AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಬಚ್ಚನ್​ಗೆ ಪತ್ನಿ ಐಶ್ವರ್ಯಾ ರೈ ಮೇಲೆ ಕಡಿಮೆ ಆಗಿದೆ ಪ್ರೀತಿ? ಸಾಕ್ಷಿ ಹುಡುಕಿದ ಫ್ಯಾನ್ಸ್

ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನ ಆರಂಭ ಆಗಿ 16 ವರ್ಷಗಳ ಮೇಲಾಗಿದೆ. ಇವರ ದಾಂಪತ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡುವಂತೆ ಆಗಿದೆ.

ಅಭಿಷೇಕ್ ಬಚ್ಚನ್​ಗೆ ಪತ್ನಿ ಐಶ್ವರ್ಯಾ ರೈ ಮೇಲೆ ಕಡಿಮೆ ಆಗಿದೆ ಪ್ರೀತಿ? ಸಾಕ್ಷಿ ಹುಡುಕಿದ ಫ್ಯಾನ್ಸ್
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Nov 02, 2023 | 11:20 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಮದುವೆ ಆಗಿ ಹಲವು ವರ್ಷ ಕಳೆದಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆದರೆ, ಅಭಿಷೇಕ್ ಬಚ್ಚನ್​ಗೆ ಪತ್ನಿಯ ಮೇಲೆ ಮೊದಲಿನಷ್ಟು ಪ್ರೀತಿ ಉಳಿದುಕೊಂಡಿಲ್ಲ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಇದಕ್ಕೆ ಅಭಿಷೇಕ್ ಬಚ್ಚನ್ ಮಾಡಿರೋ ಹೊಸ ಪೋಸ್ಟ್ ಒಳ್ಳೆಯ ಉದಾಹರಣೆ. ನವೆಂಬರ್ 1ರಂದು ಐಶ್ವರ್ಯಾ ರೈ ಬಚ್ಚನ್ ಅವರು ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಅಭಿಷೇಕ್ ಮಾಡಿರೋ ಪೋಸ್ಟ್​ ಅನೇಕರ ಅಚ್ಚರಿಗೆ ಕಾರಣ ಆಗಿದೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರು ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗುರು’ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ನೋಡಿ ಜನರು ಇಷ್ಟಪಟ್ಟರು. ಇವರು 2007ರಲ್ಲಿ ಮದುವೆ ಆದರು. ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನ ಆರಂಭ ಆಗಿ 16 ವರ್ಷಗಳ ಮೇಲಾಗಿದೆ. ಇವರ ದಾಂಪತ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡುವಂತೆ ಆಗಿದೆ.

ಬರ್ತ್​ಡೇ ದಿನ ಐಶ್ವರ್ಯಾ ರೈ ಅವರ ಒಂದು ಫೋಟೋನ ಪೋಸ್ಟ್ ಮಾಡಿದ್ದಾರೆ ಅಭಿಷೇಕ್. ಆ ಫೋಟೋ ಗೂಗಲ್​ನಲ್ಲಿ ಹುಡುಕಿ ತೆಗೆದಂತಿದೆ. ಈ ಫೋಟೋಗೆ ‘ಹುಟ್ಟುಹಬ್ಬದ ಶುಭಾಶಯ’ ಎಂದಷ್ಟೇ ಬರೆದುಕೊಂಡಿದ್ದಾರೆ. ಕೆಲ ವಾರಗಳ ಹಿಂದೆ ಅಮಿತಾಭ್ ಹುಟ್ಟುಹಬ್ಬ ಇತ್ತು. ಆಗ ಅಭಿಷೇಕ್ ಅವರು ತಂದೆಯ ಜೊತೆ ಇರುವ ಫೋಟೋ ಹಾಕಿ ಉದ್ದನೆಯ ಕ್ಯಾಪ್ಶನ್ ಬರೆದಿದ್ದರು. ಎರಡೂ ಪೋಸ್ಟ್​ಗಳನ್ನು ಹೋಲಿಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಐಶ್ವರ್ಯಾ ರೈ ಮೇಲೆ ಸಲ್ಮಾನ್ ಖಾನ್​ಗೆ ಇತ್ತು ಅನುಮಾನ; ಸಂಬಂಧ ಮುರಿದು ಬೀಳಲು ಇದೇ ಕಾರಣ

‘ಕಾಟಾಚಾರಕ್ಕೆ ಈ ಫೋಟೋ ಪೋಸ್ಟ್ ಮಾಡಿದಂತಿದೆ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ನಿಮ್ಮ ತಂದೆಗೆ ಒಂದು ಆರ್ಟಿಕಲ್ ಸೈಜ್​ನ ವಿಶ್ ಬರೆದಿದ್ದಿರಿ. ನಿಮ್ಮ ಪತ್ನಿಗೆ ಹ್ಯಾಪಿ ಬರ್ತ್​ಡೇ ಅನ್ನೋ ಸಾಲುಗಳನ್ನಷ್ಟೇ ಬರೆದಿದ್ದೀರಿ’ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅಭಿಷೇಕ್ ಬಚ್ಚನ್​ಗೆ ಪತ್ನಿಯ ಮೇಲೆ ಮೊದಲಿನಷ್ಟು ಪ್ರೀತಿ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು