AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು

Ranveer Singh movie: ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ. ಆದರೆ ರಣ್ವೀರ್ ಸಿಂಗ್ ಅವರು ನಟಿಸಲಿದ್ದ ಸಿನಿಮಾ ನಿಂತು ಹೋಗಿರುವುದು ಇದು ಮೊದಲೇನೂ ಅಲ್ಲ. ಇಲ್ಲಿದೆ ನೋಡಿ ಪಟ್ಟಿ...

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು
Ranveer Singh
ಮಂಜುನಾಥ ಸಿ.
|

Updated on: May 27, 2026 | 7:13 PM

Share

ಧುರಂಧರ್’ (Dhurandar) ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಇಂಡಸ್ಟ್ರಿ ಹಿಟ್ ನೀಡಿರುವ ರಣ್ವೀರ್ ಸಿಂಗ್ ಈಗ ಅದೇ ಇಂಡಸ್ಟ್ರಿಯಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ. ಆದರೆ ರಣ್ವೀರ್ ಸಿಂಗ್ ಅವರು ನಟಿಸಲಿದ್ದ ಸಿನಿಮಾ ನಿಂತು ಹೋಗಿರುವುದು ಇದು ಮೊದಲೇನೂ ಅಲ್ಲ. ಇಲ್ಲಿದೆ ನೋಡಿ ಪಟ್ಟಿ…

ರಣ್ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ‘ರಾಮ್ ಲೀಲಾ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದರು. ಸಂಜಯ್ ಅವರೇ ನಿರ್ದೇಶಿಸಿದ್ದ ‘ಬಾಜಿರಾವ್ ಮಸ್ತಾನಿ’ ಸಿನಿಮಾನಲ್ಲೂ ರಣ್ವೀರ್ ನಾಯಕ. ರಣ್ವೀರ್ ನಟನೆಯಿಂದ ಇಂಪ್ರೆಸ್ ಆಗಿದ್ದ ಸಂಜಯ್ ಲೀಲಾ ಬನ್ಸಾಲಿ, ರಣ್ವೀರ್ ಜೊತೆಗೆ ‘ಬೈಜು ಬವರಾ’ ಹೆಸರಿನ ಸಿನಿಮಾ ಘೋಷಿಸಿದ್ದರು. ಆದರೆ ಆ ಸಿನಿಮಾ ಶುರುವಾಗುವ ಮುಂಚೆಯೇ ನಿಂತು ಹೋಯ್ತು.

ಕರಣ್ ಜೋಹರ್ ಅವರು ರಣ್ವೀರ್ ಸಿಂಗ್ ನಾಯಕನಾಗಿ ಹಾಕಿಕೊಂಡು ‘ತಕ್ತ್’ ಹೆಸರಿನ ಸಿನಿಮಾ ಘೋಷಿಸಿದ್ದರು. ಆ ಸಿನಿಮಾಕ್ಕೆ ಕರಣ್ ಜೋಹರ್ ನಿರ್ಮಾಪಕ ಆದರೆ ಆ ಸಿನಿಮಾ ಸಹ ನಿಂತು ಹೋಯ್ತು. ಆ ಬಳಿಕ ಕರಣ್ ನಿರ್ದೇಶಿಸಿದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾನಲ್ಲಿ ರಣ್ವೀರ್ ನಟಿಸಿದರು. ಬಳಿಕ ತಮಿಳಿನ ಸ್ಟಾರ್ ನಿರ್ದೇಶಕ ಶಂಕರ್ ಅವರು ರಣ್ವೀರ್ ಸಿಂಗ್ ಅವರನ್ನು ಹಾಕಿಕೊಂಡು ಹಿಂದಿಯಲ್ಲಿ ತಮಿಳಿನ ‘ಅನ್ನಿಯನ್’ ಸಿನಿಮಾದ ರೀಮೇಕ್ ಮಾಡಲು ಬಯಸಿದ್ದರು. ಇಬ್ಬರೂ ಒಟ್ಟಿಗೆ ಫೋಟೊ ಶೂಟ್ ಸಹ ಮಾಡಿಸಿದರು. ಆದರೆ ಆ ಸಿನಿಮಾ ಸಹ ಸೆಟ್ಟೇರಲಿಲ್ಲ.

ಇದನ್ನೂ ಓದಿ:ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್

ತೆಲುಗಿನ ಯುವ ಸ್ಟಾರ್ ನಿರ್ದೇಶಕ ಪ್ರಶಾಂತ್ ವರ್ಮಾ, ರಣ್ವೀರ್ ಸಿಂಗ್​​ಗಾಗಿ ಸಿನಿಮಾ ಮಾಡಲು ಮುಂದಾಗಿದ್ದರು. ಬಹಳ ಸಮಯ ಇಬ್ಬರೂ ಕತೆಯ ಬಗ್ಗೆ ಚರ್ಚೆ ನಡೆಸಿದರು. ಆದರೆ ಕೊನೆಗೆ ರಣ್ವೀರ್ ಸಿಂಗ್ ಸಿನಿಮಾದಿಂದ ಹಿಂದೆ ಸರಿದರು. ಆ ಬಗ್ಗೆ ಟ್ವೀಟ್ ಸಹ ಮಾಡಿದ್ದರು. ಕೆಲ ಸುದ್ದಿಗಳ ಪ್ರಕಾರ, ಅದೇ ಕತೆಯನ್ನು ಈಗ ಪ್ರಶಾಂತ್ ವರ್ಮಾ ಅವರು ರಿಷಬ್ ಶೆಟ್ಟಿಗಾಗಿ ‘ಜೈ ಹನುಮಾನ್’ ಹೆಸರಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಮಲಯಾಳಂನ ಸ್ಟಾರ್ ನಟ ಮತ್ತು ನಿರ್ದೇಶಕ ಬಾಸಿಲ್ ಜೋಸೆಫ್ ಅವರು ರಣ್ವೀರ್ ಸಿಂಗ್ ಅವರಿಗಾಗಿ ‘ಶಕ್ತಿಮಾನ್’ ಕತೆಯನ್ನು ಸಿನಿಮಾ ಮಾಡಲು ಬಯಸಿದ್ದರು. ಈ ಸಿನಿಮಾ ಮಾಡಲೆಂದು ಅವರು ಸುಮಾರು ಒಂದು ವರ್ಷ ಮುಂಬೈನಲ್ಲಿ ಕಳೆದರು. ಇಬ್ಬರ ನಡುವೆ ಸಾಕಷ್ಟು ಚರ್​ಚೆಗಳು ಸಹ ನಡೆದವು. ಬಾಸಿಲ್ ಸಹ ತಮ್ಮ ಚಿತ್ರಕತೆಯನ್ನು ರಣ್ವೀರ್ ಅವರ ಕೋರಿಕೆಯಂತೆ ಹಲವು ಬಾರಿ ಬದಲಾವಣೆ ಸಹ ಮಾಡಿದರು. ಕೊನೆಗೆ ರಣ್ವೀರ್ ಸಿಂಗ್, ಬಾಸಿಲ್​​ಗೂ ನೋ ಹೇಳಿದರು. ಈಗ ಅದೇ ಕತೆಯನ್ನು ತುಸು ಬದಲಾವಣೆ ಮಾಡಿ, ಅಲ್ಲು ಅರ್ಜುನ್​​ಗಾಗಿ ಸಿನಿಮಾ ಮಾಡುತ್ತಿದ್ದಾರೆ ಬಾಸಿಲ್. ಇವು ಮಾತ್ರವೇ ಅಲ್ಲದೆ, ರಣ್ವೀರ್ ಅವರು ಇನ್ನೂ ಕೆಲ ಸಿನಿಮಾಗಳನ್ನು ಒಪ್ಪಿಕೊಂಡು ಬಳಿಕ ನಿರಾಕರಿಸಿದ್ದಿದೆ. ಆದರೆ ‘ಡಾನ್ 3’ ಮಾತ್ರ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ