AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಬಚ್ಚನ್​ಗೆ ಪತ್ನಿ ಐಶ್ವರ್ಯಾ ರೈ ಮೇಲೆ ಕಡಿಮೆ ಆಗಿದೆ ಪ್ರೀತಿ? ಸಾಕ್ಷಿ ಹುಡುಕಿದ ಫ್ಯಾನ್ಸ್

ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನ ಆರಂಭ ಆಗಿ 16 ವರ್ಷಗಳ ಮೇಲಾಗಿದೆ. ಇವರ ದಾಂಪತ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡುವಂತೆ ಆಗಿದೆ.

ಅಭಿಷೇಕ್ ಬಚ್ಚನ್​ಗೆ ಪತ್ನಿ ಐಶ್ವರ್ಯಾ ರೈ ಮೇಲೆ ಕಡಿಮೆ ಆಗಿದೆ ಪ್ರೀತಿ? ಸಾಕ್ಷಿ ಹುಡುಕಿದ ಫ್ಯಾನ್ಸ್
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Nov 02, 2023 | 11:20 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಮದುವೆ ಆಗಿ ಹಲವು ವರ್ಷ ಕಳೆದಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆದರೆ, ಅಭಿಷೇಕ್ ಬಚ್ಚನ್​ಗೆ ಪತ್ನಿಯ ಮೇಲೆ ಮೊದಲಿನಷ್ಟು ಪ್ರೀತಿ ಉಳಿದುಕೊಂಡಿಲ್ಲ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಇದಕ್ಕೆ ಅಭಿಷೇಕ್ ಬಚ್ಚನ್ ಮಾಡಿರೋ ಹೊಸ ಪೋಸ್ಟ್ ಒಳ್ಳೆಯ ಉದಾಹರಣೆ. ನವೆಂಬರ್ 1ರಂದು ಐಶ್ವರ್ಯಾ ರೈ ಬಚ್ಚನ್ ಅವರು ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಅಭಿಷೇಕ್ ಮಾಡಿರೋ ಪೋಸ್ಟ್​ ಅನೇಕರ ಅಚ್ಚರಿಗೆ ಕಾರಣ ಆಗಿದೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರು ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗುರು’ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ನೋಡಿ ಜನರು ಇಷ್ಟಪಟ್ಟರು. ಇವರು 2007ರಲ್ಲಿ ಮದುವೆ ಆದರು. ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನ ಆರಂಭ ಆಗಿ 16 ವರ್ಷಗಳ ಮೇಲಾಗಿದೆ. ಇವರ ದಾಂಪತ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡುವಂತೆ ಆಗಿದೆ.

ಬರ್ತ್​ಡೇ ದಿನ ಐಶ್ವರ್ಯಾ ರೈ ಅವರ ಒಂದು ಫೋಟೋನ ಪೋಸ್ಟ್ ಮಾಡಿದ್ದಾರೆ ಅಭಿಷೇಕ್. ಆ ಫೋಟೋ ಗೂಗಲ್​ನಲ್ಲಿ ಹುಡುಕಿ ತೆಗೆದಂತಿದೆ. ಈ ಫೋಟೋಗೆ ‘ಹುಟ್ಟುಹಬ್ಬದ ಶುಭಾಶಯ’ ಎಂದಷ್ಟೇ ಬರೆದುಕೊಂಡಿದ್ದಾರೆ. ಕೆಲ ವಾರಗಳ ಹಿಂದೆ ಅಮಿತಾಭ್ ಹುಟ್ಟುಹಬ್ಬ ಇತ್ತು. ಆಗ ಅಭಿಷೇಕ್ ಅವರು ತಂದೆಯ ಜೊತೆ ಇರುವ ಫೋಟೋ ಹಾಕಿ ಉದ್ದನೆಯ ಕ್ಯಾಪ್ಶನ್ ಬರೆದಿದ್ದರು. ಎರಡೂ ಪೋಸ್ಟ್​ಗಳನ್ನು ಹೋಲಿಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಐಶ್ವರ್ಯಾ ರೈ ಮೇಲೆ ಸಲ್ಮಾನ್ ಖಾನ್​ಗೆ ಇತ್ತು ಅನುಮಾನ; ಸಂಬಂಧ ಮುರಿದು ಬೀಳಲು ಇದೇ ಕಾರಣ

‘ಕಾಟಾಚಾರಕ್ಕೆ ಈ ಫೋಟೋ ಪೋಸ್ಟ್ ಮಾಡಿದಂತಿದೆ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ನಿಮ್ಮ ತಂದೆಗೆ ಒಂದು ಆರ್ಟಿಕಲ್ ಸೈಜ್​ನ ವಿಶ್ ಬರೆದಿದ್ದಿರಿ. ನಿಮ್ಮ ಪತ್ನಿಗೆ ಹ್ಯಾಪಿ ಬರ್ತ್​ಡೇ ಅನ್ನೋ ಸಾಲುಗಳನ್ನಷ್ಟೇ ಬರೆದಿದ್ದೀರಿ’ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅಭಿಷೇಕ್ ಬಚ್ಚನ್​ಗೆ ಪತ್ನಿಯ ಮೇಲೆ ಮೊದಲಿನಷ್ಟು ಪ್ರೀತಿ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು