AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಸ್ಟಾರ್ ಹೀರೋ ಜೊತೆ ಸಿನಿಮಾ ಘೋಷಿಸಿದ ಹೊಂಬಾಳೆ

Hombale Films: ‘ಕೆಜಿಎಫ್’ ‘ಕಾಂತಾರ’ ಸಿನಿಮಾಗಳ ಮೂಲಕ ಕನ್ನಡ ಸಿನಿಮಾಗಳನ್ನು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಹೊಂಬಾಳೆ ಫಿಲಮ್ಸ್ ಈಗ ಪರಭಾಷೆಗಳಿಗೂ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳ ಬಳಿಕ ಇದೀಗ ಬಾಲಿವುಡ್​ಗೂ ಕಾಲಿಟ್ಟಿದ್ದು, ಸ್ಟಾರ್ ಹೀರೋ ಜೊತೆಗೆ ಸಿನಿಮಾ ಘೋಷಣೆ ಮಾಡಿದೆ.

ಬಾಲಿವುಡ್ ಸ್ಟಾರ್ ಹೀರೋ ಜೊತೆ ಸಿನಿಮಾ ಘೋಷಿಸಿದ ಹೊಂಬಾಳೆ
Hombale Films
ಮಂಜುನಾಥ ಸಿ.
|

Updated on: May 28, 2025 | 7:42 PM

Share

ಹೊಂಬಾಳೆ ಫಿಲಮ್ಸ್, ಕನ್ನಡ ಸಿನಿಮಾಗಳ (Kannada Cinema) ಶಕ್ತಿಯನ್ನು ದೇಶಕ್ಕೆ ಪರಿಚಯಿಸಿದ ನಿರ್ಮಾಣ ಸಂಸ್ಥೆ. ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಇಲ್ಲ. ಸೀಮಿತ ಬಜೆಟ್​ನಲ್ಲಿ ಮಾತ್ರವೇ ಸಿನಿಮಾ ಮಾಡಬೇಕು ಎಂಬ ಮಾತುಗಳು ಚಾಲ್ತಿಯಲ್ಲಿದ್ದ ಸಮಯದಲ್ಲಿ, ಕನ್ನಡ ಸಿನಿಮಾಗಳ ಮೇಲೆ ಊಹೆಗೂ ಮೀರಿದ ಬಜೆಟ್ ತೊಡಗಿಸಿ ಸಿನಿಮಾಗಳನ್ನು ನಿರ್ಮಿಸಿದ್ದು ಮಾತ್ರವೇ ಅಲ್ಲದೆ, ಕನ್ನಡ ಸಿನಿಮಾಗಳನ್ನು ದೇಶದೆಲ್ಲೆಡೆ ಪ್ರದರ್ಶಿಸಿ, ಕನ್ನಡ ಚಿತ್ರರಂಗದ ಶಕ್ತಿಯನ್ನು ದೇಶಕ್ಕೆ ಸಾರಿದ ನಿರ್ಮಾಣ ಸಂಸ್ಥೆ ಇದು. ವರ್ಷದಿಂದ ವರ್ಷಕ್ಕೆ ತನ್ನ ವ್ಯಾಪ್ತಿಯನ್ನು ವಿಸ್ತಾರಗೊಳಿಸುತ್ತಲೇ ಸಾಗುತ್ತಿರುವ ಹೊಂಬಾಳೆ ಫಿಲಮ್ಸ್, ಮಲಯಾಳಂ, ತೆಲುಗು ಮತ್ತು ತಮಿಳಿನ ಬಳಿಕ ಇದೀಗ ಬಾಲಿವುಡ್​ಗೆ ಕಾಲಿರಿಸಿದೆ.

ಹೊಂಬಾಳೆ ಫಿಲಮ್ಸ್ ಬಾಲಿವುಡ್ ಸಿನಿಮಾ ನಿರ್ಮಾಣ ಮಾಡಲಿದೆ ಎಂಬ ಸುದ್ದಿ ಹಳೆಯದ್ದೇ, ಆದರೆ ಯಾವ ಹೀರೋ ಜೊತೆಗೆ ಸಿನಿಮಾ ನಿರ್ಮಿಸಲಿದೆ ಎಂಬುದು ಸ್ಪಷ್ಟವಾಗಿರಲಿಲ್ಲ. ಇದೀಗ ಹೊಂಬಾಳೆ ತನ್ನ ಮೊದಲ ಹಿಂದಿ ಪ್ಯಾನ್ ಇಂಡಿಯಾ ಸಿನಿಮಾದ ಘೋಷಣೆ ಮಾಡಿದ್ದು, ಬಾಲಿವುಡ್​ನ ಸ್ಟಾರ್ ನಟನ ಜೊತೆಗೆ ಸಿನಿಮಾ ಮಾಡಲು ಮುಂದಾಗಿದೆ.

ಅಕ್ಷಯ್ ಕುಮಾರ್, ಶಾರುಖ್ ಖಾನ್ ಅವರ ಹೆಸರುಗಳು ಈ ಮೊದಲು ಕೇಳಿ ಬಂದಿದ್ದವು. ಆದರೆ ಇದೀಗ ಆಶ್ಚರ್ಯಕರ ರೀತಿಯಲ್ಲಿ ಹೃತಿಕ್ ರೋಷನ್ ಜೊತೆಗೆ ಸಿನಿಮಾ ಘೋಷಣೆ ಮಾಡಿದೆ ಹೊಂಬಾಳೆ. ಸಿನಿಮಾದ ನಿರ್ದೇಶಕ ಹಾಗೂ ಇತರೆ ತಂತ್ರಜ್ಞರು ಮತ್ತು ಪಾತ್ರವರ್ಗವನ್ನು ಇನ್ನಷ್ಟೆ ಘೋಷಣೆ ಮಾಡಬೇಕಿದೆ. ಸಿನಿಮಾದ ಕತೆ ಅಂತಿಮಗೊಂಡಿದ್ದು, ಚಿತ್ರಕತೆ ಹಂತದಲ್ಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಕೆಜಿಎಫ್ 3’ ಬಗ್ಗೆ ಸುಳಿವು ಕೊಟ್ಟ ಹೊಂಬಾಳೆ ಫಿಲ್ಮ್ಸ್: ಯಶ್ ಅಭಿಮಾನಿಗಳಿಗೆ ಖುಷಿ

‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಇದೀಗ ಹೃತಿಕ್ ರೋಷನ್ ಅವರ ಸಿನಿಮಾ ಸೇರಿದಂತೆ ಒಟ್ಟಿಗೆ ಎಂಟು ಸಿನಿಮಾಗಳ ಮೇಲೆ ಬಂಡವಾಳ ಹೂಡಿದಂತಾಗಿದೆ. ‘ಕಾಂತಾರ ಚಾಪ್ಟರ್ 1’, ಅನಿಮೇಷನ್ ಸಿನಿಮಾ ‘ಮಹಾವತಾರ ನರಸಿಂಹ’, ರಕ್ಷಿತ್ ಶೆಟ್ಟಿಯ ‘ರಿಚರ್ಡ್ ಆಂಟೊನಿ’, ಪ್ರಭಾಸ್ ಜೊತೆಗೆ ಒಟ್ಟಿಗೆ ಮೂರು ಸಿನಿಮಾ ಸಹಿ ಮಾಡಿದೆ. ಮಲಯಾಳಂನ ‘ಟೈಸನ್’ ಸಿನಿಮಾ. ಇದೀಗ ಬಾಲಿವುಡ್ ಸಿನಿಮಾದ ಘೋಷಣೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು