ಅಮಿತಾಭ್ ಬಚ್ಚನ್​ಗೆ ಮತ್ತೆ ಕಾಡಿದೆ ಅನಾರೋಗ್ಯ? ಅಭಿಮಾನಿಗಳಿಗೆ ಮೂಡಿದೆ ಆತಂಕ

Amitabh Bachchan: ‘ಕಲ್ಕಿ 2898 ಎಡಿ’ ಹೆಸರಿನ ಶೀರ್ಷಿಕೆಯನ್ನು ಅನಾವರಣ ಕಾರ್ಯಕ್ರಮಕ್ಕೆ ಅಮಿತಾಭ್ ಬಚ್ಚನ್ ಹಾಜರಿ ಹಾಕಿಲ್ಲ. ಈ ಬಗ್ಗೆ ಅವರು ತಮ್ಮ ಬ್ಲಾಗ್​ನಲ್ಲಿ ಬರೆದುಕೊಂಡಿದ್ದಾರೆ.   

ಅಮಿತಾಭ್ ಬಚ್ಚನ್​ಗೆ ಮತ್ತೆ ಕಾಡಿದೆ ಅನಾರೋಗ್ಯ? ಅಭಿಮಾನಿಗಳಿಗೆ ಮೂಡಿದೆ ಆತಂಕ
ಅಮಿತಾಭ್ ಬಚ್ಚನ್
Follow us
|

Updated on: Jul 24, 2023 | 7:09 AM

ಬಾಲಿವುಡ್​ ಸ್ಟಾರ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಹಲವು ದಶಕಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹಲವು ರೀತಿಯ ಅನಾರೋಗ್ಯ ಇದೆ. ಆದರೆ, ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿಲ್ಲ. ಈ ವಯಸ್ಸಿನಲ್ಲೂ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದು ನಟನೆ ಬಗ್ಗೆ ಅವರಿಗೆ ಇರುವ ಪ್ಯಾಷನ್​ನ ತೋರಿಸುತ್ತದೆ. ಇತ್ತೀಚೆಗೆ ‘ಕಲ್ಕಿ 2898 ಎಡಿ’ ಚಿತ್ರದ (Kalki 2898 AD) ಮೊದಲ ಗ್ಲಿಂಪ್ಸ್ ರಿಲೀಸ್ ಆಯಿತು. ಅಮೆರಿಕದಲ್ಲಿ ಈ ಕಾರ್ಯಕ್ರಮ ನಡೆಯಿತು. ಆದರೆ, ಅಮಿತಾಭ್ ಬಚ್ಚನ್ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿರಲಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಅಮೆರಿಕದ ಸ್ಯಾನ್​ ಡಿಯಾಗೋದಲ್ಲಿ ಫಸ್ಟ್​ ಗ್ಲಿಂಪ್ಸ್​ ರಿಲೀಸ್​ ಮಾಡಲಾಯಿತು. ಈ ಮೂಲಕ ‘ಕಲ್ಕಿ 2898 ಎಡಿ’ ಹೆಸರಿನ ಶೀರ್ಷಿಕೆಯನ್ನು ಅನಾವರಣ ಮಾಡಲಾಗಿದೆ. ಈ ಗ್ಲಿಂಪ್ಸ್​ನಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಂಡಿದ್ದಾರೆ. ಆದರೆ, ಅವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿಲ್ಲ. ಈ ಬಗ್ಗೆ ಅವರು ತಮ್ಮ ಬ್ಲಾಗ್​ನಲ್ಲಿ ಬರೆದುಕೊಂಡಿದ್ದಾರೆ.

‘ಸ್ಯಾನ್ ಡಿಯಾಗೋದಲ್ಲಿ ನಡೆದ ಪ್ರಾಜೆಕ್ಟ್ ಕೆ ಕಾರ್ಯಕ್ರಮ ತಂಡದವರಿಗೆ ನಿಜಕ್ಕೂ ಉತ್ತಮ ಕ್ಷಣ. ನಾಗಿ ಸರ್ (ನಿರ್ದೇಶಕ ನಾಗ್ ಅಶ್ವಿನ್) ನನ್ನನ್ನು ಬರುವಂತೆ ಒತ್ತಾಯಿಸಿದರು. ಆದರೆ ಕೆಲಸ ಮತ್ತು ವೈದ್ಯಕೀಯ ನಿರ್ಬಂಧಗಳು ನನ್ನನ್ನು ಅಂತಹ ಅನೇಕ ಕಾರ್ಯಕ್ರಮಗಳಿಗೆ ಹೋಗದಂತೆ ತಡೆದಿವೆ. ಫಸ್ಟ್​ ಲುಕ್ ಚೆನ್ನಾಗಿದೆ ಎಂಬುದನ್ನು ನಾನು ಒಪ್ಪಿಕೊಳ್ಳಲೇಬೇಕು’ ಎಂದಿದ್ದಾರೆ ಅಮಿತಾಭ್ ಬಚ್ಚನ್. ಇದರಿಂದ ಅಮಿತಾಭ್ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಅನುಮಾನ ಮೂಡಿದೆ.

‘ಕೊನೆಗೂ ಕೆ ಎಂಬುದು ಏನು ಎಂಬುದನ್ನು ರಿವೀಲ್ ಮಾಡಲಾಗಿದೆ. ಪುರಾಣದ ಪ್ರಕಾರ ಕಲ್ಕಿ ಬಹಳ ಮುಖ್ಯವಾದ ವ್ಯಕ್ತಿ. ಎಡಿ ಎಂಬುದನ್ನು ಬದಲಾಯಿಸಲಾಗಿದೆ ಅಲ್ಲವೇ? ಇಲ್ಲಿ ಎಡಿ ಎಂದರೆ ಭಗವಂತನ ವರ್ಷ ಎಂದರ್ಥ. ಎಲ್ಲಾ ಧರ್ಮದವರು ತಮ್ಮದೇ ಆದ ವರ್ಷಗಳನ್ನು ಹೊಂದಿದ್ದಾರೆ. ಅವರ ಕ್ಯಾಲೆಂಡರ್​ಗಳ ಪ್ರಕಾರ ಅದನ್ನು ಲೆಕ್ಕ ಹಾಕಲಾಗುತ್ತದೆ’ ಎಂದು ಅಮಿತಾಭ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ನಾಗ್ ಅಶ್ವಿನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ