾ ವಿವಾದಗಳು ಬಗೆಹರಿದಿವೆ ಎಂದಿದ್ದಾರೆ. ಬಾಲಿವುಡ್ ನಟ ಹಾಗೂ ಸ್ವಘೋಷಿತ ವಿಮರ್ಶಕ ಕೆಆರ್‌ಕೆ ಪರೇಶ್ ರಾವಲ್ ಅವರನ್ನು ರಾಖಿ ಸಾವಂತ್‌ಗೆ ಹೋಲಿಸಿದರು.

ಕೆಆರ್‌ಕೆ ಅವರ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಪರೇಶ್ ರಾವಲ್ ‘ಹೇರಾ ಫೆರಿ 3′ ಚಿತ್ರದಲ್ಲಿ ಮತ್ತೆ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ. ‘ಎಲ್ಲಾ ಸಮಸ್ಯೆಗಳನ್ನು ಪರಿಹಾರ ಗೊಂಡಿದೆ’ ಎಂದು ಪರೇಶ್ ರಾವಲ್ ಪಾಡ್‌ಕ್ಯಾಸ್ಟ್‌ನಲ್ಲಿ ಹೇಳಿದ್ದಾರೆ. ಇದಾದ ಬಳಿಕ ಕೆಆರ್​ಕೆ ಮಾತನಾಡಿದ್ದಾರೆ.

ಇದನ್ನೂ ಓದಿ
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
ಚಿರಂಜೀವಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್; ಅಸಮಾಧಾನ ಹೊರಹಾಕಿದ ಫ್ಯಾನ್ಸ್
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ವಿವಾದ ಎದ್ದ ಬಳಿಕ ನಾನು ಆ ಬಗ್ಗೆ ಹೇಳಿದ್ದೆ. ಪರೇಶ್ ರಾವಲ್ ಸಿನಿಮಾ ಬಿಡಲು ಸಾಧ್ಯವಿಲ್ಲ ಮತ್ತು ಅವರ ವಿರುದ್ಧ ಅಕ್ಷಯ್ ಕುಮಾರ್ ಕ್ರಮ ಕೈಗೊಳ್ಳಲೂ ಸಾಧ್ಯವಿಲ್ಲ. ಬಾಲಿವುಡ್ ಬಗ್ಗೆ ನನಗಿಂತ ಚೆನ್ನಾಗಿ ಯಾರಿಗೂ ತಿಳಿದಿಲ್ಲ. ಹಾಗಾಗಿ, ನಾನು ಏನಾದರೂ ಹೇಳಿದ ನಂತರ ಜನರು ನನ್ನನ್ನು ನಂಬಬೇಕು’ ಎಂದಿದ್ದಾರೆ ಕೆಆರ್​ಕೆ.

ಇದನ್ನೂ ಓದಿ: ‘ಹೇರಾ ಪೇರಿ 3’: ಮುನಿಸು ಮರೆತು ಅಕ್ಷಯ್ ಜೊತೆ ಕೈಜೋಡಿಸಿದ ಪರೇಶ್ ರಾವಲ್

‘ತನ್ನದೇ ಮೂತ್ರ ಕುಡಿದು ಬದುಕುವ ವ್ಯಕ್ತಿ ಖ್ಯಾತಿಗಾಗಿ ಏನು ಬೇಕಾದರೂ ಮಾಡಬಹುದು. ಪರೇಶ್ ರಾವಲ್ ಬಾಲಿವುಡ್‌ನ ಅತಿದೊಡ್ಡ ನಾಟಕಕಾರ. ನಾವು ಅವರನ್ನು ರಾಖಿ ಸಾವಂತ್ ಎಂದೂ ಕರೆಯಬಹುದು’ ಎಂದು ಕೆಆರ್‌ಕೆ ಹೇಳಿದರು. ಪ್ರಸ್ತುತ, ಕೆಆರ್‌ಕೆ ಅವರ ಟ್ವೀಟ್ ವೈರಲ್ ಆಗುತ್ತಿದೆ. ಅನೇಕರು ಕೆಆರ್​ಕೆಗೆ ಛೀಮಾರಿ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ