AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶನ ಮಾಡುವಂತೆ ಭಟ್ಕಳದಲ್ಲಿ ಚಿತ್ರಮಂದಿರದ ಮುಂದೆ ಪ್ರತಿಭಟನೆ

Bhatkal: ಭಟ್ಕಳ ನಗರದಲ್ಲಿ ಭಾನುವಾರ ಚಿತ್ರಮಂದಿರವೊಂದರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪ್ರದರ್ಶನ ನಡೆಸುವಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಚಿತ್ರದ ಪ್ರದರ್ಶನ ಇನ್ನೂ ಆರಂಭವಾಗಿಲ್ಲ. ಈ ಕುರಿತ ವರದಿ ಇಲ್ಲಿದೆ.

The Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶನ ಮಾಡುವಂತೆ ಭಟ್ಕಳದಲ್ಲಿ ಚಿತ್ರಮಂದಿರದ ಮುಂದೆ ಪ್ರತಿಭಟನೆ
‘ದಿ ಕಾಶ್ಮೀರ್ ಫೈಲ್ಸ್’ ಪೋಸ್ಟರ್ (ಎಡ), ಚಿತ್ರಮಂದಿರದ ಮುಂದೆ ಪ್ರತಿಭಟನೆ (ಬಲ)
TV9 Web
| Edited By: |

Updated on: Mar 15, 2022 | 12:46 PM

Share

‘ದಿ ಕಾಶ್ಮೀರ ಫೈಲ್ಸ್’ (The Kashmir Files) ಚಿತ್ರವನ್ನು ಪ್ರದರ್ಶನ ಮಾಡುವಂತೆ ಹಿಂದೂ ಪರ ಸಂಘಟನೆಗಳಿಂದ ಪುಷ್ಪಾಂಜಲಿ ಚಿತ್ರಮಂದಿರದ ಮುಂದೆ ಪ್ರತಿಭಟನೆ ಮಾಡಿದ ಘಟನೆ, ಉತ್ತರ ಕನ್ನಡ ಜಿಲ್ಲೆ ಭಟ್ಕಳ ನಗರದಲ್ಲಿ ಭಾನುವಾರ (ಮಾ.13) ನಡೆದಿದೆ. ಚಿತ್ರಮಂದಿರಲ್ಲಿ ‘ರಾಧೆ ಶ್ಯಾಮ್’ ಚಿತ್ರ ಪ್ರದರ್ಶನ ಗೊಳ್ಳುತ್ತಿದ್ದು ಅದನ್ನ ಸ್ಥಗಿತಗೊಳಿಸಿ, ಕಾಶ್ಮೀರಿ ಪಂಡಿತರ ನೈಜ ಚಿತ್ರಕಥೆ ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಪ್ರದರ್ಶನಗೊಳಿಸಬೇಕು ಎಂದು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿ ಹಿಂದೂ ಪರ ಸಂಘನೆಗಳು ಒತ್ತಾಯ ಮಾಡಿವೆ. ‘‘ಇತಿಹಾಸ ಮುಚ್ಚಿಟ್ಟಂತಹ ಕಾಶ್ಮೀರಿ ಪಂಡಿತರ ನೈಜ ಚಿತ್ರಕಥೆಯನ್ನು ಅನಾವರಣಗೊಳಿಸಲಾಗಿದೆ. ಈ ಚಿತ್ರವನ್ನ ಪ್ರದರ್ಶನ ಮಾಡಲೇಬೇಕು, ಇಲ್ಲವಾದಲ್ಲಿ ಮುಂದಿನ ಪರಿಣಾಮಕ್ಕೆ ನಾವು ಜವಾಬ್ದಾರರಲ್ಲ’’ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

ಮಧ್ಯಾಹ್ನ 2.30 ಕ್ಕೆ  ಪ್ರದರ್ಶನಗೊಳ್ಳುತ್ತಿದ್ದ  ‘ರಾಧೆ ಶ್ಯಾಮ್’ ಸ್ಥಗಿತಗೊಳಿಸಿ ಹಿಂದೂ ಪಂಡಿತರ ನೈಜ ಕತೆಯನ್ನು ಆಧಾರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶಿಸುವಂತೆ ಹಿಂದೂ ಕಾರ್ಯಕರ್ತರು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿದ್ದರು. ನಂತರ ಕಾರ್ಯಕರ್ತರು ಹಾಗೂ ಚಿತ್ರಮಂದಿರದ ಮೇಲ್ವಿಚಾರಕರ  ನಡುವೆ ಮಾತುಕತೆ ನಡೆದು ಕೊನೆಗೆ  ರಾತ್ರಿ 8.45 ರ ಚಿತ್ರ ಪ್ರದರ್ಶನಕ್ಕೆ ‘ದಿ ಕಶ್ಮೀರಿ ಫೈಲ್ಸ್’  ಚಿತ್ರವನ್ನು ಪ್ರದರ್ಶಿಸಲಾಗುವುದೆಂದು ಭರವಸೆಯನ್ನು ನೀಡಲಾಗಿತ್ತು.

ಮಾಜಿ ಸೈನಿಕ ಶ್ರೀಕಾಂತ ನಾಯ್ಕ ಮಾತನಾಡಿ, ‘‘ಇತಿಹಾಸದಲ್ಲಿ ಮುಚ್ಚಿಟ್ಟಂತಹ  ಕಾಶ್ಮೀರಿ ಪಂಡಿತರ ನೈಜ ಚಿತ್ರ ಕತೆ ಆಧಾರಿತ ಚಿತ್ರವನ್ನು ದೇಶ ಭಕ್ತರಿಗೆ ಅನಾವರಣ ಮಾಡಿದ್ದಾರೆ. ಆದರೆ ಕೆಲವೊಂದು ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನ ನಡೆಸದೆ ಚಿತ್ರ ಮಂದಿರ ಹೌಸ್ ಫುಲ್ ಎಂಬ ಬೋರ್ಡ ಹಾಕುವುದರ ಮೂಲಕ ಷಡ್ಯಂತರ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಭಟ್ಕಳದ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ  ‘ದ ಕಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶನಗೊಳ್ಳದಿದ್ದರೆ ಮುಂದೆ ಆಗುವ ಹೊಣೆಗೆ ಅವರೇ ಹೊಣೆಗಾರರಾಗುತ್ತಾರೆ’’ ಎಂದರು.

ಈ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರಾದ ಶ್ರೀಕಾಂತ ನಾಯ್ಕ, ಶ್ರೀನಿವಾಸ ಹನುಮಾನಗರ, ರಾಜೇಶ, ಪಾಂಡುರಂಗ ನಾಯ್ಕ , ಕೃಷ್ಣ ಕಂಚುಗಾರ, ನಾಗೇಶ ನಾಯ್ಕ ಚೌಥನಿ ದಿನೇಶ ಮೊಗೇರ ಜಾಲಿ, ಮೋಹನ ನಾಯ್ಕ, ಅರುಣ ನಾಯ್ಕ, ವಿವೇಕ ನಾಯ್ಕ ಜಾಲಿ, ಬಾಬು ಕಾರಗದ್ದೆ, ವಸಂತ ಜಂಬೂರ್ ಮಠ  ಮುಂತಾದವರು ಉಪಸ್ಥಿತರಿದ್ದರು.

ತಾಂತ್ರಿಕ ಕಾರಣದಿಂದ ಭಟ್ಕಳದಲ್ಲಿ ಇನ್ನೂ ಪ್ರದರ್ಶನ ಆರಂಭಿಸಿದ ‘ದಿ ಕಾಶ್ಮೀರ್​ ಫೈಲ್ಸ್’:

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪ್ರದರ್ಶನಕ್ಕೆ ಕಾರ್ಯಕರ್ತರು ಆಗ್ರಹಿಸಿ ಎರಡು ದಿನ ಕಳೆದಿದ್ದು, ಚಿತ್ರದ ಪ್ರದರ್ಶನ ಇನ್ನೂ ಆರಂಭವಾಗಿಲ್ಲ. ‘ದಿ ಕಾಶ್ಮೀರ್ ಫೈಲ್ಸ್’ ಹಿಂದಿ ಚಿತ್ರವಾಗಿದ್ದು, ಕರ್ನಾಟಕದ ನಗರ ಭಾಗದ ಮಲ್ಟಿಪ್ಲೆಕ್ಸ್​ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಪ್ರಾದೇಶಿಕ ಸ್ಥಳಗಳ ಸಿಂಗಲ್ ಸ್ಕ್ರೀನ್​ಗಳಲ್ಲಿ ತೆರೆ ಕಾಣಲು ತುಸು ಸಮಯ ಬೇಕಾಗಬಹುದು ಎನ್ನಲಾಗಿದ್ದು, ಚಿತ್ರ ಲಭ್ಯವಾದ ನಂತರ ಪ್ರಸಾರ ಮಾಡುವುದಾಗಿ ತಿಳಿಸಲಾಗಿದೆ. ಭಟ್ಕಳದ ಚಿತ್ರಮಂದಿರದವರು ಕೂಡ ಇದೇ ಕಾರಣದಿಂದ ಚಿತ್ರದ ಪ್ರದರ್ಶನವನ್ನು ಆರಂಭಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆ ಸಂಬಂಧ ವಿಧಾನ ಪರಿಷತ್​ನಲ್ಲಿ ಗದ್ದಲ; ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಏಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್