AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ತನ ಕ್ಯಾನ್ಸರ್​: ಅಭಿಮಾನಿಗಳ ಎದುರಲ್ಲೇ ತಲೆ ಬೋಳಿಸಿಕೊಂಡ ಖ್ಯಾತ ನಟಿ

ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ನಟಿಸಿದ ಹಿನಾ ಖಾನ್​ ಅವರು ‘ಬಿಗ್​ ಬಾಸ್​ 11’ ರನ್ನರ್​ ಅಪ್​ ಆಗಿಯೂ ಜನಪ್ರಿಯತೆ ಪಡೆದರು. ಭಾರಿ ಬೇಡಿಕೆ ಹೊಂದಿರುವ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವ ನಟಿಗೆ ಕೂದಲು ಉದುರುತ್ತಿದೆ. ಹಾಗಾಗಿ ಪೂರ್ತಿ ತಲೆ ಬೋಳಿಸಿಕೊಂಡಿದ್ದಾರೆ. ಆ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

ಸ್ತನ ಕ್ಯಾನ್ಸರ್​: ಅಭಿಮಾನಿಗಳ ಎದುರಲ್ಲೇ ತಲೆ ಬೋಳಿಸಿಕೊಂಡ ಖ್ಯಾತ ನಟಿ
ಹಿನಾ ಖಾನ್​
ಮದನ್​ ಕುಮಾರ್​
|

Updated on: Aug 02, 2024 | 3:33 PM

Share

ಕ್ಯಾನ್ಸರ್​ ಬಂದ ಬಳಿಕ ಬದುಕು ಬದಲಾಗುತ್ತದೆ. ಅನೇಕ ಸೆಲೆಬ್ರಿಟಿಗಳು ಕ್ಯಾನ್ಸರ್​ನಿಂದ ಬಳಲಿದ್ದಾರೆ. ಕೆಲವರು ಈ ಕಾಯಿಲೆ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಖ್ಯಾತ ನಟಿ ಹಿನಾ ಖಾನ್​ ಕೂಡ ಅದೇ ಪ್ರಕ್ರಿಯೆಯಲ್ಲಿದ್ದಾರೆ. ಇತ್ತೀಚೆಗೆ ಅವರು ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್​ ನೀಡಿದರು. ತಮಗೆ ಮೂರನೇ ಹಂತದ ಸ್ತನ ಕ್ಯಾನ್ಸರ್​ ಆಗಿದೆ ಎಂಬ ವಿಷಯವನ್ನು ಅವರು ತಿಳಿಸಿದರು. ಈಗ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಕೂದಲು ಉದುರುತ್ತಿದೆ. ಆ ಕಾರಣದಿಂದ ಸಂಪೂರ್ಣ ತಲೆ ಬೋಳಿಸಿಕೊಳ್ಳಲು ಹಿನಾ ಖಾನ್​ ನಿರ್ಧರಿಸಿದ್ದಾರೆ.

ತಮಗೆ ಕ್ಯಾನ್ಸರ್​ ಇದೆ ಎಂಬುದು ತಿಳಿದಾಗಿನಿಂದ ಹಿನಾ ಖಾನ್​ ಅವರು ಅಭಿಮಾನಿಗಳ ಜೊತೆ ಎಲ್ಲ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಕಾಯಿಲೆಗೆ ಅವರು ಹೆದರಿಲ್ಲ. ಬದಲಿಗೆ, ತುಂಬ ಧೈರ್ಯದಿಂದ ಇದನ್ನು ಎದುರಿಸಲು ಸಜ್ಜಾಗಿದ್ದಾರೆ. ಅದರ ಮೊದಲ ಹಂತ ಎಂಬಂತೆ ಅವರು ತಲೆ ಬೋಳಿಸಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಅವರು ವಿಡಿಯೋ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ

ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುವಾಗ ಪ್ರತಿ ದಿನ ಕೂದಲು ಉದುರಲು ಆರಂಭ ಆಗುತ್ತದೆ. ಪ್ರತಿ ಬಾರಿ ತಲೆಗೆ ಕೈ ಹಾಕಿದಾದ ಕೂದಲು ಉದುರುತ್ತದೆ. ಅದನ್ನು ನೋಡಿದಾಗಲೆಲ್ಲ ಕಿರಿಕಿರಿ ಆಗುವುದು ಸಹಜ. ಅದರಲ್ಲೂ ಮಹಿಳೆಯರಿಗೆ ಈ ಪರಿ ಕೂದಲು ಉದುರಿದರೆ ಹೆಚ್ಚು ಬೇಸರ ಆಗುತ್ತದೆ. ಇದರಿಂದ ಒಮ್ಮೆಲೆ ಮುಕ್ತಿ ಪಡೆಯಲು ಹಿನಾ ಖಾನ್​ ಅವರು ಪೂರ್ತಿ ತಲೆ ಬೋಳಿಸಿಕೊಂಡಿದ್ದಾರೆ. ಅಗತ್ಯ ಇರುವಾಗ ತಾವು ವಿಗ್​ ಧರಿಸುವುದಾಗಿ ಅವರು ತಿಳಿಸಿದ್ದಾರೆ.

ಹಿನಾ ಖಾನ್​ ಹಂಚಿಕೊಂಡ ವಿಡಿಯೋ:

ತಾವು ತಲೆ ಬೋಳಿಸಿಕೊಂಡ ವಿಡಿಯೋವನ್ನು ಹಿನಾ ಖಾನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೈಹಿಕ ಅನಾರೋಗ್ಯವನ್ನು ಎದುರಿಸಬೇಕು ಎಂದರೆ ಮಾನಸಿಕವಾಗಿ ಗಟ್ಟಿಯಾಗಿ ಇರಬೇಕು ಎಂದು ಅವರು ಹೇಳಿದ್ದಾರೆ. ಅಲ್ಲದೇ, ತಮ್ಮ ಅಭಿಮಾನಿಗಳಿಗೂ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ‘ನೀವು ಬೇಗ ಗುಣಮುಖರಾಗಬೇಕು’ ಎಂದು ಹಾರೈಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ