AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ

Drishyam 3 release date: ಮಲಯಾಳಂನ ‘ದೃಶ್ಯಂ’ ಸಿನಿಮಾ ಸರಣಿಯ ರೀಮೇಕ್ ಅನ್ನು ಹಿಂದಿಯಲ್ಲಿ ಅಜಯ್ ದೇವಗನ್ ಮಾಡುತ್ತಾ ಬಂದಿದ್ದಾರೆ. ಇದೀಗ ‘ದೃಶ್ಯಂ’ ಸಿನಿಮಾದ ಮೂರನೇ ಭಾಗ ಬಿಡುಗಡೆ ಆಗುತ್ತಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇದೇ ಸಿನಿಮಾ ಹಿಂದಿಗೂ ರೀಮೇಕ್ ಆಗುತ್ತಿದ್ದು, ಆದರೆ ಹಿಂದಿಯ ‘ದೃಶ್ಯಂ 3’, ಮಲಯಾಳಂನ ‘ದೃಶ್ಯಂ 3’ ಸಿನಿಮಾಕ್ಕಿಂತಲೂ ಬಹಳ ಭಿನ್ನವಾಗಿರಲಿದೆ ಎಂದು ಚಿತ್ರತಂಡ ಹೇಳಿದೆ.

ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ
Drishyam 3
ಮಂಜುನಾಥ ಸಿ.
|

Updated on: May 12, 2026 | 5:14 PM

Share

ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ‘ದೃಶ್ಯಂ’. ಮೋಹನ್​​ಲಾಲ್ (Mohanlal) ನಟಿಸಿ ಜೀತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಭಾರತದ ಬೇರೆ ಬೇರೆ ಭಾಷೆಗಳು ಸೇರಿದಂತೆ ಹಲವು ವಿದೇಶಿ ಭಾಷೆಗಳಲ್ಲಿಯೂ ರೀಮೇಕ್ ಆಗಿ ಬಹುತೇಕ ಎಲ್ಲೆಡೆ ಸೂಪರ್ ಹಿಟ್ ಆಯ್ತು. ಬಳಿಕ ‘ದೃಶ್ಯಂ 2’ ಸಿನಿಮಾ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಈ ಸಿನಿಮಾದ ರೀಮೇಕ್ ಅನ್ನು ಹಿಂದಿಯಲ್ಲಿ ಅಜಯ್ ದೇವಗನ್ ಮಾಡಿದ್ದರು. ಇದೀಗ ‘ದೃಶ್ಯಂ’ ಸಿನಿಮಾದ ಮೂರನೇ ಭಾಗ ಬಿಡುಗಡೆ ಆಗುತ್ತಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇದೇ ಸಿನಿಮಾ ಹಿಂದಿಗೂ ರೀಮೇಕ್ ಆಗುತ್ತಿದ್ದು, ಆದರೆ ಹಿಂದಿಯ ‘ದೃಶ್ಯಂ 3’, ಮಲಯಾಳಂನ ‘ದೃಶ್ಯಂ 3’ ಸಿನಿಮಾಕ್ಕಿಂತಲೂ ಬಹಳ ಭಿನ್ನವಾಗಿರಲಿದೆ ಎಂದು ಚಿತ್ರತಂಡ ಹೇಳಿದೆ.

ಮಲಯಾಳಂ ರೀತಿಯೇ ಹಿಂದಿಯಲ್ಲಿಯೂ ಸಹ ‘ದೃಶ್ಯಂ’ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಮಲಯಾಳಂನಲ್ಲಿ ಮೋಹನ್​​ಲಾಲ್ ನಟಿಸಿದ್ದ ಪಾತ್ರಗಳಲ್ಲಿ ಹಿಂದಿಯಲ್ಲಿ ಅಜಯ್ ದೇವಗನ್ ನಟಿಸುತ್ತಾ ಬಂದಿದ್ದಾರೆ. ಮೊದಲ ಎರಡು ಸಿನಿಮಾಗಳನ್ನು ಮಲಯಾಳಂನಲ್ಲಿ ಇರುವಂತೆಯೇ ಯಥಾವತ್ತು ಕಾಪಿ ಮಾಡಿದ್ದ ಹಿಂದಿ ತಂಡ, ಈಗ ‘ದೃಶ್ಯಂ 3’ ಅನ್ನು ಭಿನ್ನವಾಗಿ ಪ್ರೆಸೆಂಟ್ ಮಾಡಲಿದ್ದಾರೆ. ಇದಕ್ಕೆ ಕಾರಣವೂ ಇದೆ.

ಮಲಯಾಳಂ ನಿರ್ದೇಶಕ ಮತ್ತು ‘ದೃಶ್ಯಂ’ ಸರಣಿಯ ಸೃಷ್ಟಿಕರ್ತ ಜೀತು ಜೋಸೆಫ್ ಹೇಳಿರುವಂತೆ, ‘ದೃಶ್ಯಂ 3’ ಕೌಟುಂಬಿಕ ಸಿನಿಮಾ ಆಗಿರಲಿದೆ. ಅಂದರೆ ಇದರಲ್ಲಿ ಸಸ್ಪೆನ್ಸ್ ಭಾಗ ತುಸು ಕಡಿಮೆ ಇರಲಿದೆ. ಆ ಒಂದು ಕೊಲೆಯಿಂದ ನಾಯಕ ಜಾರ್ಜ್ ಕುಟ್ಟಿಗೆ ಆದ ಸಮಸ್ಯೆಗಳು, ಅವನ ಕುಟುಂಬಕ್ಕೆ ಆದ ಸಮಸ್ಯೆಗಳ ಮೇಲೆ ಈ ಸಿನಿಮಾ ಗಮನ ಹರಿಸಲಿದೆ. ಆ ಮೂಲಕ ಈ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಗಿಂತಲೂ ಹೆಚ್ಚಾಗಿ ಎಮೋಷನಲ್ ಡ್ರಾಮಾ ಆಗಿರಲಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಹಾದಿ ಹಿಡಿದ ಮೋಹನ್​​ಲಾಲ್ ನಟನೆಯ ‘ದೃಶ್ಯಂ 3’

ಆದರೆ ಇದು ಹಿಂದಿಯವರಿಗೆ ಬೇಕಾಗಿಲ್ಲ. ಅವರಿಗೆ ನಾಯಕನನ್ನು ವೈಭವೀಕರಿಸುವ, ಸಸ್ಪೆನ್ಸ್ ಥ್ರಿಲ್ಲರ್ ಕಟ್ಟಿಕೊಡುವ ಬಯಕೆ ಇದ್ದು, ಅದಕ್ಕೆ ತಕ್ಕಂತೆ ಮತ್ತು ಅಜಯ್ ದೇವಗನ್ ಅವರ ಮಾಸ್ ಇಮೇಜಿಗೆ ತಕ್ಕಂತೆ ಚಿತ್ರಕತೆಯನ್ನು ತಿದ್ದಿದ್ದಾರಂತೆ. ಸಿನಿಮಾದ ಅಂತ್ಯದಲ್ಲಿ ನಾಯಕ (ಹಿಂದಿಯಲ್ಲಿ ವಿಜಯ್ ಸಾಳಗಾಂವ್ಕರ್) ತನ್ನ ಕುಟುಂಬವನ್ನು ಬುದ್ಧಿವಂತಿಕೆಯಿಂದ ಕಾಪಾಡುವ ಕತೆ ಇರಲಿದೆಯಂತೆ. ಆದರೆ ಮಲಯಾಳಂ ‘ದೃಶ್ಯಂ 3’ ನಲ್ಲಿ ಭಿನ್ನವಾದ ಕತೆ ಇರಲಿದೆ.

‘ದೃಶ್ಯಂ 3’ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಸಿನಿಮಾ ಇದೇ ತಿಂಗಳು 21 ರಂದು ಬಿಡುಗಡೆ ಆಗಲಿದೆ. ಹಿಂದಿಯ ‘ದೃಶ್ಯಂ 3’ ಸಿನಿಮಾವನ್ನು ಅದೇ ಸಮಯಕ್ಕೆ ಬಿಡುಗಡೆ ಮಾಡುವ ಉದ್ದೇಶ ನಿರ್ಮಾಪಕರಿಗೆ ಇತ್ತು. ಆದರೆ ಮಲಯಾಳಂ ತಂಡದವರ ಜೊತೆಗಿನ ಭಿನ್ನಾಭಿಪ್ರಾಯ ಮತ್ತು ಒಪ್ಪಂದದ ಬಳಿಕ ಇದೀಗ ಹಿಂದಿ ಸಿನಿಮಾವನ್ನು ಅಕ್ಟೋಬರ್​ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು