AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು

Ranveer Singh movie: ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ. ಆದರೆ ರಣ್ವೀರ್ ಸಿಂಗ್ ಅವರು ನಟಿಸಲಿದ್ದ ಸಿನಿಮಾ ನಿಂತು ಹೋಗಿರುವುದು ಇದು ಮೊದಲೇನೂ ಅಲ್ಲ. ಇಲ್ಲಿದೆ ನೋಡಿ ಪಟ್ಟಿ...

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು
Ranveer Singh
ಮಂಜುನಾಥ ಸಿ.
|

Updated on: May 27, 2026 | 7:13 PM

Share

ಧುರಂಧರ್’ (Dhurandar) ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಇಂಡಸ್ಟ್ರಿ ಹಿಟ್ ನೀಡಿರುವ ರಣ್ವೀರ್ ಸಿಂಗ್ ಈಗ ಅದೇ ಇಂಡಸ್ಟ್ರಿಯಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ. ಆದರೆ ರಣ್ವೀರ್ ಸಿಂಗ್ ಅವರು ನಟಿಸಲಿದ್ದ ಸಿನಿಮಾ ನಿಂತು ಹೋಗಿರುವುದು ಇದು ಮೊದಲೇನೂ ಅಲ್ಲ. ಇಲ್ಲಿದೆ ನೋಡಿ ಪಟ್ಟಿ…

ರಣ್ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ‘ರಾಮ್ ಲೀಲಾ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದರು. ಸಂಜಯ್ ಅವರೇ ನಿರ್ದೇಶಿಸಿದ್ದ ‘ಬಾಜಿರಾವ್ ಮಸ್ತಾನಿ’ ಸಿನಿಮಾನಲ್ಲೂ ರಣ್ವೀರ್ ನಾಯಕ. ರಣ್ವೀರ್ ನಟನೆಯಿಂದ ಇಂಪ್ರೆಸ್ ಆಗಿದ್ದ ಸಂಜಯ್ ಲೀಲಾ ಬನ್ಸಾಲಿ, ರಣ್ವೀರ್ ಜೊತೆಗೆ ‘ಬೈಜು ಬವರಾ’ ಹೆಸರಿನ ಸಿನಿಮಾ ಘೋಷಿಸಿದ್ದರು. ಆದರೆ ಆ ಸಿನಿಮಾ ಶುರುವಾಗುವ ಮುಂಚೆಯೇ ನಿಂತು ಹೋಯ್ತು.

ಕರಣ್ ಜೋಹರ್ ಅವರು ರಣ್ವೀರ್ ಸಿಂಗ್ ನಾಯಕನಾಗಿ ಹಾಕಿಕೊಂಡು ‘ತಕ್ತ್’ ಹೆಸರಿನ ಸಿನಿಮಾ ಘೋಷಿಸಿದ್ದರು. ಆ ಸಿನಿಮಾಕ್ಕೆ ಕರಣ್ ಜೋಹರ್ ನಿರ್ಮಾಪಕ ಆದರೆ ಆ ಸಿನಿಮಾ ಸಹ ನಿಂತು ಹೋಯ್ತು. ಆ ಬಳಿಕ ಕರಣ್ ನಿರ್ದೇಶಿಸಿದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾನಲ್ಲಿ ರಣ್ವೀರ್ ನಟಿಸಿದರು. ಬಳಿಕ ತಮಿಳಿನ ಸ್ಟಾರ್ ನಿರ್ದೇಶಕ ಶಂಕರ್ ಅವರು ರಣ್ವೀರ್ ಸಿಂಗ್ ಅವರನ್ನು ಹಾಕಿಕೊಂಡು ಹಿಂದಿಯಲ್ಲಿ ತಮಿಳಿನ ‘ಅನ್ನಿಯನ್’ ಸಿನಿಮಾದ ರೀಮೇಕ್ ಮಾಡಲು ಬಯಸಿದ್ದರು. ಇಬ್ಬರೂ ಒಟ್ಟಿಗೆ ಫೋಟೊ ಶೂಟ್ ಸಹ ಮಾಡಿಸಿದರು. ಆದರೆ ಆ ಸಿನಿಮಾ ಸಹ ಸೆಟ್ಟೇರಲಿಲ್ಲ.

ಇದನ್ನೂ ಓದಿ:ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್

ತೆಲುಗಿನ ಯುವ ಸ್ಟಾರ್ ನಿರ್ದೇಶಕ ಪ್ರಶಾಂತ್ ವರ್ಮಾ, ರಣ್ವೀರ್ ಸಿಂಗ್​​ಗಾಗಿ ಸಿನಿಮಾ ಮಾಡಲು ಮುಂದಾಗಿದ್ದರು. ಬಹಳ ಸಮಯ ಇಬ್ಬರೂ ಕತೆಯ ಬಗ್ಗೆ ಚರ್ಚೆ ನಡೆಸಿದರು. ಆದರೆ ಕೊನೆಗೆ ರಣ್ವೀರ್ ಸಿಂಗ್ ಸಿನಿಮಾದಿಂದ ಹಿಂದೆ ಸರಿದರು. ಆ ಬಗ್ಗೆ ಟ್ವೀಟ್ ಸಹ ಮಾಡಿದ್ದರು. ಕೆಲ ಸುದ್ದಿಗಳ ಪ್ರಕಾರ, ಅದೇ ಕತೆಯನ್ನು ಈಗ ಪ್ರಶಾಂತ್ ವರ್ಮಾ ಅವರು ರಿಷಬ್ ಶೆಟ್ಟಿಗಾಗಿ ‘ಜೈ ಹನುಮಾನ್’ ಹೆಸರಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಮಲಯಾಳಂನ ಸ್ಟಾರ್ ನಟ ಮತ್ತು ನಿರ್ದೇಶಕ ಬಾಸಿಲ್ ಜೋಸೆಫ್ ಅವರು ರಣ್ವೀರ್ ಸಿಂಗ್ ಅವರಿಗಾಗಿ ‘ಶಕ್ತಿಮಾನ್’ ಕತೆಯನ್ನು ಸಿನಿಮಾ ಮಾಡಲು ಬಯಸಿದ್ದರು. ಈ ಸಿನಿಮಾ ಮಾಡಲೆಂದು ಅವರು ಸುಮಾರು ಒಂದು ವರ್ಷ ಮುಂಬೈನಲ್ಲಿ ಕಳೆದರು. ಇಬ್ಬರ ನಡುವೆ ಸಾಕಷ್ಟು ಚರ್​ಚೆಗಳು ಸಹ ನಡೆದವು. ಬಾಸಿಲ್ ಸಹ ತಮ್ಮ ಚಿತ್ರಕತೆಯನ್ನು ರಣ್ವೀರ್ ಅವರ ಕೋರಿಕೆಯಂತೆ ಹಲವು ಬಾರಿ ಬದಲಾವಣೆ ಸಹ ಮಾಡಿದರು. ಕೊನೆಗೆ ರಣ್ವೀರ್ ಸಿಂಗ್, ಬಾಸಿಲ್​​ಗೂ ನೋ ಹೇಳಿದರು. ಈಗ ಅದೇ ಕತೆಯನ್ನು ತುಸು ಬದಲಾವಣೆ ಮಾಡಿ, ಅಲ್ಲು ಅರ್ಜುನ್​​ಗಾಗಿ ಸಿನಿಮಾ ಮಾಡುತ್ತಿದ್ದಾರೆ ಬಾಸಿಲ್. ಇವು ಮಾತ್ರವೇ ಅಲ್ಲದೆ, ರಣ್ವೀರ್ ಅವರು ಇನ್ನೂ ಕೆಲ ಸಿನಿಮಾಗಳನ್ನು ಒಪ್ಪಿಕೊಂಡು ಬಳಿಕ ನಿರಾಕರಿಸಿದ್ದಿದೆ. ಆದರೆ ‘ಡಾನ್ 3’ ಮಾತ್ರ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!