AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರುತ್ತಿಲ್ಲ ಬನ್ಸಾಲಿ ನಿರ್ದೇಶನದ ಈ ಸಿನಿಮಾ; ಇದಕ್ಕೆ ಎದುರಾಗುತ್ತಲೇ ಇದೆ ಅಡೆತಡೆ

‘ಬೈಜು ಬವ್ರಾ’ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ ಮೀರಲಿದೆ ಎಂದು ಅಂದಾಜಿಸಲಾಯಿತು. ಈ ಕಾರಣಕ್ಕೆ ನಿರ್ಮಾಪಕರು ಈ ಬಗ್ಗೆ ಆಸಕ್ತಿ ತೋರಿಸಿಲ್ಲ.

ಸೆಟ್ಟೇರುತ್ತಿಲ್ಲ ಬನ್ಸಾಲಿ ನಿರ್ದೇಶನದ ಈ ಸಿನಿಮಾ; ಇದಕ್ಕೆ ಎದುರಾಗುತ್ತಲೇ ಇದೆ ಅಡೆತಡೆ
ಬನ್ಸಾಲಿ
ರಾಜೇಶ್ ದುಗ್ಗುಮನೆ
|

Updated on:Jan 18, 2024 | 11:14 AM

Share

ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಅವರು ನಿರ್ದೇಶನ ಮಾಡಿದರೆ ಆ ಚಿತ್ರ ಗೆದ್ದೇ ಗೆಲ್ಲುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಚಿತ್ರದ ಕಥೆ, ಅದರ ನಿರೂಪಣೆ, ಅದಕ್ಕೆ ಪೂರಕವಾದ ಸೆಟ್ ಹಾಗೂ ಸಂಗೀತ ಎಲ್ಲವೂ ಹದವಾಗಿ ಬೆರೆತು ಒಂದೊಳ್ಳೆಯ ಪ್ರಾಡಕ್ಟ್ ತಯಾರಾಗುತ್ತದೆ. ಈ ಕಾರಣಕ್ಕೆ ಸಂಜಯ್ ಲೀಲಾ ಬನ್ಸಾಲಿ ಜೊತೆ ಕೆಲಸ ಮಾಡೋಕೆ ಅನೇಕ ನಿರ್ಮಾಪಕರು ಉತ್ಸಾಹ ತೋರುತ್ತಾರೆ. ಆದರೆ, ಅವರ ಕನಸಿನ ಪ್ರಾಜೆಕ್ಟ್​ನ ಆರಂಭಿಸಲು ಈವರೆಗೂ ಸಾಧ್ಯವಾಗಿಲ್ಲ. ಇದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗಿವೆ.

‘ಬೈಜು ಬವ್ರಾ’ ಹೆಸರಿನ ಸಿನಿಮಾ ಮಾಡಲು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಕೊವಿಡ್​ಗೂ ಮೊದಲು ಈ ಬಗ್ಗೆ ಘೋಷಣೆ ಮಾಡಿದ್ದರು. ಈ ಚಿತ್ರಕ್ಕೆ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರನ್ನು ಆಯ್ಕೆ ಮಾಡಿಕೊಂಡರು. ಡಕಾಯಿತ್ ಪಾತ್ರದಲ್ಲಿ ನಟಿಸೋಕೆ ದೀಪಿಕಾ ಪಡುಕೋಣೆಗೆ ಆಫರ್ ಹೋಯಿತು. ಇನ್ನೇನು ಸಿನಿಮಾ ಸೆಟ್ಟೇರಿತು ಎನ್ನುವಾಗ ಕೊರೊನಾ ಆರಂಭ ಆಯಿತು.

ಕೊರೊನಾ ಮುಗಿದ ಬಳಿಕ ಮತ್ತೆ ಪಾತ್ರವರ್ಗದ ಆಯ್ಕೆಯಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರತರಾದರು. ಕಿಯಾರಾ ಅಡ್ವಾಣಿ ಹಾಗೂ ನಯನತಾರಾ ಅವರನ್ನು ಚಿತ್ರ ತಂಡಕ್ಕೆ ಸೇರಿಸಿಕೊಳ್ಳೋಕೆ ಬನ್ಸಾಲಿ ಮುಂದಾದರು. ದಿನ ಕಳೆದಂತೆ ಚಿತ್ರದ ಬಜೆಟ್ ಹೆಚ್ಚುತ್ತಲೇ ಹೋಯಿತು. ಇದರಿಂದ ನಿರ್ಮಾಣ ಸಂಸ್ಥೆಯವರು ಚಿತ್ರವನ್ನು ಹೋಲ್ಡ್ ಮಾಡುವಂತೆ ಸೂಚಿಸಿದರು ಎನ್ನಲಾಗಿದೆ.

‘ಬೈಜು ಬವ್ರಾ’ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ ಮೀರಲಿದೆ ಎಂದು ಅಂದಾಜಿಸಲಾಯಿತು. ಈ ಕಾರಣಕ್ಕೆ ನಿರ್ಮಾಪಕರು ಈ ಬಗ್ಗೆ ಆಸಕ್ತಿ ತೋರಿಸಿಲ್ಲ. ‘ಬೈಜು ಬವ್ರಾ’ ಸಿನಿಮಾ ಮ್ಯೂಸಿಕಲ್ ರಿವೇಂಜ್ ಕಥೆಯನ್ನು ಹೊಂದಿದೆ ಎನ್ನಲಾಗಿದೆ. ನಿರ್ಮಾಣ ಸಂಸ್ಥೆಯ ಒಪ್ಪಿಗೆ ಸಿಗದ ಕಾರಣ ಸಂಜಯ್ ಲೀಲಾ ಬನ್ಸಾಲಿಗೆ ಸಿನಿಮಾದ ಕೆಲಸ ಮುಂದುವರಿಸಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಸ್ಮಶಾನವಾದ ಮದುವೆ ಮನೆ; ರಣವೀರ್ ಸಿಂಗ್ ಸಿನಿಮಾದಲ್ಲಿ ಬಳಕೆ ಆಗಿದ್ದ ಮನೆಯಲ್ಲಿ ಶೂಟೌಟ್​

ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಹಾಗೂ ಆಲಿಯಾ ಭಟ್ ಈ ಮೊದಲು ಸಂಜಯ್ ಲೀಲಾ ಬನ್ಸಾಲಿ ಜೊತೆ ಕೆಲಸ ಮಾಡಿದ್ದರು. ಬನ್ಸಾಲಿ ಮೇಲಿನ ಗೌರವಕ್ಕೆ ಅವರು ಕಡಿಮೆ ಸಂಭಾವನೆ ಪಡೆಯಲು ಒಪ್ಪಿದ್ದರು. ಆದರೂ ಚಿತ್ರದ ಬಜೆಟ್ 350 ಕೋಟಿ ರೂಪಾಯಿ ಮೀರಿದೆ. ಬಜೆಟ್​ನಲ್ಲಿ ರಾಜಿ ಮಾಡಿಕೊಳ್ಳಲು ಬನ್ಸಾಲಿ ರೆಡಿ ಇಲ್ಲ. ಇಷ್ಟು ದೊಡ್ಡ ಬಜೆಟ್​ನಲ್ಲಿ ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬರುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Thu, 18 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು