AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಅಕ್ಷಯ್ ಕುಮಾರ್ ಕಟ್ಟುನಿಟ್ಟಾಗಿ ತೆರಿಗೆ ಪಾವತಿಸೋದು ಏಕೆ? ಕಾರಣ ತಿಳಿಸಿದ ನಟ

ಇತ್ತೀಚೆಗೆ ಅಕ್ಷಯ್​ ಸಿನಿಮಾಗಳು ಫ್ಲಾಪ್ ಆದರೂ ಬೇಡಿಕೆ ಕಡಿಮೆ ಆಗಿಲ್ಲ. ಅಕ್ಷಯ್ ಅವರು ತೆರಿಗೆ ಪಾವತಿ ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.  

Akshay Kumar: ಅಕ್ಷಯ್ ಕುಮಾರ್ ಕಟ್ಟುನಿಟ್ಟಾಗಿ ತೆರಿಗೆ ಪಾವತಿಸೋದು ಏಕೆ? ಕಾರಣ ತಿಳಿಸಿದ ನಟ
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Feb 24, 2023 | 1:26 PM

Share

ನಟ ಅಕ್ಷಯ್ ಕುಮಾರ್ (Akshay Kumar) ಅವರು ಹಲವು ಸೂಪರ್ ಹಿಟ್​ ಚಿತ್ರಗಳಲ್ಲಿ ನಟಿಸಿದ್ದಾರೆ. ವರ್ಷಕ್ಕೆ ಅವರ ನಟನೆಯ 4-5 ಸಿನಿಮಾಗಳು ರಿಲೀಸ್ ಆಗುತ್ತವೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಚಿತ್ರರಂಗದಿಂದ ಪ್ರತಿ ವರ್ಷ ಅವರಿಗೆ ನೂರಾರು ಕೋಟಿ ರೂಪಾಯಿ ಸಿಗುತ್ತದೆ. ಇನ್ನು, ಬೇರೆಬೇರೆ ಜಾಹೀರಾತು ಹಾಗೂ ಬ್ರ್ಯಾಂಡ್​ಗಳಿಂದಲೂ ಅವರಿಗೆ ಸಾಕಷ್ಟು ದುಡ್ಡು ಸಿಗುತ್ತದೆ. ಇಷ್ಟಿದ್ದರೂ ಅವರು ಎಂದಿಗೂ ತೆರಿಗೆ ಪಾವತಿಯಲ್ಲಿ ಹಿಂದೆ ಬಿದ್ದಿಲ್ಲ. ಹೀಗೇಕೆ ಎನ್ನುವುದಕ್ಕೆ ಅಕ್ಷಯ್ ಕುಮಾರ್ ಅವರು ಉತ್ತರ ನೀಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನ ಬೇಡಿಕೆಯ ನಟ ಮಾತ್ರ ಅಲ್ಲ. ಅತಿ ಹೆಚ್ಚು ತೆರಿಗೆ ಪಾವತಿಸುವ ಹೀರೋ ಕೂಡ ಹೌದು. 2015 ಹಾಗೂ 2019ರಲ್ಲಿ ಅಕ್ಷಯ್ ಕುಮಾರ್ ಅವರು ಮನರಂಜನಾ ಕ್ಷೇತ್ರದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೀರೋ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು. ಇತ್ತೀಚೆಗೆ ಅವರ ಸಿನಿಮಾಗಳು ಫ್ಲಾಪ್ ಆದರೂ ಬೇಡಿಕೆ ಕಡಿಮೆ ಆಗಿಲ್ಲ. ಅಕ್ಷಯ್ ಅವರು ತೆರಿಗೆ ಪಾವತಿ ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ನೀವು ನಿಮ್ಮ ತೆರಿಗೆಯನ್ನು ಪಾವತಿಸಿದರೆ ಅವರು (ತೆರಿಗೆ ಇಲಾಖೆಯವರು) ಸರಿಯಾಗಿ ಮಾತನಾಡುತ್ತಾರೆ. ಒಬ್ಬ ಅಕೌಂಟೆಂಟ್ ಮಗನಾಗಿ ನಾನು ತೆರಿಗೆಯನ್ನು ಸರಿಯಾಗಿ ಪಾವತಿಸುತ್ತಾನೆ ಎಂಬ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ತಂದೆ ನನಗೆ ತೆರಿಗೆ ಪಾವತಿಸಲು ಕಲಿಸಿದರು. ಯಾರೋ ಬಂದು ನನ್ನ ಮನೆಗೆ ಬಂದು ನಾನು ಹಣವನ್ನು ಎಲ್ಲಿ ಬಚ್ಚಿಟ್ಟಿದ್ದೇನೆ ಎಂದು ಕೇಳುವುದು ನನಗೆ ಇಷ್ಟವಿಲ್ಲ’ ಎಂದು  ಅಕ್ಷಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ
Image
ದಕ್ಷಿಣದ ಸಿನಿಮಾಗಳನ್ನು ರಿಮೇಕ್ ಮಾಡಿದ ಅಜಯ್-ಅಕ್ಷಯ್​ಗೆ ಅಗ್ನಿಪರೀಕ್ಷೆ
Image
Salman Khan: ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್​ ಮಾಡಿದ ಅಕ್ಷಯ್​, ಸಲ್ಲು: ಇದಕ್ಕಾಗಿ ಪಡೆದ ಹಣ ಎಷ್ಟು?
Image
ಮೆಟ್ರೋ ಒಳಗೆ ಅಕ್ಷಯ್ ಕುಮಾರ್-ಇಮ್ರಾನ್ ಹಷ್ಮಿ ಡ್ಯಾನ್ಸ್; ಅರೆಸ್ಟ್ ಮಾಡಿ ಎಂದ ನೆಟ್ಟಿಗರು

ಅಕ್ಷಯ್ ಕುಮಾರ್ ಅವರು ಕೆನಡಾ ದೇಶದ ಪೌರತ್ವ ಹೊಂದಿದ್ದಾರೆ. ಈ ಬಗ್ಗೆ ಅವರು ಅನೇಕ ಬಾರಿ ಟೀಕೆಗೆ ಒಳಗಾದ ಉದಾಹರಣೆ ಇದೆ. ಈ ಬಗ್ಗೆ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ‘ನನಗೆ ಭಾರತವೇ ಎಲ್ಲವೂ. ನಾನು ಏನೆಲ್ಲ ಸಂಪಾದಿಸಿದ್ದೀನೋ ಅದೆಲ್ಲವೂ ಇಲ್ಲಿಂದಲೇ ಸಂಪಾದಿಸಿರುವುದು. ನನ್ನ ಋಣ ತೀರಿಸಲು ನನಗೆ ಅವಕಾಶ ಸಿಕ್ಕಿದೆ. ಜನರು ಏನೂ ಗೊತ್ತಿಲ್ಲದೆ ಮಾತನಾಡಿದಾಗ ನನಗೆ ಬೇಸರ ಆಗುತ್ತದೆ’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.  

ಇದನ್ನೂ ಓದಿ: ಮೆಟ್ರೋ ಒಳಗೆ ಅಕ್ಷಯ್ ಕುಮಾರ್-ಇಮ್ರಾನ್ ಹಷ್ಮಿ ಡ್ಯಾನ್ಸ್; ಅರೆಸ್ಟ್ ಮಾಡಿ ಎಂದ ನೆಟ್ಟಿಗರು

ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫಿ’ ಸಿನಿಮಾ ಇಂದು (ಫೆಬ್ರವರಿ 24) ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರು ಸೂಪರ್​ಸ್ಟಾರ್ ಪಾತ್ರ ಮಾಡಿದ್ದಾರೆ. ಇದು ಮಲಯಾಳಂನ ‘ಡ್ರೈವಿಂಗ್ ಲೈಸೆನ್ಸ್​’ ಚಿತ್ರದ ರಿಮೇಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!