ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Raju Srivastava: ದಕ್ಷಿಣ ದೆಹಲಿಯಲ್ಲಿರುವ ಜಿಮ್​ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಅವರಿಗೆ ಏನೋ ಸರಿ ಇಲ್ಲ ಎನಿಸಿದೆ. ಆ ಸಂದರ್ಭದಲ್ಲೇ ರಾಜು ನೆಲಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ರಾಜು
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 10, 2022 | 3:42 PM

ಹಿಂದಿ ಚಿತ್ರರಂಗದಲ್ಲಿ ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರಗಳ ಮೂಲಕ ಗಮನ ಸೆಳೆದ ನಟ ರಾಜು ಶ್ರೀವಾತ್ಸವ (Raju Srivastava) ಅವರಿಗೆ ಇಂದು (ಆಗಸ್ಟ್ 10) ಹೃದಯಾಘಾತ ಆಗಿದೆ. ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಸಣ್ಣ ಪ್ರಮಾಣದಲ್ಲಿ ಹೃದಯಾಘಾತ ಉಂಟಾಗಿದೆ. ಅವರನ್ನು ದೆಹಲಿಯ ಎಐಐಎಂಎಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಚೇತರಿಕೆ ಕಾಣುತ್ತಿದ್ದಾರೆ ಎಂದು ತಂಡದವರು ತಿಳಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜು ಫ್ಯಾನ್ಸ್ ವಲಯದಲ್ಲಿ ಆತಂಕ ಮನೆ ಮಾಡಿದೆ.

‘ರಾಜು ಅವರಿಗೆ ಹೃದಯಾಘಾತ ಆಗಿರುವುದು ನಿಜ. ಜಿಮ್​ನಲ್ಲಿ ಅವರು ಕಸರತ್ತು ನಡೆಸುತ್ತಿದ್ದರು. ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಯಾವುದೇ ಆತಂಕ ಬೇಡ ಎಂದು’ ಅವರ ತಂಡದವರು ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ.

ದಕ್ಷಿಣ ದೆಹಲಿಯಲ್ಲಿರುವ ಜಿಮ್​ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಅವರಿಗೆ ಏನೋ ಸರಿ ಇಲ್ಲ ಎನಿಸಿದೆ. ಆ ಸಂದರ್ಭದಲ್ಲೇ ರಾಜು ನೆಲಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಇತ್ತೀಚೆಗೆ ಹಲವು ನಟರಿಗೆ ಹೃದಯಾಘಾತವಾಗಿದೆ. ಇದೇ ಸಂದರ್ಭದಲ್ಲಿ ರಾಜು ಅವರಿಗೂ ಹಾರ್ಟ್​ ಅಟ್ಯಾಕ್ ಆಗಿದ್ದು ಸಾಕಷ್ಟು ಆತಂಕ ಮೂಡಿಸಿದೆ.

ಇದನ್ನೂ ಓದಿ
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Image
‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ

ಇದನ್ನೂ ಓದಿ: ‘ನಾನು ತಳ್ಳಿದ್ರೆ 25 ಅಡಿ ದೂರ ಹೋಗಿ ಬೀಳ್ತೀಯಾ’; ಆವಾಜ್ ಹಾಕಲು ಬಂದ ಉದಯ್​ಗೆ ಗುರೂಜಿ ಎಚ್ಚರಿಕೆ

ಹಿಂದಿ ಚಿತ್ರರಂಗದಿಂದ ರಾಜು ಶ್ರೀವಾತ್ಸವ್​ ಬಣ್ಣದ ಬದುಕು ಆರಂಭಿಸಿದರು. ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್​’, ‘ಬಾಂಬೆ ಟು ಗೋವಾ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಂತರ ಸ್ಟ್ಯಾಂಡಪ್​ ಕಾಮಿಡಿಯನ್ ಆಗಿಯೂ ಗುರುತಿಸಿಕೊಂಡರು. ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್​’ನಲ್ಲಿ ಎರಡನೇ ರನ್ನರ್​ ಅಪ್ ಆದರು. ಇನ್ನು, ರಿಯಾಲಿಟಿ ಶೋನಲ್ಲೂ ಶ್ರೀವಾತ್ಸವ್ ಭಾಗವಹಿಸಿದ್ದರು. ಹಿಂದಿ ಬಿಗ್ ಬಾಸ್​ನ ಮೂರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು. ‘ಕಾಮಿಡಿ ಕಾ ಮಹಾ ಮುಕ್ಬಾಲ್​’, ‘ನಾಚ್ ಬಲಿಯೇ’ ರಿಯಾಲಿಟಿ ಶೋನ ಆರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು.

Published On - 3:30 pm, Wed, 10 August 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ