AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಬಚ್ಚನ್​ಗೆ ಪತ್ನಿ ಐಶ್ವರ್ಯಾ ರೈ ಮೇಲೆ ಕಡಿಮೆ ಆಗಿದೆ ಪ್ರೀತಿ? ಸಾಕ್ಷಿ ಹುಡುಕಿದ ಫ್ಯಾನ್ಸ್

ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನ ಆರಂಭ ಆಗಿ 16 ವರ್ಷಗಳ ಮೇಲಾಗಿದೆ. ಇವರ ದಾಂಪತ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡುವಂತೆ ಆಗಿದೆ.

ಅಭಿಷೇಕ್ ಬಚ್ಚನ್​ಗೆ ಪತ್ನಿ ಐಶ್ವರ್ಯಾ ರೈ ಮೇಲೆ ಕಡಿಮೆ ಆಗಿದೆ ಪ್ರೀತಿ? ಸಾಕ್ಷಿ ಹುಡುಕಿದ ಫ್ಯಾನ್ಸ್
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Nov 02, 2023 | 11:20 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಮದುವೆ ಆಗಿ ಹಲವು ವರ್ಷ ಕಳೆದಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆದರೆ, ಅಭಿಷೇಕ್ ಬಚ್ಚನ್​ಗೆ ಪತ್ನಿಯ ಮೇಲೆ ಮೊದಲಿನಷ್ಟು ಪ್ರೀತಿ ಉಳಿದುಕೊಂಡಿಲ್ಲ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಇದಕ್ಕೆ ಅಭಿಷೇಕ್ ಬಚ್ಚನ್ ಮಾಡಿರೋ ಹೊಸ ಪೋಸ್ಟ್ ಒಳ್ಳೆಯ ಉದಾಹರಣೆ. ನವೆಂಬರ್ 1ರಂದು ಐಶ್ವರ್ಯಾ ರೈ ಬಚ್ಚನ್ ಅವರು ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಅಭಿಷೇಕ್ ಮಾಡಿರೋ ಪೋಸ್ಟ್​ ಅನೇಕರ ಅಚ್ಚರಿಗೆ ಕಾರಣ ಆಗಿದೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರು ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗುರು’ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ನೋಡಿ ಜನರು ಇಷ್ಟಪಟ್ಟರು. ಇವರು 2007ರಲ್ಲಿ ಮದುವೆ ಆದರು. ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನ ಆರಂಭ ಆಗಿ 16 ವರ್ಷಗಳ ಮೇಲಾಗಿದೆ. ಇವರ ದಾಂಪತ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡುವಂತೆ ಆಗಿದೆ.

ಬರ್ತ್​ಡೇ ದಿನ ಐಶ್ವರ್ಯಾ ರೈ ಅವರ ಒಂದು ಫೋಟೋನ ಪೋಸ್ಟ್ ಮಾಡಿದ್ದಾರೆ ಅಭಿಷೇಕ್. ಆ ಫೋಟೋ ಗೂಗಲ್​ನಲ್ಲಿ ಹುಡುಕಿ ತೆಗೆದಂತಿದೆ. ಈ ಫೋಟೋಗೆ ‘ಹುಟ್ಟುಹಬ್ಬದ ಶುಭಾಶಯ’ ಎಂದಷ್ಟೇ ಬರೆದುಕೊಂಡಿದ್ದಾರೆ. ಕೆಲ ವಾರಗಳ ಹಿಂದೆ ಅಮಿತಾಭ್ ಹುಟ್ಟುಹಬ್ಬ ಇತ್ತು. ಆಗ ಅಭಿಷೇಕ್ ಅವರು ತಂದೆಯ ಜೊತೆ ಇರುವ ಫೋಟೋ ಹಾಕಿ ಉದ್ದನೆಯ ಕ್ಯಾಪ್ಶನ್ ಬರೆದಿದ್ದರು. ಎರಡೂ ಪೋಸ್ಟ್​ಗಳನ್ನು ಹೋಲಿಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಐಶ್ವರ್ಯಾ ರೈ ಮೇಲೆ ಸಲ್ಮಾನ್ ಖಾನ್​ಗೆ ಇತ್ತು ಅನುಮಾನ; ಸಂಬಂಧ ಮುರಿದು ಬೀಳಲು ಇದೇ ಕಾರಣ

‘ಕಾಟಾಚಾರಕ್ಕೆ ಈ ಫೋಟೋ ಪೋಸ್ಟ್ ಮಾಡಿದಂತಿದೆ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ನಿಮ್ಮ ತಂದೆಗೆ ಒಂದು ಆರ್ಟಿಕಲ್ ಸೈಜ್​ನ ವಿಶ್ ಬರೆದಿದ್ದಿರಿ. ನಿಮ್ಮ ಪತ್ನಿಗೆ ಹ್ಯಾಪಿ ಬರ್ತ್​ಡೇ ಅನ್ನೋ ಸಾಲುಗಳನ್ನಷ್ಟೇ ಬರೆದಿದ್ದೀರಿ’ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅಭಿಷೇಕ್ ಬಚ್ಚನ್​ಗೆ ಪತ್ನಿಯ ಮೇಲೆ ಮೊದಲಿನಷ್ಟು ಪ್ರೀತಿ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ