AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Raju Srivastava: ದಕ್ಷಿಣ ದೆಹಲಿಯಲ್ಲಿರುವ ಜಿಮ್​ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಅವರಿಗೆ ಏನೋ ಸರಿ ಇಲ್ಲ ಎನಿಸಿದೆ. ಆ ಸಂದರ್ಭದಲ್ಲೇ ರಾಜು ನೆಲಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ರಾಜು
TV9 Web
| Edited By: |

Updated on:Aug 10, 2022 | 3:42 PM

Share

ಹಿಂದಿ ಚಿತ್ರರಂಗದಲ್ಲಿ ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರಗಳ ಮೂಲಕ ಗಮನ ಸೆಳೆದ ನಟ ರಾಜು ಶ್ರೀವಾತ್ಸವ (Raju Srivastava) ಅವರಿಗೆ ಇಂದು (ಆಗಸ್ಟ್ 10) ಹೃದಯಾಘಾತ ಆಗಿದೆ. ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಸಣ್ಣ ಪ್ರಮಾಣದಲ್ಲಿ ಹೃದಯಾಘಾತ ಉಂಟಾಗಿದೆ. ಅವರನ್ನು ದೆಹಲಿಯ ಎಐಐಎಂಎಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಚೇತರಿಕೆ ಕಾಣುತ್ತಿದ್ದಾರೆ ಎಂದು ತಂಡದವರು ತಿಳಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜು ಫ್ಯಾನ್ಸ್ ವಲಯದಲ್ಲಿ ಆತಂಕ ಮನೆ ಮಾಡಿದೆ.

‘ರಾಜು ಅವರಿಗೆ ಹೃದಯಾಘಾತ ಆಗಿರುವುದು ನಿಜ. ಜಿಮ್​ನಲ್ಲಿ ಅವರು ಕಸರತ್ತು ನಡೆಸುತ್ತಿದ್ದರು. ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಯಾವುದೇ ಆತಂಕ ಬೇಡ ಎಂದು’ ಅವರ ತಂಡದವರು ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ.

ದಕ್ಷಿಣ ದೆಹಲಿಯಲ್ಲಿರುವ ಜಿಮ್​ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಅವರಿಗೆ ಏನೋ ಸರಿ ಇಲ್ಲ ಎನಿಸಿದೆ. ಆ ಸಂದರ್ಭದಲ್ಲೇ ರಾಜು ನೆಲಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಇತ್ತೀಚೆಗೆ ಹಲವು ನಟರಿಗೆ ಹೃದಯಾಘಾತವಾಗಿದೆ. ಇದೇ ಸಂದರ್ಭದಲ್ಲಿ ರಾಜು ಅವರಿಗೂ ಹಾರ್ಟ್​ ಅಟ್ಯಾಕ್ ಆಗಿದ್ದು ಸಾಕಷ್ಟು ಆತಂಕ ಮೂಡಿಸಿದೆ.

ಇದನ್ನೂ ಓದಿ
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Image
‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ

ಇದನ್ನೂ ಓದಿ: ‘ನಾನು ತಳ್ಳಿದ್ರೆ 25 ಅಡಿ ದೂರ ಹೋಗಿ ಬೀಳ್ತೀಯಾ’; ಆವಾಜ್ ಹಾಕಲು ಬಂದ ಉದಯ್​ಗೆ ಗುರೂಜಿ ಎಚ್ಚರಿಕೆ

ಹಿಂದಿ ಚಿತ್ರರಂಗದಿಂದ ರಾಜು ಶ್ರೀವಾತ್ಸವ್​ ಬಣ್ಣದ ಬದುಕು ಆರಂಭಿಸಿದರು. ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್​’, ‘ಬಾಂಬೆ ಟು ಗೋವಾ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಂತರ ಸ್ಟ್ಯಾಂಡಪ್​ ಕಾಮಿಡಿಯನ್ ಆಗಿಯೂ ಗುರುತಿಸಿಕೊಂಡರು. ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್​’ನಲ್ಲಿ ಎರಡನೇ ರನ್ನರ್​ ಅಪ್ ಆದರು. ಇನ್ನು, ರಿಯಾಲಿಟಿ ಶೋನಲ್ಲೂ ಶ್ರೀವಾತ್ಸವ್ ಭಾಗವಹಿಸಿದ್ದರು. ಹಿಂದಿ ಬಿಗ್ ಬಾಸ್​ನ ಮೂರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು. ‘ಕಾಮಿಡಿ ಕಾ ಮಹಾ ಮುಕ್ಬಾಲ್​’, ‘ನಾಚ್ ಬಲಿಯೇ’ ರಿಯಾಲಿಟಿ ಶೋನ ಆರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು.

Published On - 3:30 pm, Wed, 10 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ