AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಿಡುಗಡೆಗೆ ಅನುಮತಿ ನೀಡಿದ ಹೈಕೋರ್ಟ್

ಕಾನೂನು ಹೋರಾಟದಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರತಂಡಕ್ಕೆ ಈಗ ರಿಲೀಫ್ ಸಿಕ್ಕಿದೆ. ಈ ಮೊದಲಿನ ಆದೇಶಕ್ಕೆ ತಡೆ ನೀಡಿ, ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಲವ್ ಜಿಹಾದ್ ಕುರಿತ ವಿವಾದಿತ ಕಥಾವಸ್ತು ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಿಡುಗಡೆಗೆ ಅನುಮತಿ ನೀಡಿದ ಹೈಕೋರ್ಟ್
The Kerala Story 2
ಮದನ್​ ಕುಮಾರ್​
|

Updated on: Feb 27, 2026 | 6:36 PM

Share

ಟ್ರೇಲರ್ ರಿಲೀಸ್ ಬೆನ್ನಲ್ಲೇ ಸಾಕಷ್ಟು ವಿವಾದ ಸೃಷ್ಟಿ ಮಾಡಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಆದರೆ ಈಗ ಚಿತ್ರತಂಡ ನಿಟ್ಟುಸಿರು ಬಿಡುವಂತಾಗಿದೆ. ಈ ಮೊದಲು ‘ದಿ ಕೇರಳ ಸ್ಟೋರಿ 2’ ಚಿತ್ರದ ಬಿಡುಗಡೆಗೆ ಕೇರಳ ಹೈಕೋರ್ಟ್ (Kerala High Court) ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಈಗ ನಿರ್ಮಾಪಕರು ಹೊಸ ಬಿಡುಗಡೆ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ವಿಪುಲ್ ಅಮೃತ್​ಲಾಲ್ ಶಾ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಮೊದಲು ಕೇರಳ ಹೈಕೋರ್ಟ್ ತಡೆ ನೀಡಿದ್ದನ್ನು ಪ್ರಶ್ನಿಸಿ ಕೂಡಲೇ ಮೇಲ್ಮನವಿ ಸಲ್ಲಿಸಲಾಗಿತ್ತು. ತುರ್ತು ಪ್ರಕರಣ ಎಂದು ಪರಿಗಣಿಸಿದ ವಿಭಾಗೀಯ ಪೀಠವು ಅದೇ ದಿನ ಸಂಜೆ 7.30ಕ್ಕೆ ವಿಚಾರಣೆ ನಡೆಸಿತು. ಇಂದು (ಫೆಬ್ರವರಿ 27) ಸಂಜೆ ತೀರ್ಪು ಪ್ರಕಟಿಸಿತು.

‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಲವ್ ಜಿಹಾದ್ ಕುರಿತ ಕಥೆಯನ್ನು ಹೇಳಲಾಗುತ್ತಿದೆ. ಆದರೆ ಚಿತ್ರದ ಟೀಸರ್​ನಲ್ಲಿ ತೋರಿಸಿದ ಅಂಶಗಳು ವಿವಾದಾತ್ಮಕವಾಗಿವೆ ಎಂದು ಅನೇಕರು ತಕರಾರು ತೆಗೆದಿದ್ದರು. ಆ ವಿವಾದವು ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಚಿತ್ರದ ಟೀಸರ್ ಅನ್ನು ತೆಗೆದು ಹಾಕುವಂತೆ ಸೂಚನೆ ನೀಡಿತ್ತು. ಬಳಿಕ ಸಿನಿಮಾದ ಬಿಡುಗಡೆಯನ್ನು ಮುಂದೂಡುವಂತೆ ಆದೇಶಿಸಿತ್ತು.

ಆದರೆ ಈಗ ‘ದಿ ಕೇರಳ ಸ್ಟೋರಿ 2’ ಚಿತ್ರತಂಡಕ್ಕೆ ಹೈಕೋರ್ಟ್​​ನ ಹೊಸ ಆದೇಶದಿಂದ ರಿಲೀಫ್ ಸಿಕ್ಕಂತೆ ಆಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿ ಕೂಡ ಈ ಸಿನಿಮಾ ಬಿಡುಗಡೆ ಆಗಲಿದೆ. ಗುರುವಾರ (ಫೆಬ್ರವರಿ 26) ಈ ಸಿನಿಮಾಗೆ ಅನೇಕ ಕಡೆಗಳಲ್ಲಿ ಬುಕಿಂಗ್ ಆಗಿತ್ತು. ಆದರೆ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರದರ್ಶನಗಳನ್ನು ರದ್ದು ಮಾಡಲಾಗಿತ್ತು.

ಇದನ್ನೂ ಓದಿ: ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್

ಇಷ್ಟೆಲ್ಲ ಸುದ್ದಿ ಆಗಿರುವ ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಅಂಥದ್ದೇನಿದೆ ಎಂದು ತಿಳಿಯುವ ಕೌತುಕ ಪ್ರೇಕ್ಷಕರಲ್ಲಿ ಹೆಚ್ಚಿದೆ. ಕೇರಳದಲ್ಲಿ ಈ ಚಿತ್ರಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಕಾಮಾಕ್ಯ ನಾರಾಯಣ್ ಸಿಂಗ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಉಲ್ಕಾ ಗುಪ್ತಾ, ಐಶ್ವರ್ಯಾ ಊಜಾ, ಅದಿತಿ ಭಾಟಿಯಾ ಅವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್