AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನ ನಡೆಯುವ ಕತ್ರಿನಾ ಮದುವೆಗೆ ಮಾಜಿ ಬಾಯ್​ಫ್ರೆಂಡ್​ಗಳಿಗೆ ಇದೆಯಾ ಆಹ್ವಾನ? ರಣಬೀರ್​, ಸಲ್ಲು ಕೂಡ ಬರ್ತಾರಾ?

ವಿಕ್ಕಿ ಹಿಂದು, ಕತ್ರಿನಾ ಕೈಫ್​ ಮುಸ್ಲಿಂ. ಈ ಕಾರಣಕ್ಕೆ ಎರಡೂ ಧರ್ಮದ ಪ್ರಕಾರ ಮದುವೆ ಕಾರ್ಯ ನಡೆಯಲಿದೆ ಎನ್ನಲಾಗುತ್ತಿದೆ. ಹೀಗಾಗಿ, ಆರು ದಿನಗಳ ಕಾಲ ಮದುವೆ ಕಾರ್ಯಗಳನ್ನು ಆಯೋಜನೆ ಮಾಡಲಾಗಿದೆ.

6 ದಿನ ನಡೆಯುವ ಕತ್ರಿನಾ ಮದುವೆಗೆ ಮಾಜಿ ಬಾಯ್​ಫ್ರೆಂಡ್​ಗಳಿಗೆ ಇದೆಯಾ ಆಹ್ವಾನ? ರಣಬೀರ್​, ಸಲ್ಲು ಕೂಡ ಬರ್ತಾರಾ?
ಸಲ್ಲು-ಕತ್ರಿನಾ-ರಣಬೀರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 13, 2021 | 1:55 PM

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್ ಮದುವೆಗೆ (Katrina Kaif And Vicky Kaushal Marriage)​ ದಿನಾಂಕ ನಿಗದಿಯಾಗಿದೆ. ಡಿಸೆಂಬರ್​ 7ರಿಂದ 12ರವರೆಗೆ ಮದುವೆ ಕಾರ್ಯಕ್ರಮ ನಡೆಯಲಿದೆ. ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ (Six Senses Fort Hotel) ಮದುವೆ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಸುಮಾರು ಒಂದು ವಾರಗಳ ಕಾಲ ಮದುವೆ ಕಾರ್ಯಕ್ರಮ ನಡೆಯಲಿದ್ದು, ವಿವಿಧ ರೀತಿಯ ಶಾಸ್ತ್ರಗಳು ನೆರವೇರಲಿದೆ. ಈಗಾಗಲೇ ಬಾಲಿವುಡ್​ ಸೆಲೆಬ್ರಿಟಿಗಳಿಗೆ ಆಮಂತ್ರಣ ಹೋಗಿದೆ. ಹಾಗಾದರೆ, ಈ ಸೆಲೆಬ್ರಿಟಿ ಮದುವೆಗೆ ಯಾರೆಲ್ಲಾ ತೆರಳಲಿದ್ದಾರೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿಕ್ಕಿ ಹಿಂದು, ಕತ್ರಿನಾ ಕೈಫ್​ ಮುಸ್ಲಿಂ. ಈ ಕಾರಣಕ್ಕೆ ಎರಡೂ ಧರ್ಮದ ಪ್ರಕಾರ ಮದುವೆ ಕಾರ್ಯ ನಡೆಯಲಿದೆ ಎನ್ನಲಾಗುತ್ತಿದೆ. ಹೀಗಾಗಿ, ಆರು ದಿನಗಳ ಕಾಲ ಮದುವೆ ಕಾರ್ಯಗಳನ್ನು ಆಯೋಜನೆ ಮಾಡಲಾಗಿದೆ. ವಿವಾಹ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದ್ದು, ಬಾಲಿವುಡ್​ ಸೆಲೆಬ್ರಿಟಿಗಳು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಸೆಲೆಬ್ರಿಟಿ ಮದುವೆ ಆದ ಕಾರಣ ಸಾಕಷ್ಟು ಭದ್ರತೆ ಕೂಡ ಒದಗಿಸಲಾಗುತ್ತಿದೆ.

ಕೊವಿಡ್​ ಕಡಿಮೆ ಆಗಿದೆ. ಈ ಕಾರಣಕ್ಕೆ ಮದುವೆ ಅದ್ದೂರಿಯಾಗಿ ನಡೆಯಲಿದೆ. ಈ ಹೈ ಪ್ರೊಫೈಲ್​ ಕಲ್ಯಾಣಕ್ಕೆ ಕುಟುಂಬದವರು, ಆಪ್ತರು, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಕರಣ್​ ಜೋಹರ್, ಅಲಿ ಅಬ್ಬಾಸ್​ ಜಫರ್​, ಕಬೀರ್​ ಖಾನ್​, ರೋಹಿತ್​ ಶೆಟ್ಟಿ, ಸಿದ್ದಾರ್ಥ್​ ಮಲ್ಹೋತ್ರಾ, ಕಿಯಾರಾ ಆಡ್ವಾಣಿ, ವರುಣ್​ ಧವನ್​ ಹಾಗೂ ಅವರ ಪತ್ನಿ ನತಾಶಾ ದಲಾಲ್​ ಸೇರಿ ಅನೇಕರಿಗೆ ಆಮಂತ್ರಣ ಹೋಗಿದೆ.

ಸಲ್ಮಾನ್​ ಖಾನ್​ ಅವರನ್ನು ಕತ್ರಿನಾ ಪ್ರೀತಿಸುತ್ತಿದ್ದರು. ಇವರ ಸಂಬಂಧ ಮುರಿದುಬಿದ್ದಿದೆ. ಆದರೆ, ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಇದೆ. ಈ ಕಾರಣಕ್ಕೆ ಸಲ್ಮಾನ್​ ಖಾನ್​ಗೂ ಮದುವೆ ಆಮಂತ್ರಣ ಹೋಗಿದೆ ಎನ್ನಲಾಗುತ್ತಿದೆ. ಆಲಿಯಾ ಹಾಗೂ ಕತ್ರಿನಾ ನಡುವೆ ಉತ್ತಮ ಗೆಳೆತನ ಇದೆ. ಹೀಗಾಗಿ, ಆಲಿಯಾ ಭಟ್​ ಹಾಗೂ ಅವರ ಭಾವಿ ಪತಿ ರಣಬೀರ್ ಕಪೂರ್​​​ಗೂ ಮದುವೆಯ ಕರೆಯೋಲೆ ಸಿಕ್ಕಿದೆ. ರಣಬೀರ್​ ಜತೆಯೂ ಕತ್ರಿನಾ ರಿಲೇಶನ್​ಶಿಪ್​ನಲ್ಲಿದ್ದರು  ಒಟ್ಟಿನಲ್ಲಿ ಈ ಮದುವೆಯಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳ ದಂಡು ನೆರೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.

ಇದನ್ನೂ ಓದಿ: Nykaa IPO: ಅಬ್ಬಬ್ಬಾ.. ನೈಕಾ ಕಂಪನಿಯಲ್ಲಿ ಹೂಡಿಕೆ ಮಾಡಿ ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​ ಗಳಿಸಿದ್ದು ಇಷ್ಟೊಂದಾ?

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ